ಕನ್ನಡ, ನಾಡು, ನುಡಿಯನ್ನು ಉಳಿಸಿ ಬೆಳೆಸಲು ಹಾಗೂ ಸಾಮಾಜಿಕ ಸಮಸ್ಯೆಗಳ ವಿರುದ್ಧ ಹೋರಾಡಲು ನನಗೆ ಅವಕಾಶ ಮಾಡಿಕೊಟ್ಟ ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಅವರಿಗೆ ತುಂಬು ಹೃದಯ ಧನ್ಯವಾದಗಳು. ತಾಲೂಕಿನಲ್ಲಿ ಕರವೇ ನಾರಾಯಣಗೌಡ ಬಣವನ್ನು ಇನ್ನಷ್ಟು ಬಲಗೊಳಿಸುತ್ತೇನೆ ಎಂದು ನೂತನ ತಾಲೂಕು ಅಧ್ಯಕ್ಷ ಬೈರಾಪುರ ಮಂಜುನಾಥ್ ಅವರು ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಕರವೇ(ನಾರಾಯಣಗೌಡ ಬಣ) ಜಿಲ್ಲಾಧ್ಯಕ್ಷ ಪುರುಷೋತ್ತ ಅವರ ನೇತೃತ್ವದಲ್ಲಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ಕನ್ನಡ ಎಂದರೆ ಕೇವಲ ಭಾಷೆ ಮಾತ್ರವಲ್ಲ. ಕನ್ನಡ ಎಂದರೆ ನಮ್ಮ ಉಸಿರು, ರಾಜ್ಯದ ಸಂಸ್ಕೃತಿ, ಪರಿಸರ, ಆಹಾರ, ಉಡುಗೆ ತೊಡುಗೆ ಬಿಂಬಿಸುವ ಪದ್ಧತಿಯಾಗಿದೆ ಎಂದರು.
ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ.60 ಕನ್ನಡ ಬಳಸಬೇಕು ಎಂದು ಸರ್ಕಾರ ಸೂಚನೆ ನೀಡಿದೆ. ಒಂದು ವೇಳೆ ಸರ್ಕಾರದ ಆದೇಶವನ್ನು ನಿರ್ಲಕ್ಷ್ಯ ಮಾಡಿದರೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ಮಾಡಿ ಕನ್ನಡ ಬಳಕೆಗೆ ಒತ್ತು ನೀಡುವಂತೆ ಮನವರಿಕೆ ಮಾಡಲಾಗುವುದು ಎಂದರು.
ನಂತರ ಕರವೇ ಜಿಲ್ಲಾಧ್ಯಕ್ಷ ಪುರುಷೋತ್ತಮ ಗೌಡ ಮಾತನಾಡಿ, ದೊಡ್ಡಬಳ್ಳಾಪುರ ತಾಲೂಕು ಕರವೇ ನೂತನ ಅಧ್ಯಕ್ಷರಾಗಿ ಆಯ್ಕೆಯಾದಂತಹ ಮಂಜುನಾಥ್ ಅವರಿಗೆ ಅಭಿನಂದನೆ. ಕರುನಾಡಲ್ಲಿ ಕನ್ನಡವನ್ನು ಉತ್ತುಂಗಕ್ಕೆ ತೆಗೆದುಕೊಂಡು ಹೋಗಬೇಕು. ಕನ್ನಡತನಕ್ಕೆ ಧಕ್ಕೆ ಉಂಟಾಗದಂತೆ ನೋಡಿಕೊಳ್ಳಬೇಕು. ಜನರಲ್ಲಿ ಕನ್ನಡಾಭಿಮಾನ ಬೆಳೆಸಬೇಕು. ಈ ನಿಟ್ಟಿನಲ್ಲಿ ನಾವೆಲ್ಲರೂ ಕೆಲಸ ಮಾಡಬೇಕು ಎಂದು ತಿಳಿಸಿದರು.
ಕರ್ನಾಟಕದಲ್ಲಿ ಕನ್ನಡಿಗರಿಗೆ ಮೊದಲು ಉದ್ಯೋಗವಕಾಶ ಸಿಗಬೇಕು. ಕನ್ನಡಿಗರಿಗೆ ಖಾಸಗಿ ಕ್ಷೇತ್ರದಲ್ಲಿ ಉದ್ಯೋಗ ಕಡ್ಡಾಯ ಮಾಡಬೇಕು. ಸರೋಜಿನಿ ಮಹಿಷಿ ವರದಿ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.
ಈ ವೇಳೆ ಜೆಜೆ ಫೌಂಡೇಶನ್ ನ ಜೈಕುಮಾರ್, ಕರವೇ ಮುಖಂಡರು, ಸದಸ್ಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…