ಪಿಜಿ ಮಾಡುವುದಾಗಿ ಹೇಳಿ ಮದ್ಯದ ಅಂಗಡಿ ತೆರೆಯಲು ಸಿದ್ಧತೆ ಮಾಡಿಕೊಂಡಿದ್ದು , ಮದ್ಯದ ಅಂಗಡಿ ತೆರೆಯಲು ಅನುಮತಿ ನೀಡಬಾರದು ಎಂದು ನಗರದ ಅಬಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕರೇನಹಳ್ಳಿ ನಿವಾಸಿಗಳು.
ಈ ವೇಳೆ ಮಾತನಾಡಿದ ನಗರಸಭಾ ಸದಸ್ಯೆ ಪ್ರಭಾ ಅವರು, ಅರಳುಮಲ್ಲಿಗೆ ಗ್ರಾಮ ಪಂಚಾಯಿತಿ ಮತ್ತು ನಗರಸಭೆ ವ್ಯಾಪ್ತಿಗೆ ಒಳಪಡುವ ಕರೇನಹಳ್ಳಿಯಲ್ಲಿ ಮದ್ಯದ ಅಂಗಡಿ ತೆರೆಯಲು ನರಸಿಂಹಮೂರ್ತಿ ಎಂಬ ವ್ಯಕ್ತಿ ತಯಾರಿ ನಡೆಸುತ್ತಿದ್ದಾರೆ.
ನಗರದ ವಾರ್ಡ್ ನಂ.31 ಕರೇನಹಳ್ಳಿಯಲ್ಲಿ ವಾರ್ಡ್ ಮಧ್ಯಭಾಗದಲ್ಲಿ ಮದ್ಯದ ಅಂಗಡಿ ತೆರೆಯಲಾಗಿದೆ. ಈ ಬಾರ್ ಓಪನ್ ಆಗಬಾರದು ಎಂದು ಈಗಾಗಲೇ ಅಬಕಾರಿ ಇಲಾಖೆಗೆ ಲಿಖಿತವಾಗಿ ಮನವಿ ಮಾಡಲಾಗಿತ್ತು. ಆದರೂ ಇದಕ್ಕೆ ಕ್ಯಾರೆ ಎನ್ನದೆ ಪಿಜಿ ಹೆಸರಲ್ಲಿ ಅಂಗಡಿ ತೆರೆಯಲಾಗಿದೆ ಎಂದು ತಿಳಿಸಿದರು.
ಈ ಮದ್ಯದ ಅಂಗಡಿ ಸುತ್ತಮುತ್ತಾ ದೇವಸ್ಥಾನ, ಶಾಲಾ-ಕಾಲೇಜು, ಮನೆಗಳು ಇವೆ. ಮಹಿಳಾ ಉದ್ಯೋಗಸ್ಥರು, ಶಾಲಾ-ಕಾಲೇಜು ಮಕ್ಕಳು ನಿತ್ಯ ಇದೇ ಅಂಗಡಿ ಮುಂಭಾಗದಲ್ಲಿ ಓಡಾಡಬೇಕಾಗಿದೆ. ಪ್ರತಿ ನಿತ್ಯ ಓಡಾಡಬೇಕಾದರೆ ಮಹಿಳೆಯರು, ಮಕ್ಕಳು ತುಂಬಾ ಕಿರಿಕಿರಿ ಅನುಭವಿಸುತ್ತಿದ್ದಾರೆ ಎಂದರು.
ಅಂಗಡಿ ಸುತ್ತಾಮುತ್ತಾ ಕುಡಿದ ಅಮಲಿನಲ್ಲಿ ಇರುವ ವ್ಯಕ್ತಿಗಳೇ ಇರುತ್ತಾರೆ ಮಹಿಳೆಯರು ಒಂಟಿಯಾಗಿ ಓಡಾಡಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಇದ್ದಾರೆ ಆದ್ದರಿಂದ ಕೂಡಲೇ ಈ ಅಂಗಡಿಗೆ ಬೀಗ ಹಾಕಬೇಕು ಎಂಬುದು ನಮ್ಮ ಹಕ್ಕೋತ್ತಾಯ ಎಂದು ತಿಳಿಸಿದರು.
ಅಬಕಾರಿ ನಿರೀಕ್ಷಕರ ಮಾತಿಗೆ ಒಪ್ಪದ ಸ್ಥಳೀಯರು ಇಂದು ಸಾಂಕೇತಿಕ ಪ್ರತಿಭಟನೆ ನಡೆಸಿದ್ದೇವೆ, ಬಾರ್ ತೆರಯಲು ಅನುಮತಿ ನೀಡಿದ್ದೇ ಆದಲ್ಲಿ ಮುಂದಿನ ದಿನಗಳಲ್ಲಿ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಅರಳು ಮಲ್ಲಿಗೆ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಶಬೀರ್ ಪಾಷಾ, ಕಾಂಗ್ರೆಸ್ ಮುಖಂಡರಾದ ಬಷೀರ್, ನಗರ ಬ್ಲಾಕ್ ಅಧ್ಯಕ್ಷ ಜಗನ್ನಾಥ್, ಹೇಮಂತ್ ರಾಜ್ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…