ಕರಡಿಗೆ ವಿದ್ಯುತ್ ಸ್ಪರ್ಶಿಸಿ ಅದರ ಭಾಗಗಳನ್ನು ಹೊಂದಿದ್ದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯ ಆತ್ಮಕೂರು ಅರಣ್ಯ ವಿಭಾಗದ ಅರಣ್ಯಾಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಎನ್ ಯೇಸುರತ್ನಂ, ಎಂ ಶಿಕಾಮಣಿ, ವಿ ಮನು ಸದ್ಗುಣರಾವ್ ಮತ್ತು ಎನ್ ಸಾಯಿಕುಮಾರ್ ಬಂಧಿತ ಆರೋಪಿಗಳು. ಆರೋಪಿಗಳೆಲ್ಲರೂ ನಂದ್ಯಾಲ ಜಿಲ್ಲೆಯ ಕೊತ್ತಪಲ್ಲಿ ಮಂಡಲಕ್ಕೆ ಸೇರಿದವರು ಎನ್ನಲಾಗಿದೆ.
ಶುಕ್ರವಾರ ಮುಂಜಾನೆ ಖಚಿತ ಮಾಹಿತಿ ಆಧಾರದ ಮೇಲೆ ಇಬ್ಬರು ಆರೋಪಿಗಳಾದ ಶಿಕಾಮಣಿ ಮತ್ತು ರಾವ್ ಅವರನ್ನು ಆತ್ಮಕೂರಿನ ಸೂರ್ಯ ಗಾರ್ಡನ್ ಲಾಡ್ಜ್ ಬಳಿ ಬಂಧಿಸಲಾಗಿದ್ದು, ಬಂಧಿತರಿಂದ ಕರಡಿಯ ಒಣಗಿದ ಜನನಾಂಗ, ತಲೆ, ಪಾದ ಮೂಳೆಗಳನ್ನ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಲ್ಲದೆ, ಕರಡಿಯ ದೇಹದ ಭಾಗಗಳನ್ನು ಮಾರಾಟ ಮಾಡುವಲ್ಲಿ ಭಾಗಿಯಾಗಿದ್ದ ಎನ್ನಲಾದ ಯೇಸುರತ್ನಂ ಮತ್ತು ಕುಮಾರ್ ಅವರನ್ನು ಗುರುವಾರ ರಾತ್ರಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಅರಣ್ಯಾಧಿಕಾರಿಗಳ ಪ್ರಕಾರ, ಕೊತ್ತಪಲ್ಲಿ ಮಂಡಲದ ಶಿವಪುರಂ ಗ್ರಾಮದ ಕೃಷಿ ಕ್ಷೇತ್ರದಲ್ಲಿ ಆರೋಪಿಗಳು 10 ದಿನಗಳ ಹಿಂದೆ ವಿದ್ಯುತ್ ಸ್ಪರ್ಶಿಸಿ ಕರಡಿಯನ್ನು ಕೊಂದಿದ್ದು, ಅದರ ಭಾಗಗಳನ್ನು ಕಾಮೋತ್ತೇಜಕವಾಗಿ ಬಳಸಿಕೊಳ್ಳುವ ಉದ್ದೇಶವಿತ್ತು ಎಂಬ ಮಾಹಿತಿ ತಿಳಿದುಬಂದಿದೆ.
ನಾಲ್ವರು ಆರೋಪಿಗಳನ್ನು ಶನಿವಾರ ಆತ್ಮಕೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಕರಡಿ ದೇಹದ ಭಾಗಗಳನ್ನು ಸೇವಿಸುವುದರಿಂದ ಶಕ್ತಿ ಹೆಚ್ಚುತ್ತದೆ ಎಂಬ ಆರೋಪದಲ್ಲಿ ಸತ್ಯಾಂಶವಿಲ್ಲ ಎಂದು ಅರಣ್ಯಾಧಿಕಾರಿಗಳು ಹೇಳಿದ್ದಾರೆ. ಕಾಡು ಪ್ರಾಣಿಗಳನ್ನು ಬೇಟೆಯಾಡುವುದು ಗಂಭೀರ ಅಪರಾಧ ಎಂದು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…