ಕರಡಿಗೆ ವಿದ್ಯುತ್ ಸ್ಪರ್ಶಿಸಿ ಅದರ ಭಾಗಗಳನ್ನು ಹೊಂದಿದ್ದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯ ಆತ್ಮಕೂರು ಅರಣ್ಯ ವಿಭಾಗದ ಅರಣ್ಯಾಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಎನ್ ಯೇಸುರತ್ನಂ, ಎಂ ಶಿಕಾಮಣಿ, ವಿ ಮನು ಸದ್ಗುಣರಾವ್ ಮತ್ತು ಎನ್ ಸಾಯಿಕುಮಾರ್ ಬಂಧಿತ ಆರೋಪಿಗಳು. ಆರೋಪಿಗಳೆಲ್ಲರೂ ನಂದ್ಯಾಲ ಜಿಲ್ಲೆಯ ಕೊತ್ತಪಲ್ಲಿ ಮಂಡಲಕ್ಕೆ ಸೇರಿದವರು ಎನ್ನಲಾಗಿದೆ.
ಶುಕ್ರವಾರ ಮುಂಜಾನೆ ಖಚಿತ ಮಾಹಿತಿ ಆಧಾರದ ಮೇಲೆ ಇಬ್ಬರು ಆರೋಪಿಗಳಾದ ಶಿಕಾಮಣಿ ಮತ್ತು ರಾವ್ ಅವರನ್ನು ಆತ್ಮಕೂರಿನ ಸೂರ್ಯ ಗಾರ್ಡನ್ ಲಾಡ್ಜ್ ಬಳಿ ಬಂಧಿಸಲಾಗಿದ್ದು, ಬಂಧಿತರಿಂದ ಕರಡಿಯ ಒಣಗಿದ ಜನನಾಂಗ, ತಲೆ, ಪಾದ ಮೂಳೆಗಳನ್ನ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಲ್ಲದೆ, ಕರಡಿಯ ದೇಹದ ಭಾಗಗಳನ್ನು ಮಾರಾಟ ಮಾಡುವಲ್ಲಿ ಭಾಗಿಯಾಗಿದ್ದ ಎನ್ನಲಾದ ಯೇಸುರತ್ನಂ ಮತ್ತು ಕುಮಾರ್ ಅವರನ್ನು ಗುರುವಾರ ರಾತ್ರಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಅರಣ್ಯಾಧಿಕಾರಿಗಳ ಪ್ರಕಾರ, ಕೊತ್ತಪಲ್ಲಿ ಮಂಡಲದ ಶಿವಪುರಂ ಗ್ರಾಮದ ಕೃಷಿ ಕ್ಷೇತ್ರದಲ್ಲಿ ಆರೋಪಿಗಳು 10 ದಿನಗಳ ಹಿಂದೆ ವಿದ್ಯುತ್ ಸ್ಪರ್ಶಿಸಿ ಕರಡಿಯನ್ನು ಕೊಂದಿದ್ದು, ಅದರ ಭಾಗಗಳನ್ನು ಕಾಮೋತ್ತೇಜಕವಾಗಿ ಬಳಸಿಕೊಳ್ಳುವ ಉದ್ದೇಶವಿತ್ತು ಎಂಬ ಮಾಹಿತಿ ತಿಳಿದುಬಂದಿದೆ.
ನಾಲ್ವರು ಆರೋಪಿಗಳನ್ನು ಶನಿವಾರ ಆತ್ಮಕೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಕರಡಿ ದೇಹದ ಭಾಗಗಳನ್ನು ಸೇವಿಸುವುದರಿಂದ ಶಕ್ತಿ ಹೆಚ್ಚುತ್ತದೆ ಎಂಬ ಆರೋಪದಲ್ಲಿ ಸತ್ಯಾಂಶವಿಲ್ಲ ಎಂದು ಅರಣ್ಯಾಧಿಕಾರಿಗಳು ಹೇಳಿದ್ದಾರೆ. ಕಾಡು ಪ್ರಾಣಿಗಳನ್ನು ಬೇಟೆಯಾಡುವುದು ಗಂಭೀರ ಅಪರಾಧ ಎಂದು ತಿಳಿಸಿದ್ದಾರೆ.
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…
ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್ಕುಮಾರ್ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…