ಕರವೇ(ನಾರಾಯಣಗೌಡ ಬಣ) ತಾಲೂಕು ನೂತನ ಅಧ್ಯಕ್ಷರಾಗಿ ಮಂಜುನಾಥ್ ಆಯ್ಕೆ- ಅಧಿಕಾರ ಸ್ವೀಕಾರ-ಗಣ್ಯರ ಅಭಿನಂದನೆ

ಕನ್ನಡ, ನಾಡು, ನುಡಿಯನ್ನು ಉಳಿಸಿ ಬೆಳೆಸಲು ಹಾಗೂ ಸಾಮಾಜಿಕ ಸಮಸ್ಯೆಗಳ ವಿರುದ್ಧ ಹೋರಾಡಲು ನನಗೆ ಅವಕಾಶ ಮಾಡಿಕೊಟ್ಟ ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಅವರಿಗೆ ತುಂಬು ಹೃದಯ ಧನ್ಯವಾದಗಳು. ತಾಲೂಕಿನಲ್ಲಿ ಕರವೇ ನಾರಾಯಣಗೌಡ ಬಣವನ್ನು ಇನ್ನಷ್ಟು ಬಲಗೊಳಿಸುತ್ತೇನೆ ಎಂದು ನೂತನ ತಾಲೂಕು ಅಧ್ಯಕ್ಷ ಬೈರಾಪುರ ಮಂಜುನಾಥ್ ಅವರು ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಕರವೇ(ನಾರಾಯಣಗೌಡ ಬಣ) ಜಿಲ್ಲಾಧ್ಯಕ್ಷ ಪುರುಷೋತ್ತ ಅವರ ನೇತೃತ್ವದಲ್ಲಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ಕನ್ನಡ ಎಂದರೆ ಕೇವಲ ಭಾಷೆ ಮಾತ್ರವಲ್ಲ. ಕನ್ನಡ ಎಂದರೆ ನಮ್ಮ ಉಸಿರು, ರಾಜ್ಯದ ಸಂಸ್ಕೃತಿ, ಪರಿಸರ, ಆಹಾರ, ಉಡುಗೆ ತೊಡುಗೆ ಬಿಂಬಿಸುವ ಪದ್ಧತಿಯಾಗಿದೆ ಎಂದರು.

ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ.60 ಕನ್ನಡ ಬಳಸಬೇಕು ಎಂದು ಸರ್ಕಾರ ಸೂಚನೆ ನೀಡಿದೆ. ಒಂದು ವೇಳೆ ಸರ್ಕಾರದ ಆದೇಶವನ್ನು ನಿರ್ಲಕ್ಷ್ಯ ಮಾಡಿದರೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ಮಾಡಿ ಕನ್ನಡ ಬಳಕೆಗೆ ಒತ್ತು ನೀಡುವಂತೆ ಮನವರಿಕೆ ಮಾಡಲಾಗುವುದು ಎಂದರು.

ನಂತರ ಕರವೇ ಜಿಲ್ಲಾಧ್ಯಕ್ಷ ಪುರುಷೋತ್ತಮ ಗೌಡ ಮಾತನಾಡಿ, ದೊಡ್ಡಬಳ್ಳಾಪುರ ತಾಲೂಕು ಕರವೇ‌ ನೂತನ ಅಧ್ಯಕ್ಷರಾಗಿ ಆಯ್ಕೆಯಾದಂತಹ ಮಂಜುನಾಥ್ ಅವರಿಗೆ ಅಭಿನಂದನೆ. ಕರುನಾಡಲ್ಲಿ ಕನ್ನಡವನ್ನು ಉತ್ತುಂಗಕ್ಕೆ ತೆಗೆದುಕೊಂಡು ಹೋಗಬೇಕು. ಕನ್ನಡತನಕ್ಕೆ ಧಕ್ಕೆ ಉಂಟಾಗದಂತೆ ನೋಡಿಕೊಳ್ಳಬೇಕು. ಜನರಲ್ಲಿ‌ ಕನ್ನಡಾಭಿಮಾನ ಬೆಳೆಸಬೇಕು. ಈ ನಿಟ್ಟಿನಲ್ಲಿ ನಾವೆಲ್ಲರೂ ಕೆಲಸ ಮಾಡಬೇಕು ಎಂದು ತಿಳಿಸಿದರು.

ಕರ್ನಾಟಕದಲ್ಲಿ ಕನ್ನಡಿಗರಿಗೆ ಮೊದಲು ಉದ್ಯೋಗವಕಾಶ ಸಿಗಬೇಕು. ಕನ್ನಡಿಗರಿಗೆ ಖಾಸಗಿ ಕ್ಷೇತ್ರದಲ್ಲಿ ಉದ್ಯೋಗ ಕಡ್ಡಾಯ ಮಾಡಬೇಕು. ಸರೋಜಿನಿ ಮಹಿಷಿ ವರದಿ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ಈ ವೇಳೆ ಜೆಜೆ ಫೌಂಡೇಶನ್ ನ ಜೈಕುಮಾರ್, ಕರವೇ ಮುಖಂಡರು, ಸದಸ್ಯರು‌ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

3 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

19 hours ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

19 hours ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

2 days ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

2 days ago