ಕರುಣಾನಿಧಿ ಪುತ್ರ ಎಂ.ಕೆ ಅಳಗಿರಿ ಆಪ್ತನ ಮೇಲೆ ಡೆಡ್ಲಿ ಅಟ್ಯಾಕ್

ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ಪುತ್ರ ಎಂ.ಕೆ ಅಳಗಿರಿ ಆಪ್ತರಾಗಿದ್ದ ವಿ.ಕೆ.ಗುರುಸ್ವಾಮಿ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬಾಣಸವಾಡಿಯ ಕಮ್ಮನಹಳ್ಳಿ ಸುಖಸಾಗರ್ ಹೋಟೆಲ್​ನಲ್ಲಿ ಟೀ ಕುಡಿಯುವಾಗ ನಡೆದಿದೆ.

ಗುರುಸ್ವಾಮಿ ತಲೆ ಭಾಗಕ್ಕೆ ಲಾಂಗ್ ನಿಂದ ಹಲ್ಲೆ ನಡೆಸಲಾಗಿದೆ. ತೀವ್ರವಾಗಿ ಪೆಟ್ಟಾಗಿದ್ದರಿಂದ ಚಿಕಿತ್ಸೆಗಾಗಿ ಗುರುಸ್ವಾಮಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಮಿಳುನಾಡಿನಿಂದ ಕಾರಿನಲ್ಲೇ ಫಾಲೋ ಮಾಡಿಕೊಂಡು ಬಂದಿದ್ದ ಐವರು ಹಂತಕರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

ವಿ.ಕೆ ಗುರುಸ್ವಾಮಿ ಮಧುರೈ ಮೂಲದವರು. ಮಧುರೈ ಕಾರ್ಪೊರೇಷನ್‌ ಮಾಜಿ ಅಧ್ಯಕ್ಷ ಆಗಿದ್ದರು. ಕೊಲೆ ಮತ್ತು ಅಕ್ರಮ ಶಸ್ತ್ರಾಸ್ತ್ರಗಳನ್ನು ಹೊಂದಿರುವ ವಿವಿಧ ಪ್ರಕರಣಗಳಲ್ಲಿ ಗುರುಸ್ವಾಮಿ ಆರೋಪಿ. ತಮಿಳುನಾಡಿನ ನಟೋರಿಯಸ್​ ರೌಡಿ ಕೂಡ ಆಗಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

ಲಿಟಿಗೇಷನ್ ಇರೋ ಸೈಟ್ ವಿಚಾರವಾಗಿ ಮಾತುಕತೆಗೆ ಬೆಂಗಳೂರಿಗೆ ಬಂದಿದ್ದ ಗುರುಸ್ವಾಮಿ. ಹೋಟೆಲ್​ವೊಂದರಲ್ಲಿ ರೂಂ ಮಾಡಿಕೊಂಡು ಇದ್ದು, ಇಡೀ ದಿನ ಮನೆಯೊಂದು ಹುಡುಕಿ ಸೈಟ್​ ಬಗ್ಗೆ ಗುರುಸ್ವಾಮಿ ಮಾತಾಡುತ್ತಿದ್ದರು ಎನ್ನಲಾಗಿದೆ.

ಈ ಕುರಿತು ಬ್ರೋಕರ್​ ಜತೆ ಮಾತಾಡುವಾಗ ತಮಿಳುನಾಡು ರಿಜಿಸ್ಟ್ರೇಷನ್​ ಕಾರಿನಲ್ಲಿ ಬಂದು ಏಕಾಏಕಿ ಅಟ್ಯಾಕ್​ ಮಾಡಿದ್ದಾರೆ. ಸದ್ಯ ಸ್ಥಳಕ್ಕೆ ಪೂರ್ವ ವಿಭಾಗ ಡಿಸಿಪಿ ಭೀಮಾಶಂಕರ್ ಗುಳೇದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ramesh Babu

Journalist

Recent Posts

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

2 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

4 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

7 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

21 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

1 day ago