ಕರಡಿಗೆ ವಿದ್ಯುತ್ ಸ್ಪರ್ಶಿಸಿ ಅದರ ಭಾಗಗಳನ್ನು ಹೊಂದಿದ್ದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯ ಆತ್ಮಕೂರು ಅರಣ್ಯ ವಿಭಾಗದ ಅರಣ್ಯಾಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಎನ್ ಯೇಸುರತ್ನಂ, ಎಂ ಶಿಕಾಮಣಿ, ವಿ ಮನು ಸದ್ಗುಣರಾವ್ ಮತ್ತು ಎನ್ ಸಾಯಿಕುಮಾರ್ ಬಂಧಿತ ಆರೋಪಿಗಳು. ಆರೋಪಿಗಳೆಲ್ಲರೂ ನಂದ್ಯಾಲ ಜಿಲ್ಲೆಯ ಕೊತ್ತಪಲ್ಲಿ ಮಂಡಲಕ್ಕೆ ಸೇರಿದವರು ಎನ್ನಲಾಗಿದೆ.
ಶುಕ್ರವಾರ ಮುಂಜಾನೆ ಖಚಿತ ಮಾಹಿತಿ ಆಧಾರದ ಮೇಲೆ ಇಬ್ಬರು ಆರೋಪಿಗಳಾದ ಶಿಕಾಮಣಿ ಮತ್ತು ರಾವ್ ಅವರನ್ನು ಆತ್ಮಕೂರಿನ ಸೂರ್ಯ ಗಾರ್ಡನ್ ಲಾಡ್ಜ್ ಬಳಿ ಬಂಧಿಸಲಾಗಿದ್ದು, ಬಂಧಿತರಿಂದ ಕರಡಿಯ ಒಣಗಿದ ಜನನಾಂಗ, ತಲೆ, ಪಾದ ಮೂಳೆಗಳನ್ನ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಲ್ಲದೆ, ಕರಡಿಯ ದೇಹದ ಭಾಗಗಳನ್ನು ಮಾರಾಟ ಮಾಡುವಲ್ಲಿ ಭಾಗಿಯಾಗಿದ್ದ ಎನ್ನಲಾದ ಯೇಸುರತ್ನಂ ಮತ್ತು ಕುಮಾರ್ ಅವರನ್ನು ಗುರುವಾರ ರಾತ್ರಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಅರಣ್ಯಾಧಿಕಾರಿಗಳ ಪ್ರಕಾರ, ಕೊತ್ತಪಲ್ಲಿ ಮಂಡಲದ ಶಿವಪುರಂ ಗ್ರಾಮದ ಕೃಷಿ ಕ್ಷೇತ್ರದಲ್ಲಿ ಆರೋಪಿಗಳು 10 ದಿನಗಳ ಹಿಂದೆ ವಿದ್ಯುತ್ ಸ್ಪರ್ಶಿಸಿ ಕರಡಿಯನ್ನು ಕೊಂದಿದ್ದು, ಅದರ ಭಾಗಗಳನ್ನು ಕಾಮೋತ್ತೇಜಕವಾಗಿ ಬಳಸಿಕೊಳ್ಳುವ ಉದ್ದೇಶವಿತ್ತು ಎಂಬ ಮಾಹಿತಿ ತಿಳಿದುಬಂದಿದೆ.
ನಾಲ್ವರು ಆರೋಪಿಗಳನ್ನು ಶನಿವಾರ ಆತ್ಮಕೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಕರಡಿ ದೇಹದ ಭಾಗಗಳನ್ನು ಸೇವಿಸುವುದರಿಂದ ಶಕ್ತಿ ಹೆಚ್ಚುತ್ತದೆ ಎಂಬ ಆರೋಪದಲ್ಲಿ ಸತ್ಯಾಂಶವಿಲ್ಲ ಎಂದು ಅರಣ್ಯಾಧಿಕಾರಿಗಳು ಹೇಳಿದ್ದಾರೆ. ಕಾಡು ಪ್ರಾಣಿಗಳನ್ನು ಬೇಟೆಯಾಡುವುದು ಗಂಭೀರ ಅಪರಾಧ ಎಂದು ತಿಳಿಸಿದ್ದಾರೆ.
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…