ಪಿಜಿ ಮಾಡುವುದಾಗಿ ಹೇಳಿ ಮದ್ಯದ ಅಂಗಡಿ ತೆರೆಯಲು ಸಿದ್ಧತೆ ಮಾಡಿಕೊಂಡಿದ್ದು , ಮದ್ಯದ ಅಂಗಡಿ ತೆರೆಯಲು ಅನುಮತಿ ನೀಡಬಾರದು ಎಂದು ನಗರದ ಅಬಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕರೇನಹಳ್ಳಿ ನಿವಾಸಿಗಳು.
ಈ ವೇಳೆ ಮಾತನಾಡಿದ ನಗರಸಭಾ ಸದಸ್ಯೆ ಪ್ರಭಾ ಅವರು, ಅರಳುಮಲ್ಲಿಗೆ ಗ್ರಾಮ ಪಂಚಾಯಿತಿ ಮತ್ತು ನಗರಸಭೆ ವ್ಯಾಪ್ತಿಗೆ ಒಳಪಡುವ ಕರೇನಹಳ್ಳಿಯಲ್ಲಿ ಮದ್ಯದ ಅಂಗಡಿ ತೆರೆಯಲು ನರಸಿಂಹಮೂರ್ತಿ ಎಂಬ ವ್ಯಕ್ತಿ ತಯಾರಿ ನಡೆಸುತ್ತಿದ್ದಾರೆ.
ನಗರದ ವಾರ್ಡ್ ನಂ.31 ಕರೇನಹಳ್ಳಿಯಲ್ಲಿ ವಾರ್ಡ್ ಮಧ್ಯಭಾಗದಲ್ಲಿ ಮದ್ಯದ ಅಂಗಡಿ ತೆರೆಯಲಾಗಿದೆ. ಈ ಬಾರ್ ಓಪನ್ ಆಗಬಾರದು ಎಂದು ಈಗಾಗಲೇ ಅಬಕಾರಿ ಇಲಾಖೆಗೆ ಲಿಖಿತವಾಗಿ ಮನವಿ ಮಾಡಲಾಗಿತ್ತು. ಆದರೂ ಇದಕ್ಕೆ ಕ್ಯಾರೆ ಎನ್ನದೆ ಪಿಜಿ ಹೆಸರಲ್ಲಿ ಅಂಗಡಿ ತೆರೆಯಲಾಗಿದೆ ಎಂದು ತಿಳಿಸಿದರು.
ಈ ಮದ್ಯದ ಅಂಗಡಿ ಸುತ್ತಮುತ್ತಾ ದೇವಸ್ಥಾನ, ಶಾಲಾ-ಕಾಲೇಜು, ಮನೆಗಳು ಇವೆ. ಮಹಿಳಾ ಉದ್ಯೋಗಸ್ಥರು, ಶಾಲಾ-ಕಾಲೇಜು ಮಕ್ಕಳು ನಿತ್ಯ ಇದೇ ಅಂಗಡಿ ಮುಂಭಾಗದಲ್ಲಿ ಓಡಾಡಬೇಕಾಗಿದೆ. ಪ್ರತಿ ನಿತ್ಯ ಓಡಾಡಬೇಕಾದರೆ ಮಹಿಳೆಯರು, ಮಕ್ಕಳು ತುಂಬಾ ಕಿರಿಕಿರಿ ಅನುಭವಿಸುತ್ತಿದ್ದಾರೆ ಎಂದರು.
ಅಂಗಡಿ ಸುತ್ತಾಮುತ್ತಾ ಕುಡಿದ ಅಮಲಿನಲ್ಲಿ ಇರುವ ವ್ಯಕ್ತಿಗಳೇ ಇರುತ್ತಾರೆ ಮಹಿಳೆಯರು ಒಂಟಿಯಾಗಿ ಓಡಾಡಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಇದ್ದಾರೆ ಆದ್ದರಿಂದ ಕೂಡಲೇ ಈ ಅಂಗಡಿಗೆ ಬೀಗ ಹಾಕಬೇಕು ಎಂಬುದು ನಮ್ಮ ಹಕ್ಕೋತ್ತಾಯ ಎಂದು ತಿಳಿಸಿದರು.
ಅಬಕಾರಿ ನಿರೀಕ್ಷಕರ ಮಾತಿಗೆ ಒಪ್ಪದ ಸ್ಥಳೀಯರು ಇಂದು ಸಾಂಕೇತಿಕ ಪ್ರತಿಭಟನೆ ನಡೆಸಿದ್ದೇವೆ, ಬಾರ್ ತೆರಯಲು ಅನುಮತಿ ನೀಡಿದ್ದೇ ಆದಲ್ಲಿ ಮುಂದಿನ ದಿನಗಳಲ್ಲಿ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಅರಳು ಮಲ್ಲಿಗೆ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಶಬೀರ್ ಪಾಷಾ, ಕಾಂಗ್ರೆಸ್ ಮುಖಂಡರಾದ ಬಷೀರ್, ನಗರ ಬ್ಲಾಕ್ ಅಧ್ಯಕ್ಷ ಜಗನ್ನಾಥ್, ಹೇಮಂತ್ ರಾಜ್ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…