ಕನ್ನಡ, ನಾಡು, ನುಡಿಯನ್ನು ಉಳಿಸಿ ಬೆಳೆಸಲು ಹಾಗೂ ಸಾಮಾಜಿಕ ಸಮಸ್ಯೆಗಳ ವಿರುದ್ಧ ಹೋರಾಡಲು ನನಗೆ ಅವಕಾಶ ಮಾಡಿಕೊಟ್ಟ ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಅವರಿಗೆ ತುಂಬು ಹೃದಯ ಧನ್ಯವಾದಗಳು. ತಾಲೂಕಿನಲ್ಲಿ ಕರವೇ ನಾರಾಯಣಗೌಡ ಬಣವನ್ನು ಇನ್ನಷ್ಟು ಬಲಗೊಳಿಸುತ್ತೇನೆ ಎಂದು ನೂತನ ತಾಲೂಕು ಅಧ್ಯಕ್ಷ ಬೈರಾಪುರ ಮಂಜುನಾಥ್ ಅವರು ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಕರವೇ(ನಾರಾಯಣಗೌಡ ಬಣ) ಜಿಲ್ಲಾಧ್ಯಕ್ಷ ಪುರುಷೋತ್ತ ಅವರ ನೇತೃತ್ವದಲ್ಲಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ಕನ್ನಡ ಎಂದರೆ ಕೇವಲ ಭಾಷೆ ಮಾತ್ರವಲ್ಲ. ಕನ್ನಡ ಎಂದರೆ ನಮ್ಮ ಉಸಿರು, ರಾಜ್ಯದ ಸಂಸ್ಕೃತಿ, ಪರಿಸರ, ಆಹಾರ, ಉಡುಗೆ ತೊಡುಗೆ ಬಿಂಬಿಸುವ ಪದ್ಧತಿಯಾಗಿದೆ ಎಂದರು.
ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ.60 ಕನ್ನಡ ಬಳಸಬೇಕು ಎಂದು ಸರ್ಕಾರ ಸೂಚನೆ ನೀಡಿದೆ. ಒಂದು ವೇಳೆ ಸರ್ಕಾರದ ಆದೇಶವನ್ನು ನಿರ್ಲಕ್ಷ್ಯ ಮಾಡಿದರೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ಮಾಡಿ ಕನ್ನಡ ಬಳಕೆಗೆ ಒತ್ತು ನೀಡುವಂತೆ ಮನವರಿಕೆ ಮಾಡಲಾಗುವುದು ಎಂದರು.
ನಂತರ ಕರವೇ ಜಿಲ್ಲಾಧ್ಯಕ್ಷ ಪುರುಷೋತ್ತಮ ಗೌಡ ಮಾತನಾಡಿ, ದೊಡ್ಡಬಳ್ಳಾಪುರ ತಾಲೂಕು ಕರವೇ ನೂತನ ಅಧ್ಯಕ್ಷರಾಗಿ ಆಯ್ಕೆಯಾದಂತಹ ಮಂಜುನಾಥ್ ಅವರಿಗೆ ಅಭಿನಂದನೆ. ಕರುನಾಡಲ್ಲಿ ಕನ್ನಡವನ್ನು ಉತ್ತುಂಗಕ್ಕೆ ತೆಗೆದುಕೊಂಡು ಹೋಗಬೇಕು. ಕನ್ನಡತನಕ್ಕೆ ಧಕ್ಕೆ ಉಂಟಾಗದಂತೆ ನೋಡಿಕೊಳ್ಳಬೇಕು. ಜನರಲ್ಲಿ ಕನ್ನಡಾಭಿಮಾನ ಬೆಳೆಸಬೇಕು. ಈ ನಿಟ್ಟಿನಲ್ಲಿ ನಾವೆಲ್ಲರೂ ಕೆಲಸ ಮಾಡಬೇಕು ಎಂದು ತಿಳಿಸಿದರು.
ಕರ್ನಾಟಕದಲ್ಲಿ ಕನ್ನಡಿಗರಿಗೆ ಮೊದಲು ಉದ್ಯೋಗವಕಾಶ ಸಿಗಬೇಕು. ಕನ್ನಡಿಗರಿಗೆ ಖಾಸಗಿ ಕ್ಷೇತ್ರದಲ್ಲಿ ಉದ್ಯೋಗ ಕಡ್ಡಾಯ ಮಾಡಬೇಕು. ಸರೋಜಿನಿ ಮಹಿಷಿ ವರದಿ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.
ಈ ವೇಳೆ ಜೆಜೆ ಫೌಂಡೇಶನ್ ನ ಜೈಕುಮಾರ್, ಕರವೇ ಮುಖಂಡರು, ಸದಸ್ಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…