ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದ ರೈಲ್ವೆ ನಿಲ್ದಾಣದ ಬಳಿ ಮೇ 31, 2025ರಂದು ನಡೆದ ಒಂದು ಕರುಳು ಹಿಂಡುವ ಘಟನೆಯಲ್ಲಿ, 30 ವರ್ಷದ ಮಾನಸಿಕ ಅಸ್ವಸ್ಥಳಾದ ತುಂಬು ಗರ್ಭಿಣಿ ರೇಣುಕಾ… ಬೀದಿಯಲ್ಲಿ ಶವವಾಗಿ ಕಂಡುಬಂದಿದ್ದಾಳೆ.
ಜಂಗಮಕೋಟೆ ಮೂಲದ ಮಾನಸಿಕ ಅಸ್ವಸ್ಥಳಾದ ಈ ಮಹಿಳೆ, ದಿಕ್ಕು ದೆಸೆಯಿಲ್ಲದೆ ಬೀದಿಗಳಲ್ಲಿ ಅಲೆದಾಡುತ್ತಿದ್ದವಳು.
ಆಕೆಯನ್ನು ಯಾರೋ ದುಷ್ಕರ್ಮಿಗಳು ದೈಹಿಕವಾಗಿ ದುರ್ಬಳಕೆ ಮಾಡಿ ಗರ್ಭಿಣಿಯನ್ನಾಗಿ ಮಾಡಿದ್ದರು ಎಂಬ ಆರೋಪ ಕೇಳಿಬಂದಿದೆ…
8 ತಿಂಗಳ ಗರ್ಭಿಣಿಯಾಗಿದ್ದ ಆಕೆ, ರೈಲ್ವೆ ನಿಲ್ದಾಣದ ಬಳಿ ಮಲಗಿದ್ದ ಸ್ಥಿತಿಯಲ್ಲೇ ಮೃತಪಟ್ಟಿದ್ದಾಳೆ. ಈ ಘಟನೆಯು ಸಮಾಜದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ದಿಕ್ಕಿಲ್ಲದವರಿಗೆ ಸೂಕ್ತ ರಕ್ಷಣೆಯ ಕೊರತೆಯನ್ನು ಎತ್ತಿ ತೋರಿಸಿದೆ. ರೇಣುಕಾಳ ದಾರುಣ ಅಂತ್ಯವು ಸಮಾಜವನ್ನು ತಲೆತಗ್ಗಿಸುವಂತೆ ಮಾಡಿದೆ.
ಈ ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯ ಪಿಎಸ್ಐ ವೇಣುಗೋಪಾಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕರ್ತವ್ಯದ ಜೊತೆಗೆ, ಅವರು ರೇಣುಕಾಳ ಶವವನ್ನು ಸಂಸ್ಕಾರಕ್ಕೆ ಒಯ್ಯಲು ಆರ್ಥಿಕ ಸಹಾಯವನ್ನು ಒದಗಿಸಿ, ಮಾನವೀಯತೆ ಮೆರೆದಿದ್ದಾರೆ.
ಈ ಕಾರ್ಯಕ್ಕೆ ಸ್ಥಳೀಯರು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವೇಣುಗೋಪಾಲ್ರಿಗೆ ಮೆಚ್ಚುಗೆ ವ್ಯಕ್ತವಾಗಿದೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…