ಕರವೇ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರ‌ ಬಂಧನ: ಬಂಧನದಿಂದ ಬಿಡುಗಡೆಗಾಗಿ ಕರವೇ ಆಗ್ರಹ

ಡಿ.27ರಂದು ಕನ್ನಡದ ನಾಮಫಲಕದ ಅಭಿಯಾನದ ವೇಳೆ, ಇಂಗ್ಲಿಷ್ ಹಾಗೂ ಹಿಂದಿ ನಾಮಫಲಕಗಳನ್ನು ತೆಗೆದು ಎಸೆಯುವ ಮೂಲಕ ಕನ್ನಡ ಜಾಗೃತಿ ಮೂಡಿಸುವ ಸಂದರ್ಭದಲ್ಲಿ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಮತ್ತು ಕಾರ್ಯಕರ್ತರನ್ನು ಬಂಧಿಸಿರುವುದು ಖಂಡನೀಯ. ಕೂಡಲೇ ಬಂಧನಕ್ಕೆ‌ ಒಳಗಾದವರನ್ನ ಬಿಡುಗಡೆ ಮಾಡಬೇಕು ಎಂದು ಕರವೇ ತಾಲೂಕು ಅಧ್ಯಕ್ಷ ಪುರುಷೋತ್ತಮ‌ ಗೌಡ ಒತ್ತಾಯಿಸಿದರು.

ನಾರಾಯಣಗೌಡ ಅವರ ಆದೇಶದಂತೆ, ರಾಜ್ಯ ಉಪಾಧ್ಯಕ್ಷರಾದ ಪುಟ್ಟೇಗೌಡ, ರಾಜ್ಯ ಮಹಿಳಾ ಘಟಕ ಉಪಾಧ್ಯಕ್ಷರಾದ ಅನುಪೂರ್ಣ ಅವರ ಮಾರ್ಗದರ್ಶನದಂತೆ ಕಡ್ಡಾಯ ಕನ್ನಡ ನಾಮಫಲಕ ಹಾಕುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ವೇಳೆ ಕರ್ನಾಟಕ ರಕ್ಷಣಾ ವೇದಿಕೆ  ಅಧ್ಯಕ್ಷ ನಾರಾಯಣಗೌಡರನ್ನ ಬಂಧಿಸಿರುವುದಕ್ಕೆ ಕರವೇ ಕಾರ್ಯಕರ್ತರು ಖಂಡಿಸಿ ನಗರದ ತಾಲೂಕು ಕಚೇರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಕೂಡಲೇ ಬಂಧನದಿಂದ ಬಿಡುಗಡೆಗೊಳಿಸುವಂತೆ ಆಗ್ರಹಿಸಿದರು. ಈ ವೇಳೆ ಅವರು ಮಾತನಾಡಿದರು.

ಒಂದು ವೇಳೆ ಬಿಡುಗಡೆ ಮಾಡದಿದ್ದರೆ ಉಗ್ರವಾದ ಹೋರಾಟ‌ ಮಾಡಲಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಲಾಯಿತು.

ಕನ್ನಡ ಭಾಷೆಯನ್ನ ಉಳಿಸಿ ಬೆಳೆಸಲು ನಿರಂತರವಾಗಿ ಹೋರಾಟ ಮಾಡುತ್ತೇವೆ. ನಮ್ಮ ಹೋರಾಟವನ್ನ ಹತ್ತಿಕ್ಕುವ ಕೆಲಸ ಸರ್ಕಾರ ಮಾಡಬಾರದು. ಕನ್ನಡ ನೆಲ, ಜಲ, ಭಾಷೆಗಾಗಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು.

ಈ ವೇಳೆ ಕಾರ್ಯಕರ್ತರು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

3 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

7 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

14 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

15 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago