ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದ ರೈಲ್ವೆ ನಿಲ್ದಾಣದ ಬಳಿ ಮೇ 31, 2025ರಂದು ನಡೆದ ಒಂದು ಕರುಳು ಹಿಂಡುವ ಘಟನೆಯಲ್ಲಿ, 30 ವರ್ಷದ ಮಾನಸಿಕ ಅಸ್ವಸ್ಥಳಾದ ತುಂಬು ಗರ್ಭಿಣಿ ರೇಣುಕಾ… ಬೀದಿಯಲ್ಲಿ ಶವವಾಗಿ ಕಂಡುಬಂದಿದ್ದಾಳೆ.
ಜಂಗಮಕೋಟೆ ಮೂಲದ ಮಾನಸಿಕ ಅಸ್ವಸ್ಥಳಾದ ಈ ಮಹಿಳೆ, ದಿಕ್ಕು ದೆಸೆಯಿಲ್ಲದೆ ಬೀದಿಗಳಲ್ಲಿ ಅಲೆದಾಡುತ್ತಿದ್ದವಳು.
ಆಕೆಯನ್ನು ಯಾರೋ ದುಷ್ಕರ್ಮಿಗಳು ದೈಹಿಕವಾಗಿ ದುರ್ಬಳಕೆ ಮಾಡಿ ಗರ್ಭಿಣಿಯನ್ನಾಗಿ ಮಾಡಿದ್ದರು ಎಂಬ ಆರೋಪ ಕೇಳಿಬಂದಿದೆ…
8 ತಿಂಗಳ ಗರ್ಭಿಣಿಯಾಗಿದ್ದ ಆಕೆ, ರೈಲ್ವೆ ನಿಲ್ದಾಣದ ಬಳಿ ಮಲಗಿದ್ದ ಸ್ಥಿತಿಯಲ್ಲೇ ಮೃತಪಟ್ಟಿದ್ದಾಳೆ. ಈ ಘಟನೆಯು ಸಮಾಜದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ದಿಕ್ಕಿಲ್ಲದವರಿಗೆ ಸೂಕ್ತ ರಕ್ಷಣೆಯ ಕೊರತೆಯನ್ನು ಎತ್ತಿ ತೋರಿಸಿದೆ. ರೇಣುಕಾಳ ದಾರುಣ ಅಂತ್ಯವು ಸಮಾಜವನ್ನು ತಲೆತಗ್ಗಿಸುವಂತೆ ಮಾಡಿದೆ.
ಈ ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯ ಪಿಎಸ್ಐ ವೇಣುಗೋಪಾಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕರ್ತವ್ಯದ ಜೊತೆಗೆ, ಅವರು ರೇಣುಕಾಳ ಶವವನ್ನು ಸಂಸ್ಕಾರಕ್ಕೆ ಒಯ್ಯಲು ಆರ್ಥಿಕ ಸಹಾಯವನ್ನು ಒದಗಿಸಿ, ಮಾನವೀಯತೆ ಮೆರೆದಿದ್ದಾರೆ.
ಈ ಕಾರ್ಯಕ್ಕೆ ಸ್ಥಳೀಯರು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವೇಣುಗೋಪಾಲ್ರಿಗೆ ಮೆಚ್ಚುಗೆ ವ್ಯಕ್ತವಾಗಿದೆ.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…