ಡಿ.27ರಂದು ಕನ್ನಡದ ನಾಮಫಲಕದ ಅಭಿಯಾನದ ವೇಳೆ, ಇಂಗ್ಲಿಷ್ ಹಾಗೂ ಹಿಂದಿ ನಾಮಫಲಕಗಳನ್ನು ತೆಗೆದು ಎಸೆಯುವ ಮೂಲಕ ಕನ್ನಡ ಜಾಗೃತಿ ಮೂಡಿಸುವ ಸಂದರ್ಭದಲ್ಲಿ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಮತ್ತು ಕಾರ್ಯಕರ್ತರನ್ನು ಬಂಧಿಸಿರುವುದು ಖಂಡನೀಯ. ಕೂಡಲೇ ಬಂಧನಕ್ಕೆ ಒಳಗಾದವರನ್ನ ಬಿಡುಗಡೆ ಮಾಡಬೇಕು ಎಂದು ಕರವೇ ತಾಲೂಕು ಅಧ್ಯಕ್ಷ ಪುರುಷೋತ್ತಮ ಗೌಡ ಒತ್ತಾಯಿಸಿದರು.
ನಾರಾಯಣಗೌಡ ಅವರ ಆದೇಶದಂತೆ, ರಾಜ್ಯ ಉಪಾಧ್ಯಕ್ಷರಾದ ಪುಟ್ಟೇಗೌಡ, ರಾಜ್ಯ ಮಹಿಳಾ ಘಟಕ ಉಪಾಧ್ಯಕ್ಷರಾದ ಅನುಪೂರ್ಣ ಅವರ ಮಾರ್ಗದರ್ಶನದಂತೆ ಕಡ್ಡಾಯ ಕನ್ನಡ ನಾಮಫಲಕ ಹಾಕುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ವೇಳೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡರನ್ನ ಬಂಧಿಸಿರುವುದಕ್ಕೆ ಕರವೇ ಕಾರ್ಯಕರ್ತರು ಖಂಡಿಸಿ ನಗರದ ತಾಲೂಕು ಕಚೇರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಕೂಡಲೇ ಬಂಧನದಿಂದ ಬಿಡುಗಡೆಗೊಳಿಸುವಂತೆ ಆಗ್ರಹಿಸಿದರು. ಈ ವೇಳೆ ಅವರು ಮಾತನಾಡಿದರು.
ಒಂದು ವೇಳೆ ಬಿಡುಗಡೆ ಮಾಡದಿದ್ದರೆ ಉಗ್ರವಾದ ಹೋರಾಟ ಮಾಡಲಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಲಾಯಿತು.
ಕನ್ನಡ ಭಾಷೆಯನ್ನ ಉಳಿಸಿ ಬೆಳೆಸಲು ನಿರಂತರವಾಗಿ ಹೋರಾಟ ಮಾಡುತ್ತೇವೆ. ನಮ್ಮ ಹೋರಾಟವನ್ನ ಹತ್ತಿಕ್ಕುವ ಕೆಲಸ ಸರ್ಕಾರ ಮಾಡಬಾರದು. ಕನ್ನಡ ನೆಲ, ಜಲ, ಭಾಷೆಗಾಗಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು.
ಈ ವೇಳೆ ಕಾರ್ಯಕರ್ತರು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…
ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…
ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್, ಚಾಕುವಿನಿಂದ…