ಕರವೇ(ನಾರಾಯಣಗೌಡ ಬಣ) ತಾಲೂಕು ನೂತನ ಅಧ್ಯಕ್ಷರಾಗಿ ಮಂಜುನಾಥ್ ಆಯ್ಕೆ- ಅಧಿಕಾರ ಸ್ವೀಕಾರ-ಗಣ್ಯರ ಅಭಿನಂದನೆ

ಕನ್ನಡ, ನಾಡು, ನುಡಿಯನ್ನು ಉಳಿಸಿ ಬೆಳೆಸಲು ಹಾಗೂ ಸಾಮಾಜಿಕ ಸಮಸ್ಯೆಗಳ ವಿರುದ್ಧ ಹೋರಾಡಲು ನನಗೆ ಅವಕಾಶ ಮಾಡಿಕೊಟ್ಟ ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಅವರಿಗೆ ತುಂಬು ಹೃದಯ ಧನ್ಯವಾದಗಳು. ತಾಲೂಕಿನಲ್ಲಿ ಕರವೇ ನಾರಾಯಣಗೌಡ ಬಣವನ್ನು ಇನ್ನಷ್ಟು ಬಲಗೊಳಿಸುತ್ತೇನೆ ಎಂದು ನೂತನ ತಾಲೂಕು ಅಧ್ಯಕ್ಷ ಬೈರಾಪುರ ಮಂಜುನಾಥ್ ಅವರು ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಕರವೇ(ನಾರಾಯಣಗೌಡ ಬಣ) ಜಿಲ್ಲಾಧ್ಯಕ್ಷ ಪುರುಷೋತ್ತ ಅವರ ನೇತೃತ್ವದಲ್ಲಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ಕನ್ನಡ ಎಂದರೆ ಕೇವಲ ಭಾಷೆ ಮಾತ್ರವಲ್ಲ. ಕನ್ನಡ ಎಂದರೆ ನಮ್ಮ ಉಸಿರು, ರಾಜ್ಯದ ಸಂಸ್ಕೃತಿ, ಪರಿಸರ, ಆಹಾರ, ಉಡುಗೆ ತೊಡುಗೆ ಬಿಂಬಿಸುವ ಪದ್ಧತಿಯಾಗಿದೆ ಎಂದರು.

ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ.60 ಕನ್ನಡ ಬಳಸಬೇಕು ಎಂದು ಸರ್ಕಾರ ಸೂಚನೆ ನೀಡಿದೆ. ಒಂದು ವೇಳೆ ಸರ್ಕಾರದ ಆದೇಶವನ್ನು ನಿರ್ಲಕ್ಷ್ಯ ಮಾಡಿದರೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ಮಾಡಿ ಕನ್ನಡ ಬಳಕೆಗೆ ಒತ್ತು ನೀಡುವಂತೆ ಮನವರಿಕೆ ಮಾಡಲಾಗುವುದು ಎಂದರು.

ನಂತರ ಕರವೇ ಜಿಲ್ಲಾಧ್ಯಕ್ಷ ಪುರುಷೋತ್ತಮ ಗೌಡ ಮಾತನಾಡಿ, ದೊಡ್ಡಬಳ್ಳಾಪುರ ತಾಲೂಕು ಕರವೇ‌ ನೂತನ ಅಧ್ಯಕ್ಷರಾಗಿ ಆಯ್ಕೆಯಾದಂತಹ ಮಂಜುನಾಥ್ ಅವರಿಗೆ ಅಭಿನಂದನೆ. ಕರುನಾಡಲ್ಲಿ ಕನ್ನಡವನ್ನು ಉತ್ತುಂಗಕ್ಕೆ ತೆಗೆದುಕೊಂಡು ಹೋಗಬೇಕು. ಕನ್ನಡತನಕ್ಕೆ ಧಕ್ಕೆ ಉಂಟಾಗದಂತೆ ನೋಡಿಕೊಳ್ಳಬೇಕು. ಜನರಲ್ಲಿ‌ ಕನ್ನಡಾಭಿಮಾನ ಬೆಳೆಸಬೇಕು. ಈ ನಿಟ್ಟಿನಲ್ಲಿ ನಾವೆಲ್ಲರೂ ಕೆಲಸ ಮಾಡಬೇಕು ಎಂದು ತಿಳಿಸಿದರು.

ಕರ್ನಾಟಕದಲ್ಲಿ ಕನ್ನಡಿಗರಿಗೆ ಮೊದಲು ಉದ್ಯೋಗವಕಾಶ ಸಿಗಬೇಕು. ಕನ್ನಡಿಗರಿಗೆ ಖಾಸಗಿ ಕ್ಷೇತ್ರದಲ್ಲಿ ಉದ್ಯೋಗ ಕಡ್ಡಾಯ ಮಾಡಬೇಕು. ಸರೋಜಿನಿ ಮಹಿಷಿ ವರದಿ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ಈ ವೇಳೆ ಜೆಜೆ ಫೌಂಡೇಶನ್ ನ ಜೈಕುಮಾರ್, ಕರವೇ ಮುಖಂಡರು, ಸದಸ್ಯರು‌ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

Ставки на спорт в Украине_ основы и стратегии(1)

Ставки на спорт UA: советы и стратегии для успеха Ставки на спорт в Украине: основы…

2 hours ago

ದೊಡ್ಡಬಳ್ಳಾಪುರ ನೂತನ ಉಪವಿಭಾಗಾಧಿಕಾರಿಯಾಗಿ ಮಂಜುನಾಥ್ ಟಿ.ಆರ್ ಅಧಿಕಾರ ಸ್ವೀಕಾರ

ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿಯಾಗಿದ್ದ ಎನ್ ದುರ್ಗಶ್ರೀ ಅವರನ್ನು ಇಂದು ವರ್ಗಾವಣೆ ಮಾಡಲಾಗಿತ್ತು. ಇವರ ಜಾಗಕ್ಕೆ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಿ…

4 hours ago

ನಾಳೆ (ಏ.23) SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ

ನಾಳೆ (ಏ.23) ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು…

5 hours ago

ಮತಾಂತರ ವಿರುದ್ಧ ದೇಶಾದ್ಯಂತ ಜಾಗೃತಿ ಕಾರ್ಯಕ್ರಮ

ಇತ್ತೀಚೆಗೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ಉದ್ಯೋಗದ  ನೆಪದಲ್ಲಿ ಹೆಣ್ಣುಮಕ್ಕಳನ್ನು ಬಲವಂತಾಗಿ ಮತಾಂತರ ಮಾಡುವ ವಿಚಾರ ದೊಡ್ಡ ದುರಂತ ಪ್ರಕರಣವಾಗಿದೆ. ಇದರ…

6 hours ago

ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎನ್ ದುರ್ಗಶ್ರೀ ವರ್ಗಾವಣೆ: ಹೊಸ ಎಸಿ ಯಾರು ಗೊತ್ತಾ…?

ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎನ್ ದುರ್ಗಶ್ರೀ ಅವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಎಸಿಯಾಗಿ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಲಾಗಿದೆ...

7 hours ago

ಎಪಿಎಂಸಿ ಗೇಟ್ ಮುಂಭಾಗ ಸರಣಿ ಅಪಘಾತ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಗೇಟ್ ಮುಂಭಾಗ ಸರಣಿ ಅಪಘಾತ ನಡೆದಿದೆ.‌ ಘಟನೆಯಲ್ಲಿ ಬಸ್, ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ. ಅಡ್ಡಬಂದ…

8 hours ago