ಕರಡಿಗೆ ವಿದ್ಯುತ್ ಸ್ಪರ್ಶಿಸಿ ಅದರ ಭಾಗಗಳನ್ನು ಹೊಂದಿದ್ದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯ ಆತ್ಮಕೂರು ಅರಣ್ಯ ವಿಭಾಗದ ಅರಣ್ಯಾಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಎನ್ ಯೇಸುರತ್ನಂ, ಎಂ ಶಿಕಾಮಣಿ, ವಿ ಮನು ಸದ್ಗುಣರಾವ್ ಮತ್ತು ಎನ್ ಸಾಯಿಕುಮಾರ್ ಬಂಧಿತ ಆರೋಪಿಗಳು. ಆರೋಪಿಗಳೆಲ್ಲರೂ ನಂದ್ಯಾಲ ಜಿಲ್ಲೆಯ ಕೊತ್ತಪಲ್ಲಿ ಮಂಡಲಕ್ಕೆ ಸೇರಿದವರು ಎನ್ನಲಾಗಿದೆ.
ಶುಕ್ರವಾರ ಮುಂಜಾನೆ ಖಚಿತ ಮಾಹಿತಿ ಆಧಾರದ ಮೇಲೆ ಇಬ್ಬರು ಆರೋಪಿಗಳಾದ ಶಿಕಾಮಣಿ ಮತ್ತು ರಾವ್ ಅವರನ್ನು ಆತ್ಮಕೂರಿನ ಸೂರ್ಯ ಗಾರ್ಡನ್ ಲಾಡ್ಜ್ ಬಳಿ ಬಂಧಿಸಲಾಗಿದ್ದು, ಬಂಧಿತರಿಂದ ಕರಡಿಯ ಒಣಗಿದ ಜನನಾಂಗ, ತಲೆ, ಪಾದ ಮೂಳೆಗಳನ್ನ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಲ್ಲದೆ, ಕರಡಿಯ ದೇಹದ ಭಾಗಗಳನ್ನು ಮಾರಾಟ ಮಾಡುವಲ್ಲಿ ಭಾಗಿಯಾಗಿದ್ದ ಎನ್ನಲಾದ ಯೇಸುರತ್ನಂ ಮತ್ತು ಕುಮಾರ್ ಅವರನ್ನು ಗುರುವಾರ ರಾತ್ರಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಅರಣ್ಯಾಧಿಕಾರಿಗಳ ಪ್ರಕಾರ, ಕೊತ್ತಪಲ್ಲಿ ಮಂಡಲದ ಶಿವಪುರಂ ಗ್ರಾಮದ ಕೃಷಿ ಕ್ಷೇತ್ರದಲ್ಲಿ ಆರೋಪಿಗಳು 10 ದಿನಗಳ ಹಿಂದೆ ವಿದ್ಯುತ್ ಸ್ಪರ್ಶಿಸಿ ಕರಡಿಯನ್ನು ಕೊಂದಿದ್ದು, ಅದರ ಭಾಗಗಳನ್ನು ಕಾಮೋತ್ತೇಜಕವಾಗಿ ಬಳಸಿಕೊಳ್ಳುವ ಉದ್ದೇಶವಿತ್ತು ಎಂಬ ಮಾಹಿತಿ ತಿಳಿದುಬಂದಿದೆ.
ನಾಲ್ವರು ಆರೋಪಿಗಳನ್ನು ಶನಿವಾರ ಆತ್ಮಕೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಕರಡಿ ದೇಹದ ಭಾಗಗಳನ್ನು ಸೇವಿಸುವುದರಿಂದ ಶಕ್ತಿ ಹೆಚ್ಚುತ್ತದೆ ಎಂಬ ಆರೋಪದಲ್ಲಿ ಸತ್ಯಾಂಶವಿಲ್ಲ ಎಂದು ಅರಣ್ಯಾಧಿಕಾರಿಗಳು ಹೇಳಿದ್ದಾರೆ. ಕಾಡು ಪ್ರಾಣಿಗಳನ್ನು ಬೇಟೆಯಾಡುವುದು ಗಂಭೀರ ಅಪರಾಧ ಎಂದು ತಿಳಿಸಿದ್ದಾರೆ.
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…