ಕರುಣಾನಿಧಿ ಪುತ್ರ ಎಂ.ಕೆ ಅಳಗಿರಿ ಆಪ್ತನ ಮೇಲೆ ಡೆಡ್ಲಿ ಅಟ್ಯಾಕ್

ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ಪುತ್ರ ಎಂ.ಕೆ ಅಳಗಿರಿ ಆಪ್ತರಾಗಿದ್ದ ವಿ.ಕೆ.ಗುರುಸ್ವಾಮಿ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬಾಣಸವಾಡಿಯ ಕಮ್ಮನಹಳ್ಳಿ ಸುಖಸಾಗರ್ ಹೋಟೆಲ್​ನಲ್ಲಿ ಟೀ ಕುಡಿಯುವಾಗ ನಡೆದಿದೆ.

ಗುರುಸ್ವಾಮಿ ತಲೆ ಭಾಗಕ್ಕೆ ಲಾಂಗ್ ನಿಂದ ಹಲ್ಲೆ ನಡೆಸಲಾಗಿದೆ. ತೀವ್ರವಾಗಿ ಪೆಟ್ಟಾಗಿದ್ದರಿಂದ ಚಿಕಿತ್ಸೆಗಾಗಿ ಗುರುಸ್ವಾಮಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಮಿಳುನಾಡಿನಿಂದ ಕಾರಿನಲ್ಲೇ ಫಾಲೋ ಮಾಡಿಕೊಂಡು ಬಂದಿದ್ದ ಐವರು ಹಂತಕರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

ವಿ.ಕೆ ಗುರುಸ್ವಾಮಿ ಮಧುರೈ ಮೂಲದವರು. ಮಧುರೈ ಕಾರ್ಪೊರೇಷನ್‌ ಮಾಜಿ ಅಧ್ಯಕ್ಷ ಆಗಿದ್ದರು. ಕೊಲೆ ಮತ್ತು ಅಕ್ರಮ ಶಸ್ತ್ರಾಸ್ತ್ರಗಳನ್ನು ಹೊಂದಿರುವ ವಿವಿಧ ಪ್ರಕರಣಗಳಲ್ಲಿ ಗುರುಸ್ವಾಮಿ ಆರೋಪಿ. ತಮಿಳುನಾಡಿನ ನಟೋರಿಯಸ್​ ರೌಡಿ ಕೂಡ ಆಗಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

ಲಿಟಿಗೇಷನ್ ಇರೋ ಸೈಟ್ ವಿಚಾರವಾಗಿ ಮಾತುಕತೆಗೆ ಬೆಂಗಳೂರಿಗೆ ಬಂದಿದ್ದ ಗುರುಸ್ವಾಮಿ. ಹೋಟೆಲ್​ವೊಂದರಲ್ಲಿ ರೂಂ ಮಾಡಿಕೊಂಡು ಇದ್ದು, ಇಡೀ ದಿನ ಮನೆಯೊಂದು ಹುಡುಕಿ ಸೈಟ್​ ಬಗ್ಗೆ ಗುರುಸ್ವಾಮಿ ಮಾತಾಡುತ್ತಿದ್ದರು ಎನ್ನಲಾಗಿದೆ.

ಈ ಕುರಿತು ಬ್ರೋಕರ್​ ಜತೆ ಮಾತಾಡುವಾಗ ತಮಿಳುನಾಡು ರಿಜಿಸ್ಟ್ರೇಷನ್​ ಕಾರಿನಲ್ಲಿ ಬಂದು ಏಕಾಏಕಿ ಅಟ್ಯಾಕ್​ ಮಾಡಿದ್ದಾರೆ. ಸದ್ಯ ಸ್ಥಳಕ್ಕೆ ಪೂರ್ವ ವಿಭಾಗ ಡಿಸಿಪಿ ಭೀಮಾಶಂಕರ್ ಗುಳೇದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ramesh Babu

Journalist

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

5 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

20 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago