ಪಿಜಿ ಮಾಡುವುದಾಗಿ ಹೇಳಿ ಮದ್ಯದ ಅಂಗಡಿ ತೆರೆಯಲು ಸಿದ್ಧತೆ ಮಾಡಿಕೊಂಡಿದ್ದು , ಮದ್ಯದ ಅಂಗಡಿ ತೆರೆಯಲು ಅನುಮತಿ ನೀಡಬಾರದು ಎಂದು ನಗರದ ಅಬಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕರೇನಹಳ್ಳಿ ನಿವಾಸಿಗಳು.
ಈ ವೇಳೆ ಮಾತನಾಡಿದ ನಗರಸಭಾ ಸದಸ್ಯೆ ಪ್ರಭಾ ಅವರು, ಅರಳುಮಲ್ಲಿಗೆ ಗ್ರಾಮ ಪಂಚಾಯಿತಿ ಮತ್ತು ನಗರಸಭೆ ವ್ಯಾಪ್ತಿಗೆ ಒಳಪಡುವ ಕರೇನಹಳ್ಳಿಯಲ್ಲಿ ಮದ್ಯದ ಅಂಗಡಿ ತೆರೆಯಲು ನರಸಿಂಹಮೂರ್ತಿ ಎಂಬ ವ್ಯಕ್ತಿ ತಯಾರಿ ನಡೆಸುತ್ತಿದ್ದಾರೆ.
ನಗರದ ವಾರ್ಡ್ ನಂ.31 ಕರೇನಹಳ್ಳಿಯಲ್ಲಿ ವಾರ್ಡ್ ಮಧ್ಯಭಾಗದಲ್ಲಿ ಮದ್ಯದ ಅಂಗಡಿ ತೆರೆಯಲಾಗಿದೆ. ಈ ಬಾರ್ ಓಪನ್ ಆಗಬಾರದು ಎಂದು ಈಗಾಗಲೇ ಅಬಕಾರಿ ಇಲಾಖೆಗೆ ಲಿಖಿತವಾಗಿ ಮನವಿ ಮಾಡಲಾಗಿತ್ತು. ಆದರೂ ಇದಕ್ಕೆ ಕ್ಯಾರೆ ಎನ್ನದೆ ಪಿಜಿ ಹೆಸರಲ್ಲಿ ಅಂಗಡಿ ತೆರೆಯಲಾಗಿದೆ ಎಂದು ತಿಳಿಸಿದರು.
ಈ ಮದ್ಯದ ಅಂಗಡಿ ಸುತ್ತಮುತ್ತಾ ದೇವಸ್ಥಾನ, ಶಾಲಾ-ಕಾಲೇಜು, ಮನೆಗಳು ಇವೆ. ಮಹಿಳಾ ಉದ್ಯೋಗಸ್ಥರು, ಶಾಲಾ-ಕಾಲೇಜು ಮಕ್ಕಳು ನಿತ್ಯ ಇದೇ ಅಂಗಡಿ ಮುಂಭಾಗದಲ್ಲಿ ಓಡಾಡಬೇಕಾಗಿದೆ. ಪ್ರತಿ ನಿತ್ಯ ಓಡಾಡಬೇಕಾದರೆ ಮಹಿಳೆಯರು, ಮಕ್ಕಳು ತುಂಬಾ ಕಿರಿಕಿರಿ ಅನುಭವಿಸುತ್ತಿದ್ದಾರೆ ಎಂದರು.
ಅಂಗಡಿ ಸುತ್ತಾಮುತ್ತಾ ಕುಡಿದ ಅಮಲಿನಲ್ಲಿ ಇರುವ ವ್ಯಕ್ತಿಗಳೇ ಇರುತ್ತಾರೆ ಮಹಿಳೆಯರು ಒಂಟಿಯಾಗಿ ಓಡಾಡಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಇದ್ದಾರೆ ಆದ್ದರಿಂದ ಕೂಡಲೇ ಈ ಅಂಗಡಿಗೆ ಬೀಗ ಹಾಕಬೇಕು ಎಂಬುದು ನಮ್ಮ ಹಕ್ಕೋತ್ತಾಯ ಎಂದು ತಿಳಿಸಿದರು.
ಅಬಕಾರಿ ನಿರೀಕ್ಷಕರ ಮಾತಿಗೆ ಒಪ್ಪದ ಸ್ಥಳೀಯರು ಇಂದು ಸಾಂಕೇತಿಕ ಪ್ರತಿಭಟನೆ ನಡೆಸಿದ್ದೇವೆ, ಬಾರ್ ತೆರಯಲು ಅನುಮತಿ ನೀಡಿದ್ದೇ ಆದಲ್ಲಿ ಮುಂದಿನ ದಿನಗಳಲ್ಲಿ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಅರಳು ಮಲ್ಲಿಗೆ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಶಬೀರ್ ಪಾಷಾ, ಕಾಂಗ್ರೆಸ್ ಮುಖಂಡರಾದ ಬಷೀರ್, ನಗರ ಬ್ಲಾಕ್ ಅಧ್ಯಕ್ಷ ಜಗನ್ನಾಥ್, ಹೇಮಂತ್ ರಾಜ್ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…
ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್ಕುಮಾರ್ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…