ಕರಡಿ ದೇಹದ ಭಾಗಗಳನ್ನು ಸೇವಿಸುವುದರಿಂದ ಶಕ್ತಿ ಹೆಚ್ಚುತ್ತದೆ ಎಂದು ಜನರನ್ನ ನಂಬಿಸಿ ಮಾರಾಟಕ್ಕೆ ಯತ್ನ: ನಾಲ್ವರ‌ ಬಂಧನ

ಕರಡಿಗೆ ವಿದ್ಯುತ್ ಸ್ಪರ್ಶಿಸಿ ಅದರ ಭಾಗಗಳನ್ನು ಹೊಂದಿದ್ದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯ ಆತ್ಮಕೂರು ಅರಣ್ಯ ವಿಭಾಗದ ಅರಣ್ಯಾಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಎನ್ ಯೇಸುರತ್ನಂ, ಎಂ ಶಿಕಾಮಣಿ, ವಿ ಮನು ಸದ್ಗುಣರಾವ್ ಮತ್ತು ಎನ್ ಸಾಯಿಕುಮಾರ್ ಬಂಧಿತ ಆರೋಪಿಗಳು. ಆರೋಪಿಗಳೆಲ್ಲರೂ ನಂದ್ಯಾಲ ಜಿಲ್ಲೆಯ ಕೊತ್ತಪಲ್ಲಿ ಮಂಡಲಕ್ಕೆ ಸೇರಿದವರು ಎನ್ನಲಾಗಿದೆ.

ಶುಕ್ರವಾರ ಮುಂಜಾನೆ ಖಚಿತ ಮಾಹಿತಿ ಆಧಾರದ ಮೇಲೆ ಇಬ್ಬರು ಆರೋಪಿಗಳಾದ ಶಿಕಾಮಣಿ ಮತ್ತು ರಾವ್ ಅವರನ್ನು ಆತ್ಮಕೂರಿನ ಸೂರ್ಯ ಗಾರ್ಡನ್ ಲಾಡ್ಜ್ ಬಳಿ ಬಂಧಿಸಲಾಗಿದ್ದು, ಬಂಧಿತರಿಂದ ಕರಡಿಯ ಒಣಗಿದ ಜನನಾಂಗ, ತಲೆ, ಪಾದ ಮೂಳೆಗಳನ್ನ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಲ್ಲದೆ, ಕರಡಿಯ ದೇಹದ ಭಾಗಗಳನ್ನು ಮಾರಾಟ ಮಾಡುವಲ್ಲಿ ಭಾಗಿಯಾಗಿದ್ದ ಎನ್ನಲಾದ ಯೇಸುರತ್ನಂ ಮತ್ತು ಕುಮಾರ್ ಅವರನ್ನು ಗುರುವಾರ ರಾತ್ರಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಅರಣ್ಯಾಧಿಕಾರಿಗಳ ಪ್ರಕಾರ, ಕೊತ್ತಪಲ್ಲಿ ಮಂಡಲದ ಶಿವಪುರಂ ಗ್ರಾಮದ ಕೃಷಿ ಕ್ಷೇತ್ರದಲ್ಲಿ ಆರೋಪಿಗಳು 10 ದಿನಗಳ ಹಿಂದೆ ವಿದ್ಯುತ್ ಸ್ಪರ್ಶಿಸಿ ಕರಡಿಯನ್ನು ಕೊಂದಿದ್ದು, ಅದರ ಭಾಗಗಳನ್ನು ಕಾಮೋತ್ತೇಜಕವಾಗಿ ಬಳಸಿಕೊಳ್ಳುವ ಉದ್ದೇಶವಿತ್ತು ಎಂಬ ಮಾಹಿತಿ ತಿಳಿದುಬಂದಿದೆ.

ನಾಲ್ವರು ಆರೋಪಿಗಳನ್ನು ಶನಿವಾರ ಆತ್ಮಕೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಕರಡಿ ದೇಹದ ಭಾಗಗಳನ್ನು ಸೇವಿಸುವುದರಿಂದ ಶಕ್ತಿ ಹೆಚ್ಚುತ್ತದೆ ಎಂಬ ಆರೋಪದಲ್ಲಿ ಸತ್ಯಾಂಶವಿಲ್ಲ ಎಂದು ಅರಣ್ಯಾಧಿಕಾರಿಗಳು ಹೇಳಿದ್ದಾರೆ. ಕಾಡು ಪ್ರಾಣಿಗಳನ್ನು ಬೇಟೆಯಾಡುವುದು ಗಂಭೀರ ಅಪರಾಧ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

7 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

8 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

23 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago