ಕರವೇ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರ‌ ಬಂಧನ: ಬಂಧನದಿಂದ ಬಿಡುಗಡೆಗಾಗಿ ಕರವೇ ಆಗ್ರಹ

ಡಿ.27ರಂದು ಕನ್ನಡದ ನಾಮಫಲಕದ ಅಭಿಯಾನದ ವೇಳೆ, ಇಂಗ್ಲಿಷ್ ಹಾಗೂ ಹಿಂದಿ ನಾಮಫಲಕಗಳನ್ನು ತೆಗೆದು ಎಸೆಯುವ ಮೂಲಕ ಕನ್ನಡ ಜಾಗೃತಿ ಮೂಡಿಸುವ ಸಂದರ್ಭದಲ್ಲಿ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಮತ್ತು ಕಾರ್ಯಕರ್ತರನ್ನು ಬಂಧಿಸಿರುವುದು ಖಂಡನೀಯ. ಕೂಡಲೇ ಬಂಧನಕ್ಕೆ‌ ಒಳಗಾದವರನ್ನ ಬಿಡುಗಡೆ ಮಾಡಬೇಕು ಎಂದು ಕರವೇ ತಾಲೂಕು ಅಧ್ಯಕ್ಷ ಪುರುಷೋತ್ತಮ‌ ಗೌಡ ಒತ್ತಾಯಿಸಿದರು.

ನಾರಾಯಣಗೌಡ ಅವರ ಆದೇಶದಂತೆ, ರಾಜ್ಯ ಉಪಾಧ್ಯಕ್ಷರಾದ ಪುಟ್ಟೇಗೌಡ, ರಾಜ್ಯ ಮಹಿಳಾ ಘಟಕ ಉಪಾಧ್ಯಕ್ಷರಾದ ಅನುಪೂರ್ಣ ಅವರ ಮಾರ್ಗದರ್ಶನದಂತೆ ಕಡ್ಡಾಯ ಕನ್ನಡ ನಾಮಫಲಕ ಹಾಕುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ವೇಳೆ ಕರ್ನಾಟಕ ರಕ್ಷಣಾ ವೇದಿಕೆ  ಅಧ್ಯಕ್ಷ ನಾರಾಯಣಗೌಡರನ್ನ ಬಂಧಿಸಿರುವುದಕ್ಕೆ ಕರವೇ ಕಾರ್ಯಕರ್ತರು ಖಂಡಿಸಿ ನಗರದ ತಾಲೂಕು ಕಚೇರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಕೂಡಲೇ ಬಂಧನದಿಂದ ಬಿಡುಗಡೆಗೊಳಿಸುವಂತೆ ಆಗ್ರಹಿಸಿದರು. ಈ ವೇಳೆ ಅವರು ಮಾತನಾಡಿದರು.

ಒಂದು ವೇಳೆ ಬಿಡುಗಡೆ ಮಾಡದಿದ್ದರೆ ಉಗ್ರವಾದ ಹೋರಾಟ‌ ಮಾಡಲಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಲಾಯಿತು.

ಕನ್ನಡ ಭಾಷೆಯನ್ನ ಉಳಿಸಿ ಬೆಳೆಸಲು ನಿರಂತರವಾಗಿ ಹೋರಾಟ ಮಾಡುತ್ತೇವೆ. ನಮ್ಮ ಹೋರಾಟವನ್ನ ಹತ್ತಿಕ್ಕುವ ಕೆಲಸ ಸರ್ಕಾರ ಮಾಡಬಾರದು. ಕನ್ನಡ ನೆಲ, ಜಲ, ಭಾಷೆಗಾಗಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು.

ಈ ವೇಳೆ ಕಾರ್ಯಕರ್ತರು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

  ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…

7 hours ago

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

9 hours ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

9 hours ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

10 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

11 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

16 hours ago