ಕರುಳು ಹಿಂಡುವ ಘಟನೆ: ಮಾನಸಿಕ ಅಸ್ವಸ್ಥೆ ತುಂಬು ಗರ್ಭಿಣಿ ಬೀದಿಯಲ್ಲಿ ಶವವಾಗಿ ಪತ್ತೆ….!

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದ ರೈಲ್ವೆ ನಿಲ್ದಾಣದ ಬಳಿ ಮೇ 31, 2025ರಂದು ನಡೆದ ಒಂದು ಕರುಳು ಹಿಂಡುವ ಘಟನೆಯಲ್ಲಿ, 30 ವರ್ಷದ ಮಾನಸಿಕ ಅಸ್ವಸ್ಥಳಾದ ತುಂಬು ಗರ್ಭಿಣಿ ರೇಣುಕಾ… ಬೀದಿಯಲ್ಲಿ ಶವವಾಗಿ ಕಂಡುಬಂದಿದ್ದಾಳೆ.

ಜಂಗಮಕೋಟೆ ಮೂಲದ ಮಾನಸಿಕ ಅಸ್ವಸ್ಥಳಾದ ಈ ಮಹಿಳೆ, ದಿಕ್ಕು ದೆಸೆಯಿಲ್ಲದೆ ಬೀದಿಗಳಲ್ಲಿ ಅಲೆದಾಡುತ್ತಿದ್ದವಳು.

ಆಕೆಯನ್ನು ಯಾರೋ ದುಷ್ಕರ್ಮಿಗಳು ದೈಹಿಕವಾಗಿ ದುರ್ಬಳಕೆ ಮಾಡಿ ಗರ್ಭಿಣಿಯನ್ನಾಗಿ ಮಾಡಿದ್ದರು ಎಂಬ ಆರೋಪ ಕೇಳಿಬಂದಿದೆ…

8 ತಿಂಗಳ ಗರ್ಭಿಣಿಯಾಗಿದ್ದ ಆಕೆ, ರೈಲ್ವೆ ನಿಲ್ದಾಣದ ಬಳಿ ಮಲಗಿದ್ದ ಸ್ಥಿತಿಯಲ್ಲೇ ಮೃತಪಟ್ಟಿದ್ದಾಳೆ. ಈ ಘಟನೆಯು ಸಮಾಜದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ದಿಕ್ಕಿಲ್ಲದವರಿಗೆ ಸೂಕ್ತ ರಕ್ಷಣೆಯ ಕೊರತೆಯನ್ನು ಎತ್ತಿ ತೋರಿಸಿದೆ. ರೇಣುಕಾಳ ದಾರುಣ ಅಂತ್ಯವು ಸಮಾಜವನ್ನು ತಲೆತಗ್ಗಿಸುವಂತೆ ಮಾಡಿದೆ.

ಈ ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯ ಪಿಎಸ್‌ಐ ವೇಣುಗೋಪಾಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕರ್ತವ್ಯದ ಜೊತೆಗೆ, ಅವರು ರೇಣುಕಾಳ ಶವವನ್ನು ಸಂಸ್ಕಾರಕ್ಕೆ ಒಯ್ಯಲು ಆರ್ಥಿಕ ಸಹಾಯವನ್ನು ಒದಗಿಸಿ, ಮಾನವೀಯತೆ ಮೆರೆದಿದ್ದಾರೆ.

ಈ ಕಾರ್ಯಕ್ಕೆ ಸ್ಥಳೀಯರು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವೇಣುಗೋಪಾಲ್‌ರಿಗೆ ಮೆಚ್ಚುಗೆ ವ್ಯಕ್ತವಾಗಿದೆ.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

15 hours ago

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

1 day ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

1 day ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

1 day ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

1 day ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

2 days ago