ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2025-26ರ ಜನವರಿ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಿದ್ದು, ಸ್ನಾತಕ ಕೋರ್ಸುಗಳಾದ ಬಿ.ಎ, ಬಿ.ಕಾಂ, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್.ಡಬ್ಲ್ಯೂ, ಬಿ.ಎಸ್ಸಿ, ಬಿ.ಲಿಬ್.ಐ.ಎಸ್ಪಿ ಮತ್ತು ಸ್ನಾತಕೋತ್ತರ ಕೋರ್ಸುಗಳಾದ ಎಂ.ಎ, ಎಂ.ಕಾಂ, ಎಂ.ಬಿ.ಎ, ಎಂ.ಸಿ.ಎ, ಎಂ.ಎಸ್.ಡಬ್ಲ್ಯೂ, ಎಂ.ಎಸ್ಸಿ, ಎಂ.ಲಿಬ್.ಐ.ಎಸ್ಸಿ ಹಾಗೂ ಯುಜಿ/ಪಿಜಿ ಡಿಪ್ಲೊಮಾ ಮತ್ತು ಸರ್ಟಿಫಿಕೇಟ್ ಕೋರ್ಸ್ ಗಳಿಗಾಗಿ ಜ. 09 ರಿಂದ ಬೆಂಗಳೂರು ಪ್ರಾದೇಶಿಕ ಕೇಂದ್ರ-01, ಬಾಪೂಜಿನಗರ ಇಲ್ಲಿ ಆನ್ ಲೈನ್ ಮೂಲಕ ಪ್ರವೇಶಾತಿಯನ್ನು ಪ್ರಾರಂಭಿಸಲಾಗಿದ್ದು, ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ www.ksoumysuru.ac.in ದಲ್ಲಿ ಪ್ರವೇಶಾತಿಗೆ ಲಾಗಿನ್ ಮಾಡಬಹುದು.
ಅಸಕ್ತ ಅರ್ಹ ವಿದ್ಯಾರ್ಥಿಗಳು online ನಲ್ಲಿ ಅರ್ಜಿ ಸಲ್ಲಿಸಿ ನಂತರ ಅಗತ್ಯ ದಾಖಲಾತಿಗಳೊಂದಿಗೆ ಪ್ರಾದೇಶಿಕ ಕೇಂದ್ರಕ್ಕೆ ಭೇಟಿ ನೀಡಿ, ಪ್ರವೇಶಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಳ್ಳಬೇಕು. ಹೆಚ್ಚಿನ ವಿವರಗಳಿಗೆ ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ-01, ಮೊದಲನೇ ಮಹಡಿ, ಕೆ.ಎಸ್.ಆರ್.ಟಿ.ಸಿ. ಸ್ಯಾಟಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-26, ಕಚೇರಿ ದೂ. 080-26603664 ಅಥವಾ 9880526439/ 9019526439 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿರ್ದೇಶಕರಾದ ಡಾ. ರೋಹಿತ್ ಹೆಚ್.ಎಸ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…