ಪಿಜಿ ಮಾಡುವುದಾಗಿ ಹೇಳಿ ಮದ್ಯದ ಅಂಗಡಿ ತೆರೆಯಲು ಸಿದ್ಧತೆ ಮಾಡಿಕೊಂಡಿದ್ದು , ಮದ್ಯದ ಅಂಗಡಿ ತೆರೆಯಲು ಅನುಮತಿ ನೀಡಬಾರದು ಎಂದು ನಗರದ ಅಬಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕರೇನಹಳ್ಳಿ ನಿವಾಸಿಗಳು.
ಈ ವೇಳೆ ಮಾತನಾಡಿದ ನಗರಸಭಾ ಸದಸ್ಯೆ ಪ್ರಭಾ ಅವರು, ಅರಳುಮಲ್ಲಿಗೆ ಗ್ರಾಮ ಪಂಚಾಯಿತಿ ಮತ್ತು ನಗರಸಭೆ ವ್ಯಾಪ್ತಿಗೆ ಒಳಪಡುವ ಕರೇನಹಳ್ಳಿಯಲ್ಲಿ ಮದ್ಯದ ಅಂಗಡಿ ತೆರೆಯಲು ನರಸಿಂಹಮೂರ್ತಿ ಎಂಬ ವ್ಯಕ್ತಿ ತಯಾರಿ ನಡೆಸುತ್ತಿದ್ದಾರೆ.
ನಗರದ ವಾರ್ಡ್ ನಂ.31 ಕರೇನಹಳ್ಳಿಯಲ್ಲಿ ವಾರ್ಡ್ ಮಧ್ಯಭಾಗದಲ್ಲಿ ಮದ್ಯದ ಅಂಗಡಿ ತೆರೆಯಲಾಗಿದೆ. ಈ ಬಾರ್ ಓಪನ್ ಆಗಬಾರದು ಎಂದು ಈಗಾಗಲೇ ಅಬಕಾರಿ ಇಲಾಖೆಗೆ ಲಿಖಿತವಾಗಿ ಮನವಿ ಮಾಡಲಾಗಿತ್ತು. ಆದರೂ ಇದಕ್ಕೆ ಕ್ಯಾರೆ ಎನ್ನದೆ ಪಿಜಿ ಹೆಸರಲ್ಲಿ ಅಂಗಡಿ ತೆರೆಯಲಾಗಿದೆ ಎಂದು ತಿಳಿಸಿದರು.
ಈ ಮದ್ಯದ ಅಂಗಡಿ ಸುತ್ತಮುತ್ತಾ ದೇವಸ್ಥಾನ, ಶಾಲಾ-ಕಾಲೇಜು, ಮನೆಗಳು ಇವೆ. ಮಹಿಳಾ ಉದ್ಯೋಗಸ್ಥರು, ಶಾಲಾ-ಕಾಲೇಜು ಮಕ್ಕಳು ನಿತ್ಯ ಇದೇ ಅಂಗಡಿ ಮುಂಭಾಗದಲ್ಲಿ ಓಡಾಡಬೇಕಾಗಿದೆ. ಪ್ರತಿ ನಿತ್ಯ ಓಡಾಡಬೇಕಾದರೆ ಮಹಿಳೆಯರು, ಮಕ್ಕಳು ತುಂಬಾ ಕಿರಿಕಿರಿ ಅನುಭವಿಸುತ್ತಿದ್ದಾರೆ ಎಂದರು.
ಅಂಗಡಿ ಸುತ್ತಾಮುತ್ತಾ ಕುಡಿದ ಅಮಲಿನಲ್ಲಿ ಇರುವ ವ್ಯಕ್ತಿಗಳೇ ಇರುತ್ತಾರೆ ಮಹಿಳೆಯರು ಒಂಟಿಯಾಗಿ ಓಡಾಡಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಇದ್ದಾರೆ ಆದ್ದರಿಂದ ಕೂಡಲೇ ಈ ಅಂಗಡಿಗೆ ಬೀಗ ಹಾಕಬೇಕು ಎಂಬುದು ನಮ್ಮ ಹಕ್ಕೋತ್ತಾಯ ಎಂದು ತಿಳಿಸಿದರು.
ಅಬಕಾರಿ ನಿರೀಕ್ಷಕರ ಮಾತಿಗೆ ಒಪ್ಪದ ಸ್ಥಳೀಯರು ಇಂದು ಸಾಂಕೇತಿಕ ಪ್ರತಿಭಟನೆ ನಡೆಸಿದ್ದೇವೆ, ಬಾರ್ ತೆರಯಲು ಅನುಮತಿ ನೀಡಿದ್ದೇ ಆದಲ್ಲಿ ಮುಂದಿನ ದಿನಗಳಲ್ಲಿ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಅರಳು ಮಲ್ಲಿಗೆ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಶಬೀರ್ ಪಾಷಾ, ಕಾಂಗ್ರೆಸ್ ಮುಖಂಡರಾದ ಬಷೀರ್, ನಗರ ಬ್ಲಾಕ್ ಅಧ್ಯಕ್ಷ ಜಗನ್ನಾಥ್, ಹೇಮಂತ್ ರಾಜ್ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…
ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…
ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…
ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…