ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ಪುತ್ರ ಎಂ.ಕೆ ಅಳಗಿರಿ ಆಪ್ತರಾಗಿದ್ದ ವಿ.ಕೆ.ಗುರುಸ್ವಾಮಿ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬಾಣಸವಾಡಿಯ ಕಮ್ಮನಹಳ್ಳಿ ಸುಖಸಾಗರ್ ಹೋಟೆಲ್ನಲ್ಲಿ ಟೀ ಕುಡಿಯುವಾಗ ನಡೆದಿದೆ.
ಗುರುಸ್ವಾಮಿ ತಲೆ ಭಾಗಕ್ಕೆ ಲಾಂಗ್ ನಿಂದ ಹಲ್ಲೆ ನಡೆಸಲಾಗಿದೆ. ತೀವ್ರವಾಗಿ ಪೆಟ್ಟಾಗಿದ್ದರಿಂದ ಚಿಕಿತ್ಸೆಗಾಗಿ ಗುರುಸ್ವಾಮಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಮಿಳುನಾಡಿನಿಂದ ಕಾರಿನಲ್ಲೇ ಫಾಲೋ ಮಾಡಿಕೊಂಡು ಬಂದಿದ್ದ ಐವರು ಹಂತಕರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.
ವಿ.ಕೆ ಗುರುಸ್ವಾಮಿ ಮಧುರೈ ಮೂಲದವರು. ಮಧುರೈ ಕಾರ್ಪೊರೇಷನ್ ಮಾಜಿ ಅಧ್ಯಕ್ಷ ಆಗಿದ್ದರು. ಕೊಲೆ ಮತ್ತು ಅಕ್ರಮ ಶಸ್ತ್ರಾಸ್ತ್ರಗಳನ್ನು ಹೊಂದಿರುವ ವಿವಿಧ ಪ್ರಕರಣಗಳಲ್ಲಿ ಗುರುಸ್ವಾಮಿ ಆರೋಪಿ. ತಮಿಳುನಾಡಿನ ನಟೋರಿಯಸ್ ರೌಡಿ ಕೂಡ ಆಗಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
ಲಿಟಿಗೇಷನ್ ಇರೋ ಸೈಟ್ ವಿಚಾರವಾಗಿ ಮಾತುಕತೆಗೆ ಬೆಂಗಳೂರಿಗೆ ಬಂದಿದ್ದ ಗುರುಸ್ವಾಮಿ. ಹೋಟೆಲ್ವೊಂದರಲ್ಲಿ ರೂಂ ಮಾಡಿಕೊಂಡು ಇದ್ದು, ಇಡೀ ದಿನ ಮನೆಯೊಂದು ಹುಡುಕಿ ಸೈಟ್ ಬಗ್ಗೆ ಗುರುಸ್ವಾಮಿ ಮಾತಾಡುತ್ತಿದ್ದರು ಎನ್ನಲಾಗಿದೆ.
ಈ ಕುರಿತು ಬ್ರೋಕರ್ ಜತೆ ಮಾತಾಡುವಾಗ ತಮಿಳುನಾಡು ರಿಜಿಸ್ಟ್ರೇಷನ್ ಕಾರಿನಲ್ಲಿ ಬಂದು ಏಕಾಏಕಿ ಅಟ್ಯಾಕ್ ಮಾಡಿದ್ದಾರೆ. ಸದ್ಯ ಸ್ಥಳಕ್ಕೆ ಪೂರ್ವ ವಿಭಾಗ ಡಿಸಿಪಿ ಭೀಮಾಶಂಕರ್ ಗುಳೇದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…