ಕರಡಿ ದೇಹದ ಭಾಗಗಳನ್ನು ಸೇವಿಸುವುದರಿಂದ ಶಕ್ತಿ ಹೆಚ್ಚುತ್ತದೆ ಎಂದು ಜನರನ್ನ ನಂಬಿಸಿ ಮಾರಾಟಕ್ಕೆ ಯತ್ನ: ನಾಲ್ವರ‌ ಬಂಧನ

ಕರಡಿಗೆ ವಿದ್ಯುತ್ ಸ್ಪರ್ಶಿಸಿ ಅದರ ಭಾಗಗಳನ್ನು ಹೊಂದಿದ್ದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯ ಆತ್ಮಕೂರು ಅರಣ್ಯ ವಿಭಾಗದ ಅರಣ್ಯಾಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಎನ್ ಯೇಸುರತ್ನಂ, ಎಂ ಶಿಕಾಮಣಿ, ವಿ ಮನು ಸದ್ಗುಣರಾವ್ ಮತ್ತು ಎನ್ ಸಾಯಿಕುಮಾರ್ ಬಂಧಿತ ಆರೋಪಿಗಳು. ಆರೋಪಿಗಳೆಲ್ಲರೂ ನಂದ್ಯಾಲ ಜಿಲ್ಲೆಯ ಕೊತ್ತಪಲ್ಲಿ ಮಂಡಲಕ್ಕೆ ಸೇರಿದವರು ಎನ್ನಲಾಗಿದೆ.

ಶುಕ್ರವಾರ ಮುಂಜಾನೆ ಖಚಿತ ಮಾಹಿತಿ ಆಧಾರದ ಮೇಲೆ ಇಬ್ಬರು ಆರೋಪಿಗಳಾದ ಶಿಕಾಮಣಿ ಮತ್ತು ರಾವ್ ಅವರನ್ನು ಆತ್ಮಕೂರಿನ ಸೂರ್ಯ ಗಾರ್ಡನ್ ಲಾಡ್ಜ್ ಬಳಿ ಬಂಧಿಸಲಾಗಿದ್ದು, ಬಂಧಿತರಿಂದ ಕರಡಿಯ ಒಣಗಿದ ಜನನಾಂಗ, ತಲೆ, ಪಾದ ಮೂಳೆಗಳನ್ನ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಲ್ಲದೆ, ಕರಡಿಯ ದೇಹದ ಭಾಗಗಳನ್ನು ಮಾರಾಟ ಮಾಡುವಲ್ಲಿ ಭಾಗಿಯಾಗಿದ್ದ ಎನ್ನಲಾದ ಯೇಸುರತ್ನಂ ಮತ್ತು ಕುಮಾರ್ ಅವರನ್ನು ಗುರುವಾರ ರಾತ್ರಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಅರಣ್ಯಾಧಿಕಾರಿಗಳ ಪ್ರಕಾರ, ಕೊತ್ತಪಲ್ಲಿ ಮಂಡಲದ ಶಿವಪುರಂ ಗ್ರಾಮದ ಕೃಷಿ ಕ್ಷೇತ್ರದಲ್ಲಿ ಆರೋಪಿಗಳು 10 ದಿನಗಳ ಹಿಂದೆ ವಿದ್ಯುತ್ ಸ್ಪರ್ಶಿಸಿ ಕರಡಿಯನ್ನು ಕೊಂದಿದ್ದು, ಅದರ ಭಾಗಗಳನ್ನು ಕಾಮೋತ್ತೇಜಕವಾಗಿ ಬಳಸಿಕೊಳ್ಳುವ ಉದ್ದೇಶವಿತ್ತು ಎಂಬ ಮಾಹಿತಿ ತಿಳಿದುಬಂದಿದೆ.

ನಾಲ್ವರು ಆರೋಪಿಗಳನ್ನು ಶನಿವಾರ ಆತ್ಮಕೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಕರಡಿ ದೇಹದ ಭಾಗಗಳನ್ನು ಸೇವಿಸುವುದರಿಂದ ಶಕ್ತಿ ಹೆಚ್ಚುತ್ತದೆ ಎಂಬ ಆರೋಪದಲ್ಲಿ ಸತ್ಯಾಂಶವಿಲ್ಲ ಎಂದು ಅರಣ್ಯಾಧಿಕಾರಿಗಳು ಹೇಳಿದ್ದಾರೆ. ಕಾಡು ಪ್ರಾಣಿಗಳನ್ನು ಬೇಟೆಯಾಡುವುದು ಗಂಭೀರ ಅಪರಾಧ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

42 minutes ago

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

1 hour ago

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

7 hours ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

8 hours ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

11 hours ago

ರಾಹುಲ್ ಗಾಂಧಿ ಸೈದ್ಧಾಂತಿಕ ಬದ್ಧತೆಯಿರುವ ವ್ಯಕ್ತಿ….

ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…

13 hours ago