ಕನ್ನಡ, ನಾಡು, ನುಡಿಯನ್ನು ಉಳಿಸಿ ಬೆಳೆಸಲು ಹಾಗೂ ಸಾಮಾಜಿಕ ಸಮಸ್ಯೆಗಳ ವಿರುದ್ಧ ಹೋರಾಡಲು ನನಗೆ ಅವಕಾಶ ಮಾಡಿಕೊಟ್ಟ ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಅವರಿಗೆ ತುಂಬು ಹೃದಯ ಧನ್ಯವಾದಗಳು. ತಾಲೂಕಿನಲ್ಲಿ ಕರವೇ ನಾರಾಯಣಗೌಡ ಬಣವನ್ನು ಇನ್ನಷ್ಟು ಬಲಗೊಳಿಸುತ್ತೇನೆ ಎಂದು ನೂತನ ತಾಲೂಕು ಅಧ್ಯಕ್ಷ ಬೈರಾಪುರ ಮಂಜುನಾಥ್ ಅವರು ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಕರವೇ(ನಾರಾಯಣಗೌಡ ಬಣ) ಜಿಲ್ಲಾಧ್ಯಕ್ಷ ಪುರುಷೋತ್ತ ಅವರ ನೇತೃತ್ವದಲ್ಲಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ಕನ್ನಡ ಎಂದರೆ ಕೇವಲ ಭಾಷೆ ಮಾತ್ರವಲ್ಲ. ಕನ್ನಡ ಎಂದರೆ ನಮ್ಮ ಉಸಿರು, ರಾಜ್ಯದ ಸಂಸ್ಕೃತಿ, ಪರಿಸರ, ಆಹಾರ, ಉಡುಗೆ ತೊಡುಗೆ ಬಿಂಬಿಸುವ ಪದ್ಧತಿಯಾಗಿದೆ ಎಂದರು.
ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ.60 ಕನ್ನಡ ಬಳಸಬೇಕು ಎಂದು ಸರ್ಕಾರ ಸೂಚನೆ ನೀಡಿದೆ. ಒಂದು ವೇಳೆ ಸರ್ಕಾರದ ಆದೇಶವನ್ನು ನಿರ್ಲಕ್ಷ್ಯ ಮಾಡಿದರೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ಮಾಡಿ ಕನ್ನಡ ಬಳಕೆಗೆ ಒತ್ತು ನೀಡುವಂತೆ ಮನವರಿಕೆ ಮಾಡಲಾಗುವುದು ಎಂದರು.
ನಂತರ ಕರವೇ ಜಿಲ್ಲಾಧ್ಯಕ್ಷ ಪುರುಷೋತ್ತಮ ಗೌಡ ಮಾತನಾಡಿ, ದೊಡ್ಡಬಳ್ಳಾಪುರ ತಾಲೂಕು ಕರವೇ ನೂತನ ಅಧ್ಯಕ್ಷರಾಗಿ ಆಯ್ಕೆಯಾದಂತಹ ಮಂಜುನಾಥ್ ಅವರಿಗೆ ಅಭಿನಂದನೆ. ಕರುನಾಡಲ್ಲಿ ಕನ್ನಡವನ್ನು ಉತ್ತುಂಗಕ್ಕೆ ತೆಗೆದುಕೊಂಡು ಹೋಗಬೇಕು. ಕನ್ನಡತನಕ್ಕೆ ಧಕ್ಕೆ ಉಂಟಾಗದಂತೆ ನೋಡಿಕೊಳ್ಳಬೇಕು. ಜನರಲ್ಲಿ ಕನ್ನಡಾಭಿಮಾನ ಬೆಳೆಸಬೇಕು. ಈ ನಿಟ್ಟಿನಲ್ಲಿ ನಾವೆಲ್ಲರೂ ಕೆಲಸ ಮಾಡಬೇಕು ಎಂದು ತಿಳಿಸಿದರು.
ಕರ್ನಾಟಕದಲ್ಲಿ ಕನ್ನಡಿಗರಿಗೆ ಮೊದಲು ಉದ್ಯೋಗವಕಾಶ ಸಿಗಬೇಕು. ಕನ್ನಡಿಗರಿಗೆ ಖಾಸಗಿ ಕ್ಷೇತ್ರದಲ್ಲಿ ಉದ್ಯೋಗ ಕಡ್ಡಾಯ ಮಾಡಬೇಕು. ಸರೋಜಿನಿ ಮಹಿಷಿ ವರದಿ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.
ಈ ವೇಳೆ ಜೆಜೆ ಫೌಂಡೇಶನ್ ನ ಜೈಕುಮಾರ್, ಕರವೇ ಮುಖಂಡರು, ಸದಸ್ಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…