ಕರವೇ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರ‌ ಬಂಧನ: ಬಂಧನದಿಂದ ಬಿಡುಗಡೆಗಾಗಿ ಕರವೇ ಆಗ್ರಹ

ಡಿ.27ರಂದು ಕನ್ನಡದ ನಾಮಫಲಕದ ಅಭಿಯಾನದ ವೇಳೆ, ಇಂಗ್ಲಿಷ್ ಹಾಗೂ ಹಿಂದಿ ನಾಮಫಲಕಗಳನ್ನು ತೆಗೆದು ಎಸೆಯುವ ಮೂಲಕ ಕನ್ನಡ ಜಾಗೃತಿ ಮೂಡಿಸುವ ಸಂದರ್ಭದಲ್ಲಿ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಮತ್ತು ಕಾರ್ಯಕರ್ತರನ್ನು ಬಂಧಿಸಿರುವುದು ಖಂಡನೀಯ. ಕೂಡಲೇ ಬಂಧನಕ್ಕೆ‌ ಒಳಗಾದವರನ್ನ ಬಿಡುಗಡೆ ಮಾಡಬೇಕು ಎಂದು ಕರವೇ ತಾಲೂಕು ಅಧ್ಯಕ್ಷ ಪುರುಷೋತ್ತಮ‌ ಗೌಡ ಒತ್ತಾಯಿಸಿದರು.

ನಾರಾಯಣಗೌಡ ಅವರ ಆದೇಶದಂತೆ, ರಾಜ್ಯ ಉಪಾಧ್ಯಕ್ಷರಾದ ಪುಟ್ಟೇಗೌಡ, ರಾಜ್ಯ ಮಹಿಳಾ ಘಟಕ ಉಪಾಧ್ಯಕ್ಷರಾದ ಅನುಪೂರ್ಣ ಅವರ ಮಾರ್ಗದರ್ಶನದಂತೆ ಕಡ್ಡಾಯ ಕನ್ನಡ ನಾಮಫಲಕ ಹಾಕುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ವೇಳೆ ಕರ್ನಾಟಕ ರಕ್ಷಣಾ ವೇದಿಕೆ  ಅಧ್ಯಕ್ಷ ನಾರಾಯಣಗೌಡರನ್ನ ಬಂಧಿಸಿರುವುದಕ್ಕೆ ಕರವೇ ಕಾರ್ಯಕರ್ತರು ಖಂಡಿಸಿ ನಗರದ ತಾಲೂಕು ಕಚೇರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಕೂಡಲೇ ಬಂಧನದಿಂದ ಬಿಡುಗಡೆಗೊಳಿಸುವಂತೆ ಆಗ್ರಹಿಸಿದರು. ಈ ವೇಳೆ ಅವರು ಮಾತನಾಡಿದರು.

ಒಂದು ವೇಳೆ ಬಿಡುಗಡೆ ಮಾಡದಿದ್ದರೆ ಉಗ್ರವಾದ ಹೋರಾಟ‌ ಮಾಡಲಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಲಾಯಿತು.

ಕನ್ನಡ ಭಾಷೆಯನ್ನ ಉಳಿಸಿ ಬೆಳೆಸಲು ನಿರಂತರವಾಗಿ ಹೋರಾಟ ಮಾಡುತ್ತೇವೆ. ನಮ್ಮ ಹೋರಾಟವನ್ನ ಹತ್ತಿಕ್ಕುವ ಕೆಲಸ ಸರ್ಕಾರ ಮಾಡಬಾರದು. ಕನ್ನಡ ನೆಲ, ಜಲ, ಭಾಷೆಗಾಗಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು.

ಈ ವೇಳೆ ಕಾರ್ಯಕರ್ತರು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

10 hours ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

15 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

19 hours ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

22 hours ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

2 days ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

2 days ago