ಕರಡಿಗೆ ವಿದ್ಯುತ್ ಸ್ಪರ್ಶಿಸಿ ಅದರ ಭಾಗಗಳನ್ನು ಹೊಂದಿದ್ದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯ ಆತ್ಮಕೂರು ಅರಣ್ಯ ವಿಭಾಗದ ಅರಣ್ಯಾಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಎನ್ ಯೇಸುರತ್ನಂ, ಎಂ ಶಿಕಾಮಣಿ, ವಿ ಮನು ಸದ್ಗುಣರಾವ್ ಮತ್ತು ಎನ್ ಸಾಯಿಕುಮಾರ್ ಬಂಧಿತ ಆರೋಪಿಗಳು. ಆರೋಪಿಗಳೆಲ್ಲರೂ ನಂದ್ಯಾಲ ಜಿಲ್ಲೆಯ ಕೊತ್ತಪಲ್ಲಿ ಮಂಡಲಕ್ಕೆ ಸೇರಿದವರು ಎನ್ನಲಾಗಿದೆ.
ಶುಕ್ರವಾರ ಮುಂಜಾನೆ ಖಚಿತ ಮಾಹಿತಿ ಆಧಾರದ ಮೇಲೆ ಇಬ್ಬರು ಆರೋಪಿಗಳಾದ ಶಿಕಾಮಣಿ ಮತ್ತು ರಾವ್ ಅವರನ್ನು ಆತ್ಮಕೂರಿನ ಸೂರ್ಯ ಗಾರ್ಡನ್ ಲಾಡ್ಜ್ ಬಳಿ ಬಂಧಿಸಲಾಗಿದ್ದು, ಬಂಧಿತರಿಂದ ಕರಡಿಯ ಒಣಗಿದ ಜನನಾಂಗ, ತಲೆ, ಪಾದ ಮೂಳೆಗಳನ್ನ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಲ್ಲದೆ, ಕರಡಿಯ ದೇಹದ ಭಾಗಗಳನ್ನು ಮಾರಾಟ ಮಾಡುವಲ್ಲಿ ಭಾಗಿಯಾಗಿದ್ದ ಎನ್ನಲಾದ ಯೇಸುರತ್ನಂ ಮತ್ತು ಕುಮಾರ್ ಅವರನ್ನು ಗುರುವಾರ ರಾತ್ರಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಅರಣ್ಯಾಧಿಕಾರಿಗಳ ಪ್ರಕಾರ, ಕೊತ್ತಪಲ್ಲಿ ಮಂಡಲದ ಶಿವಪುರಂ ಗ್ರಾಮದ ಕೃಷಿ ಕ್ಷೇತ್ರದಲ್ಲಿ ಆರೋಪಿಗಳು 10 ದಿನಗಳ ಹಿಂದೆ ವಿದ್ಯುತ್ ಸ್ಪರ್ಶಿಸಿ ಕರಡಿಯನ್ನು ಕೊಂದಿದ್ದು, ಅದರ ಭಾಗಗಳನ್ನು ಕಾಮೋತ್ತೇಜಕವಾಗಿ ಬಳಸಿಕೊಳ್ಳುವ ಉದ್ದೇಶವಿತ್ತು ಎಂಬ ಮಾಹಿತಿ ತಿಳಿದುಬಂದಿದೆ.
ನಾಲ್ವರು ಆರೋಪಿಗಳನ್ನು ಶನಿವಾರ ಆತ್ಮಕೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಕರಡಿ ದೇಹದ ಭಾಗಗಳನ್ನು ಸೇವಿಸುವುದರಿಂದ ಶಕ್ತಿ ಹೆಚ್ಚುತ್ತದೆ ಎಂಬ ಆರೋಪದಲ್ಲಿ ಸತ್ಯಾಂಶವಿಲ್ಲ ಎಂದು ಅರಣ್ಯಾಧಿಕಾರಿಗಳು ಹೇಳಿದ್ದಾರೆ. ಕಾಡು ಪ್ರಾಣಿಗಳನ್ನು ಬೇಟೆಯಾಡುವುದು ಗಂಭೀರ ಅಪರಾಧ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…