ಪಿಜಿ ಮಾಡುವುದಾಗಿ ಹೇಳಿ ಮದ್ಯದ ಅಂಗಡಿ ತೆರೆಯಲು ಸಿದ್ಧತೆ ಮಾಡಿಕೊಂಡಿದ್ದು , ಮದ್ಯದ ಅಂಗಡಿ ತೆರೆಯಲು ಅನುಮತಿ ನೀಡಬಾರದು ಎಂದು ನಗರದ ಅಬಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕರೇನಹಳ್ಳಿ ನಿವಾಸಿಗಳು.
ಈ ವೇಳೆ ಮಾತನಾಡಿದ ನಗರಸಭಾ ಸದಸ್ಯೆ ಪ್ರಭಾ ಅವರು, ಅರಳುಮಲ್ಲಿಗೆ ಗ್ರಾಮ ಪಂಚಾಯಿತಿ ಮತ್ತು ನಗರಸಭೆ ವ್ಯಾಪ್ತಿಗೆ ಒಳಪಡುವ ಕರೇನಹಳ್ಳಿಯಲ್ಲಿ ಮದ್ಯದ ಅಂಗಡಿ ತೆರೆಯಲು ನರಸಿಂಹಮೂರ್ತಿ ಎಂಬ ವ್ಯಕ್ತಿ ತಯಾರಿ ನಡೆಸುತ್ತಿದ್ದಾರೆ.
ನಗರದ ವಾರ್ಡ್ ನಂ.31 ಕರೇನಹಳ್ಳಿಯಲ್ಲಿ ವಾರ್ಡ್ ಮಧ್ಯಭಾಗದಲ್ಲಿ ಮದ್ಯದ ಅಂಗಡಿ ತೆರೆಯಲಾಗಿದೆ. ಈ ಬಾರ್ ಓಪನ್ ಆಗಬಾರದು ಎಂದು ಈಗಾಗಲೇ ಅಬಕಾರಿ ಇಲಾಖೆಗೆ ಲಿಖಿತವಾಗಿ ಮನವಿ ಮಾಡಲಾಗಿತ್ತು. ಆದರೂ ಇದಕ್ಕೆ ಕ್ಯಾರೆ ಎನ್ನದೆ ಪಿಜಿ ಹೆಸರಲ್ಲಿ ಅಂಗಡಿ ತೆರೆಯಲಾಗಿದೆ ಎಂದು ತಿಳಿಸಿದರು.
ಈ ಮದ್ಯದ ಅಂಗಡಿ ಸುತ್ತಮುತ್ತಾ ದೇವಸ್ಥಾನ, ಶಾಲಾ-ಕಾಲೇಜು, ಮನೆಗಳು ಇವೆ. ಮಹಿಳಾ ಉದ್ಯೋಗಸ್ಥರು, ಶಾಲಾ-ಕಾಲೇಜು ಮಕ್ಕಳು ನಿತ್ಯ ಇದೇ ಅಂಗಡಿ ಮುಂಭಾಗದಲ್ಲಿ ಓಡಾಡಬೇಕಾಗಿದೆ. ಪ್ರತಿ ನಿತ್ಯ ಓಡಾಡಬೇಕಾದರೆ ಮಹಿಳೆಯರು, ಮಕ್ಕಳು ತುಂಬಾ ಕಿರಿಕಿರಿ ಅನುಭವಿಸುತ್ತಿದ್ದಾರೆ ಎಂದರು.
ಅಂಗಡಿ ಸುತ್ತಾಮುತ್ತಾ ಕುಡಿದ ಅಮಲಿನಲ್ಲಿ ಇರುವ ವ್ಯಕ್ತಿಗಳೇ ಇರುತ್ತಾರೆ ಮಹಿಳೆಯರು ಒಂಟಿಯಾಗಿ ಓಡಾಡಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಇದ್ದಾರೆ ಆದ್ದರಿಂದ ಕೂಡಲೇ ಈ ಅಂಗಡಿಗೆ ಬೀಗ ಹಾಕಬೇಕು ಎಂಬುದು ನಮ್ಮ ಹಕ್ಕೋತ್ತಾಯ ಎಂದು ತಿಳಿಸಿದರು.
ಅಬಕಾರಿ ನಿರೀಕ್ಷಕರ ಮಾತಿಗೆ ಒಪ್ಪದ ಸ್ಥಳೀಯರು ಇಂದು ಸಾಂಕೇತಿಕ ಪ್ರತಿಭಟನೆ ನಡೆಸಿದ್ದೇವೆ, ಬಾರ್ ತೆರಯಲು ಅನುಮತಿ ನೀಡಿದ್ದೇ ಆದಲ್ಲಿ ಮುಂದಿನ ದಿನಗಳಲ್ಲಿ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಅರಳು ಮಲ್ಲಿಗೆ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಶಬೀರ್ ಪಾಷಾ, ಕಾಂಗ್ರೆಸ್ ಮುಖಂಡರಾದ ಬಷೀರ್, ನಗರ ಬ್ಲಾಕ್ ಅಧ್ಯಕ್ಷ ಜಗನ್ನಾಥ್, ಹೇಮಂತ್ ರಾಜ್ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…