ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ಪುತ್ರ ಎಂ.ಕೆ ಅಳಗಿರಿ ಆಪ್ತರಾಗಿದ್ದ ವಿ.ಕೆ.ಗುರುಸ್ವಾಮಿ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬಾಣಸವಾಡಿಯ ಕಮ್ಮನಹಳ್ಳಿ ಸುಖಸಾಗರ್ ಹೋಟೆಲ್ನಲ್ಲಿ ಟೀ ಕುಡಿಯುವಾಗ ನಡೆದಿದೆ.
ಗುರುಸ್ವಾಮಿ ತಲೆ ಭಾಗಕ್ಕೆ ಲಾಂಗ್ ನಿಂದ ಹಲ್ಲೆ ನಡೆಸಲಾಗಿದೆ. ತೀವ್ರವಾಗಿ ಪೆಟ್ಟಾಗಿದ್ದರಿಂದ ಚಿಕಿತ್ಸೆಗಾಗಿ ಗುರುಸ್ವಾಮಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಮಿಳುನಾಡಿನಿಂದ ಕಾರಿನಲ್ಲೇ ಫಾಲೋ ಮಾಡಿಕೊಂಡು ಬಂದಿದ್ದ ಐವರು ಹಂತಕರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.
ವಿ.ಕೆ ಗುರುಸ್ವಾಮಿ ಮಧುರೈ ಮೂಲದವರು. ಮಧುರೈ ಕಾರ್ಪೊರೇಷನ್ ಮಾಜಿ ಅಧ್ಯಕ್ಷ ಆಗಿದ್ದರು. ಕೊಲೆ ಮತ್ತು ಅಕ್ರಮ ಶಸ್ತ್ರಾಸ್ತ್ರಗಳನ್ನು ಹೊಂದಿರುವ ವಿವಿಧ ಪ್ರಕರಣಗಳಲ್ಲಿ ಗುರುಸ್ವಾಮಿ ಆರೋಪಿ. ತಮಿಳುನಾಡಿನ ನಟೋರಿಯಸ್ ರೌಡಿ ಕೂಡ ಆಗಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
ಲಿಟಿಗೇಷನ್ ಇರೋ ಸೈಟ್ ವಿಚಾರವಾಗಿ ಮಾತುಕತೆಗೆ ಬೆಂಗಳೂರಿಗೆ ಬಂದಿದ್ದ ಗುರುಸ್ವಾಮಿ. ಹೋಟೆಲ್ವೊಂದರಲ್ಲಿ ರೂಂ ಮಾಡಿಕೊಂಡು ಇದ್ದು, ಇಡೀ ದಿನ ಮನೆಯೊಂದು ಹುಡುಕಿ ಸೈಟ್ ಬಗ್ಗೆ ಗುರುಸ್ವಾಮಿ ಮಾತಾಡುತ್ತಿದ್ದರು ಎನ್ನಲಾಗಿದೆ.
ಈ ಕುರಿತು ಬ್ರೋಕರ್ ಜತೆ ಮಾತಾಡುವಾಗ ತಮಿಳುನಾಡು ರಿಜಿಸ್ಟ್ರೇಷನ್ ಕಾರಿನಲ್ಲಿ ಬಂದು ಏಕಾಏಕಿ ಅಟ್ಯಾಕ್ ಮಾಡಿದ್ದಾರೆ. ಸದ್ಯ ಸ್ಥಳಕ್ಕೆ ಪೂರ್ವ ವಿಭಾಗ ಡಿಸಿಪಿ ಭೀಮಾಶಂಕರ್ ಗುಳೇದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…