ಪಿಜಿ ಮಾಡುವುದಾಗಿ ಹೇಳಿ ಮದ್ಯದ ಅಂಗಡಿ ತೆರೆಯಲು ಸಿದ್ಧತೆ ಮಾಡಿಕೊಂಡಿದ್ದು , ಮದ್ಯದ ಅಂಗಡಿ ತೆರೆಯಲು ಅನುಮತಿ ನೀಡಬಾರದು ಎಂದು ನಗರದ ಅಬಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕರೇನಹಳ್ಳಿ ನಿವಾಸಿಗಳು.
ಈ ವೇಳೆ ಮಾತನಾಡಿದ ನಗರಸಭಾ ಸದಸ್ಯೆ ಪ್ರಭಾ ಅವರು, ಅರಳುಮಲ್ಲಿಗೆ ಗ್ರಾಮ ಪಂಚಾಯಿತಿ ಮತ್ತು ನಗರಸಭೆ ವ್ಯಾಪ್ತಿಗೆ ಒಳಪಡುವ ಕರೇನಹಳ್ಳಿಯಲ್ಲಿ ಮದ್ಯದ ಅಂಗಡಿ ತೆರೆಯಲು ನರಸಿಂಹಮೂರ್ತಿ ಎಂಬ ವ್ಯಕ್ತಿ ತಯಾರಿ ನಡೆಸುತ್ತಿದ್ದಾರೆ.
ನಗರದ ವಾರ್ಡ್ ನಂ.31 ಕರೇನಹಳ್ಳಿಯಲ್ಲಿ ವಾರ್ಡ್ ಮಧ್ಯಭಾಗದಲ್ಲಿ ಮದ್ಯದ ಅಂಗಡಿ ತೆರೆಯಲಾಗಿದೆ. ಈ ಬಾರ್ ಓಪನ್ ಆಗಬಾರದು ಎಂದು ಈಗಾಗಲೇ ಅಬಕಾರಿ ಇಲಾಖೆಗೆ ಲಿಖಿತವಾಗಿ ಮನವಿ ಮಾಡಲಾಗಿತ್ತು. ಆದರೂ ಇದಕ್ಕೆ ಕ್ಯಾರೆ ಎನ್ನದೆ ಪಿಜಿ ಹೆಸರಲ್ಲಿ ಅಂಗಡಿ ತೆರೆಯಲಾಗಿದೆ ಎಂದು ತಿಳಿಸಿದರು.
ಈ ಮದ್ಯದ ಅಂಗಡಿ ಸುತ್ತಮುತ್ತಾ ದೇವಸ್ಥಾನ, ಶಾಲಾ-ಕಾಲೇಜು, ಮನೆಗಳು ಇವೆ. ಮಹಿಳಾ ಉದ್ಯೋಗಸ್ಥರು, ಶಾಲಾ-ಕಾಲೇಜು ಮಕ್ಕಳು ನಿತ್ಯ ಇದೇ ಅಂಗಡಿ ಮುಂಭಾಗದಲ್ಲಿ ಓಡಾಡಬೇಕಾಗಿದೆ. ಪ್ರತಿ ನಿತ್ಯ ಓಡಾಡಬೇಕಾದರೆ ಮಹಿಳೆಯರು, ಮಕ್ಕಳು ತುಂಬಾ ಕಿರಿಕಿರಿ ಅನುಭವಿಸುತ್ತಿದ್ದಾರೆ ಎಂದರು.
ಅಂಗಡಿ ಸುತ್ತಾಮುತ್ತಾ ಕುಡಿದ ಅಮಲಿನಲ್ಲಿ ಇರುವ ವ್ಯಕ್ತಿಗಳೇ ಇರುತ್ತಾರೆ ಮಹಿಳೆಯರು ಒಂಟಿಯಾಗಿ ಓಡಾಡಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಇದ್ದಾರೆ ಆದ್ದರಿಂದ ಕೂಡಲೇ ಈ ಅಂಗಡಿಗೆ ಬೀಗ ಹಾಕಬೇಕು ಎಂಬುದು ನಮ್ಮ ಹಕ್ಕೋತ್ತಾಯ ಎಂದು ತಿಳಿಸಿದರು.
ಅಬಕಾರಿ ನಿರೀಕ್ಷಕರ ಮಾತಿಗೆ ಒಪ್ಪದ ಸ್ಥಳೀಯರು ಇಂದು ಸಾಂಕೇತಿಕ ಪ್ರತಿಭಟನೆ ನಡೆಸಿದ್ದೇವೆ, ಬಾರ್ ತೆರಯಲು ಅನುಮತಿ ನೀಡಿದ್ದೇ ಆದಲ್ಲಿ ಮುಂದಿನ ದಿನಗಳಲ್ಲಿ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಅರಳು ಮಲ್ಲಿಗೆ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಶಬೀರ್ ಪಾಷಾ, ಕಾಂಗ್ರೆಸ್ ಮುಖಂಡರಾದ ಬಷೀರ್, ನಗರ ಬ್ಲಾಕ್ ಅಧ್ಯಕ್ಷ ಜಗನ್ನಾಥ್, ಹೇಮಂತ್ ರಾಜ್ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…