ಕರೇನಹಳ್ಳಿಯಲ್ಲಿ ಮದ್ಯದ ಅಂಗಡಿ ತೆರೆಯಲು ಸ್ಥಳೀಯರ ವಿರೋಧ; ಅನುಮತಿ ರದ್ದು ಮಾಡದಿದ್ದರೆ ಬೃಹತ್ ಹೋರಾಟದ ಎಚ್ಚರಿಕೆ

ಪಿಜಿ ಮಾಡುವುದಾಗಿ ಹೇಳಿ ಮದ್ಯದ ಅಂಗಡಿ ತೆರೆಯಲು ಸಿದ್ಧತೆ ಮಾಡಿಕೊಂಡಿದ್ದು , ಮದ್ಯದ ಅಂಗಡಿ ತೆರೆಯಲು ಅನುಮತಿ ನೀಡಬಾರದು ಎಂದು ನಗರದ ಅಬಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕರೇನಹಳ್ಳಿ ನಿವಾಸಿಗಳು.

ಈ ವೇಳೆ ಮಾತನಾಡಿದ ನಗರಸಭಾ ಸದಸ್ಯೆ ಪ್ರಭಾ ಅವರು, ಅರಳುಮಲ್ಲಿಗೆ ಗ್ರಾಮ ಪಂಚಾಯಿತಿ ಮತ್ತು ನಗರಸಭೆ ವ್ಯಾಪ್ತಿಗೆ ಒಳಪಡುವ ಕರೇನಹಳ್ಳಿಯಲ್ಲಿ ಮದ್ಯದ ಅಂಗಡಿ ತೆರೆಯಲು ನರಸಿಂಹಮೂರ್ತಿ ಎಂಬ ವ್ಯಕ್ತಿ ತಯಾರಿ ನಡೆಸುತ್ತಿದ್ದಾರೆ.

ನಗರದ ವಾರ್ಡ್ ನಂ.31 ಕರೇನಹಳ್ಳಿಯಲ್ಲಿ ವಾರ್ಡ್ ಮಧ್ಯಭಾಗದಲ್ಲಿ ಮದ್ಯದ ಅಂಗಡಿ ತೆರೆಯಲಾಗಿದೆ. ಈ ಬಾರ್ ಓಪನ್ ಆಗಬಾರದು ಎಂದು ಈಗಾಗಲೇ ಅಬಕಾರಿ ಇಲಾಖೆಗೆ ಲಿಖಿತವಾಗಿ ಮನವಿ ಮಾಡಲಾಗಿತ್ತು. ಆದರೂ ಇದಕ್ಕೆ ಕ್ಯಾರೆ ಎನ್ನದೆ ಪಿಜಿ ಹೆಸರಲ್ಲಿ ಅಂಗಡಿ ತೆರೆಯಲಾಗಿದೆ ಎಂದು ತಿಳಿಸಿದರು.

ಈ ಮದ್ಯದ ಅಂಗಡಿ ಸುತ್ತಮುತ್ತಾ ದೇವಸ್ಥಾನ, ಶಾಲಾ-ಕಾಲೇಜು, ಮನೆಗಳು ಇವೆ. ಮಹಿಳಾ ಉದ್ಯೋಗಸ್ಥರು, ಶಾಲಾ-ಕಾಲೇಜು ಮಕ್ಕಳು ನಿತ್ಯ ಇದೇ ಅಂಗಡಿ ಮುಂಭಾಗದಲ್ಲಿ ಓಡಾಡಬೇಕಾಗಿದೆ. ಪ್ರತಿ ನಿತ್ಯ ಓಡಾಡಬೇಕಾದರೆ ಮಹಿಳೆಯರು, ಮಕ್ಕಳು ತುಂಬಾ ಕಿರಿಕಿರಿ ಅನುಭವಿಸುತ್ತಿದ್ದಾರೆ ಎಂದರು.

ಅಂಗಡಿ ಸುತ್ತಾಮುತ್ತಾ ಕುಡಿದ ಅಮಲಿನಲ್ಲಿ ಇರುವ ವ್ಯಕ್ತಿಗಳೇ ಇರುತ್ತಾರೆ ಮಹಿಳೆಯರು ಒಂಟಿಯಾಗಿ ಓಡಾಡಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಇದ್ದಾರೆ ಆದ್ದರಿಂದ ಕೂಡಲೇ ಈ ಅಂಗಡಿಗೆ ಬೀಗ ಹಾಕಬೇಕು ಎಂಬುದು ನಮ್ಮ ಹಕ್ಕೋತ್ತಾಯ ಎಂದು ತಿಳಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಅಬಕಾರಿ ಇಲಾಖೆ ನಿರೀಕ್ಷಕರಾದ ಎಸ್.ಎಮ್ ಪಾಟೀಲ್, ಈಗಾಗಲೇ ಬಾರ್ ತೆರೆಯುತ್ತಿರುವ ಬಗ್ಗೆ ಸ್ಥಳೀಯರು ನನ್ನ ಗಮನಕ್ಕೆ ತಂದಿದ್ದಾರೆ, ಸ್ಥಳೀಯರ ಮನವಿಯನ್ನು ಮೇಲಾಧಿಕಾರಿಗಳಿಗೆ ಕಳುಹಿಸಿಕೊಡಲಾಗುವುದು ಮುಂದಿನ ನಿರ್ಧಾರ ಅವರೇ ತೆಗೆದುಕೊಳ್ಳುವರು ಎಂದರು.

ಅಬಕಾರಿ ನಿರೀಕ್ಷಕರ ಮಾತಿಗೆ ಒಪ್ಪದ ಸ್ಥಳೀಯರು ಇಂದು ಸಾಂಕೇತಿಕ ಪ್ರತಿಭಟನೆ ನಡೆಸಿದ್ದೇವೆ, ಬಾರ್ ತೆರಯಲು ಅನುಮತಿ ನೀಡಿದ್ದೇ ಆದಲ್ಲಿ ಮುಂದಿನ ದಿನಗಳಲ್ಲಿ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಅರಳು ಮಲ್ಲಿಗೆ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಶಬೀರ್ ಪಾಷಾ, ಕಾಂಗ್ರೆಸ್ ಮುಖಂಡರಾದ ಬಷೀರ್, ನಗರ ಬ್ಲಾಕ್ ಅಧ್ಯಕ್ಷ ಜಗನ್ನಾಥ್, ಹೇಮಂತ್ ರಾಜ್ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

3 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

4 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

8 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

10 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

13 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

14 hours ago