ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಮತ್ತು ಪುಟ್ಟೇಗೌಡರು ಸಣ್ಣೀರಪ್ಪ, ಕಾರ್ಯಕರ್ತರನ್ನು ಬಂಧನದಿಂದ ಬಿಡುಗಡೆ ಮಾಡುವಂತೆ ಕರವೇ ಮುಖಂಡರು ಶ್ರೀ ಘಾಟಿ ಸುಬ್ರಹ್ಮಣ್ಯ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಡಿ.27ರಂದು ಕನ್ನಡದ ನಾಮಫಲಕದ ಅಭಿಯಾನದ ವೇಳೆ, ಇಂಗ್ಲಿಷ್ ಹಾಗೂ ಹಿಂದಿ ನಾಮಫಲಕಗಳನ್ನು ತೆಗೆದು ಎಸೆಯುವ ಮೂಲಕ ಕನ್ನಡ ಜಾಗೃತಿ ಮೂಡಿಸುವ ಸಂದರ್ಭದಲ್ಲಿ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಮತ್ತು ಕಾರ್ಯಕರ್ತರನ್ನು ಬಂಧನ ಮಾಡಲಾಗಿತ್ತು.
ಕೂಡಲೇ ರಾಜ್ಯ ಸರ್ಕಾರ ಬಂಧನಕ್ಕೆ ಒಳಗಾದವರನ್ನ ಬಿಡುಗಡೆ ಮಾಡಬೇಕು ಎಂದು ಕರವೇ ರಾಜ್ಯ ಮಹಿಳಾ ಉಪಾಧ್ಯಕ್ಷರಾದ ಅನ್ನಪೂರ್ಣ, ತಾಲೂಕು ಕರವೇ ಅಧ್ಯಕ್ಷ ಪುರುಷೋತ್ತಮ ಗೌಡ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷವಾಗಿ ಅರ್ಚನೆ ಮಾಡಿ ಪೂಜೆಯನ್ನು ಸಲ್ಲಿಸಲಾಯಿತು.
ಈ ವೇಳೆ ಶ್ರೀನಾಥ್, ಮೆಹಬೂಬ್, ಸಂಜೀವ್ ನಾಯಕ್, ಶೋಭಾ, ಗಂಗಾ, ಗೀತಾ, ಭಾಗ್ಯಮ್ಮ ಸೇರಿದಂತೆ ಕರವೇ ಕಾರ್ಯಕರ್ತರು ಭಾಗಿಯಾಗಿದ್ದರು.
ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…
ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…
ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು…
ಮಾ.9ರ ಗುರುವಾರ ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ…
ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ…
ಭಾವ ಬಯಲಿನ ಅಕ್ಕ......... ಹಸಿವಾದಡೆ ಊರೊಳಗೆ ಭಿಕ್ಷಾನ್ನಗಳುಂಟು. ತೃಷೆಯಾದಡೆ ಕೆರೆ ಹಳ್ಳ ಬಾವಿಗಳುಂಟು. ಅಂಗಶೀತಕ್ಕೆ ಬೀಸಾಟ ಅರಿವೆಗಳುಂಟು. ಶಯನಕ್ಕೆ ಹಾಳು…