ಕರಡಿಗೆ ವಿದ್ಯುತ್ ಸ್ಪರ್ಶಿಸಿ ಅದರ ಭಾಗಗಳನ್ನು ಹೊಂದಿದ್ದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯ ಆತ್ಮಕೂರು ಅರಣ್ಯ ವಿಭಾಗದ ಅರಣ್ಯಾಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಎನ್ ಯೇಸುರತ್ನಂ, ಎಂ ಶಿಕಾಮಣಿ, ವಿ ಮನು ಸದ್ಗುಣರಾವ್ ಮತ್ತು ಎನ್ ಸಾಯಿಕುಮಾರ್ ಬಂಧಿತ ಆರೋಪಿಗಳು. ಆರೋಪಿಗಳೆಲ್ಲರೂ ನಂದ್ಯಾಲ ಜಿಲ್ಲೆಯ ಕೊತ್ತಪಲ್ಲಿ ಮಂಡಲಕ್ಕೆ ಸೇರಿದವರು ಎನ್ನಲಾಗಿದೆ.
ಶುಕ್ರವಾರ ಮುಂಜಾನೆ ಖಚಿತ ಮಾಹಿತಿ ಆಧಾರದ ಮೇಲೆ ಇಬ್ಬರು ಆರೋಪಿಗಳಾದ ಶಿಕಾಮಣಿ ಮತ್ತು ರಾವ್ ಅವರನ್ನು ಆತ್ಮಕೂರಿನ ಸೂರ್ಯ ಗಾರ್ಡನ್ ಲಾಡ್ಜ್ ಬಳಿ ಬಂಧಿಸಲಾಗಿದ್ದು, ಬಂಧಿತರಿಂದ ಕರಡಿಯ ಒಣಗಿದ ಜನನಾಂಗ, ತಲೆ, ಪಾದ ಮೂಳೆಗಳನ್ನ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಲ್ಲದೆ, ಕರಡಿಯ ದೇಹದ ಭಾಗಗಳನ್ನು ಮಾರಾಟ ಮಾಡುವಲ್ಲಿ ಭಾಗಿಯಾಗಿದ್ದ ಎನ್ನಲಾದ ಯೇಸುರತ್ನಂ ಮತ್ತು ಕುಮಾರ್ ಅವರನ್ನು ಗುರುವಾರ ರಾತ್ರಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಅರಣ್ಯಾಧಿಕಾರಿಗಳ ಪ್ರಕಾರ, ಕೊತ್ತಪಲ್ಲಿ ಮಂಡಲದ ಶಿವಪುರಂ ಗ್ರಾಮದ ಕೃಷಿ ಕ್ಷೇತ್ರದಲ್ಲಿ ಆರೋಪಿಗಳು 10 ದಿನಗಳ ಹಿಂದೆ ವಿದ್ಯುತ್ ಸ್ಪರ್ಶಿಸಿ ಕರಡಿಯನ್ನು ಕೊಂದಿದ್ದು, ಅದರ ಭಾಗಗಳನ್ನು ಕಾಮೋತ್ತೇಜಕವಾಗಿ ಬಳಸಿಕೊಳ್ಳುವ ಉದ್ದೇಶವಿತ್ತು ಎಂಬ ಮಾಹಿತಿ ತಿಳಿದುಬಂದಿದೆ.
ನಾಲ್ವರು ಆರೋಪಿಗಳನ್ನು ಶನಿವಾರ ಆತ್ಮಕೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಕರಡಿ ದೇಹದ ಭಾಗಗಳನ್ನು ಸೇವಿಸುವುದರಿಂದ ಶಕ್ತಿ ಹೆಚ್ಚುತ್ತದೆ ಎಂಬ ಆರೋಪದಲ್ಲಿ ಸತ್ಯಾಂಶವಿಲ್ಲ ಎಂದು ಅರಣ್ಯಾಧಿಕಾರಿಗಳು ಹೇಳಿದ್ದಾರೆ. ಕಾಡು ಪ್ರಾಣಿಗಳನ್ನು ಬೇಟೆಯಾಡುವುದು ಗಂಭೀರ ಅಪರಾಧ ಎಂದು ತಿಳಿಸಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…