ಕರೇನಹಳ್ಳಿಯಲ್ಲಿ ಮದ್ಯದ ಅಂಗಡಿ ತೆರೆಯಲು ಸ್ಥಳೀಯರ ವಿರೋಧ; ಅನುಮತಿ ರದ್ದು ಮಾಡದಿದ್ದರೆ ಬೃಹತ್ ಹೋರಾಟದ ಎಚ್ಚರಿಕೆ

ಪಿಜಿ ಮಾಡುವುದಾಗಿ ಹೇಳಿ ಮದ್ಯದ ಅಂಗಡಿ ತೆರೆಯಲು ಸಿದ್ಧತೆ ಮಾಡಿಕೊಂಡಿದ್ದು , ಮದ್ಯದ ಅಂಗಡಿ ತೆರೆಯಲು ಅನುಮತಿ ನೀಡಬಾರದು ಎಂದು ನಗರದ ಅಬಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕರೇನಹಳ್ಳಿ ನಿವಾಸಿಗಳು.

ಈ ವೇಳೆ ಮಾತನಾಡಿದ ನಗರಸಭಾ ಸದಸ್ಯೆ ಪ್ರಭಾ ಅವರು, ಅರಳುಮಲ್ಲಿಗೆ ಗ್ರಾಮ ಪಂಚಾಯಿತಿ ಮತ್ತು ನಗರಸಭೆ ವ್ಯಾಪ್ತಿಗೆ ಒಳಪಡುವ ಕರೇನಹಳ್ಳಿಯಲ್ಲಿ ಮದ್ಯದ ಅಂಗಡಿ ತೆರೆಯಲು ನರಸಿಂಹಮೂರ್ತಿ ಎಂಬ ವ್ಯಕ್ತಿ ತಯಾರಿ ನಡೆಸುತ್ತಿದ್ದಾರೆ.

ನಗರದ ವಾರ್ಡ್ ನಂ.31 ಕರೇನಹಳ್ಳಿಯಲ್ಲಿ ವಾರ್ಡ್ ಮಧ್ಯಭಾಗದಲ್ಲಿ ಮದ್ಯದ ಅಂಗಡಿ ತೆರೆಯಲಾಗಿದೆ. ಈ ಬಾರ್ ಓಪನ್ ಆಗಬಾರದು ಎಂದು ಈಗಾಗಲೇ ಅಬಕಾರಿ ಇಲಾಖೆಗೆ ಲಿಖಿತವಾಗಿ ಮನವಿ ಮಾಡಲಾಗಿತ್ತು. ಆದರೂ ಇದಕ್ಕೆ ಕ್ಯಾರೆ ಎನ್ನದೆ ಪಿಜಿ ಹೆಸರಲ್ಲಿ ಅಂಗಡಿ ತೆರೆಯಲಾಗಿದೆ ಎಂದು ತಿಳಿಸಿದರು.

ಈ ಮದ್ಯದ ಅಂಗಡಿ ಸುತ್ತಮುತ್ತಾ ದೇವಸ್ಥಾನ, ಶಾಲಾ-ಕಾಲೇಜು, ಮನೆಗಳು ಇವೆ. ಮಹಿಳಾ ಉದ್ಯೋಗಸ್ಥರು, ಶಾಲಾ-ಕಾಲೇಜು ಮಕ್ಕಳು ನಿತ್ಯ ಇದೇ ಅಂಗಡಿ ಮುಂಭಾಗದಲ್ಲಿ ಓಡಾಡಬೇಕಾಗಿದೆ. ಪ್ರತಿ ನಿತ್ಯ ಓಡಾಡಬೇಕಾದರೆ ಮಹಿಳೆಯರು, ಮಕ್ಕಳು ತುಂಬಾ ಕಿರಿಕಿರಿ ಅನುಭವಿಸುತ್ತಿದ್ದಾರೆ ಎಂದರು.

ಅಂಗಡಿ ಸುತ್ತಾಮುತ್ತಾ ಕುಡಿದ ಅಮಲಿನಲ್ಲಿ ಇರುವ ವ್ಯಕ್ತಿಗಳೇ ಇರುತ್ತಾರೆ ಮಹಿಳೆಯರು ಒಂಟಿಯಾಗಿ ಓಡಾಡಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಇದ್ದಾರೆ ಆದ್ದರಿಂದ ಕೂಡಲೇ ಈ ಅಂಗಡಿಗೆ ಬೀಗ ಹಾಕಬೇಕು ಎಂಬುದು ನಮ್ಮ ಹಕ್ಕೋತ್ತಾಯ ಎಂದು ತಿಳಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಅಬಕಾರಿ ಇಲಾಖೆ ನಿರೀಕ್ಷಕರಾದ ಎಸ್.ಎಮ್ ಪಾಟೀಲ್, ಈಗಾಗಲೇ ಬಾರ್ ತೆರೆಯುತ್ತಿರುವ ಬಗ್ಗೆ ಸ್ಥಳೀಯರು ನನ್ನ ಗಮನಕ್ಕೆ ತಂದಿದ್ದಾರೆ, ಸ್ಥಳೀಯರ ಮನವಿಯನ್ನು ಮೇಲಾಧಿಕಾರಿಗಳಿಗೆ ಕಳುಹಿಸಿಕೊಡಲಾಗುವುದು ಮುಂದಿನ ನಿರ್ಧಾರ ಅವರೇ ತೆಗೆದುಕೊಳ್ಳುವರು ಎಂದರು.

ಅಬಕಾರಿ ನಿರೀಕ್ಷಕರ ಮಾತಿಗೆ ಒಪ್ಪದ ಸ್ಥಳೀಯರು ಇಂದು ಸಾಂಕೇತಿಕ ಪ್ರತಿಭಟನೆ ನಡೆಸಿದ್ದೇವೆ, ಬಾರ್ ತೆರಯಲು ಅನುಮತಿ ನೀಡಿದ್ದೇ ಆದಲ್ಲಿ ಮುಂದಿನ ದಿನಗಳಲ್ಲಿ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಅರಳು ಮಲ್ಲಿಗೆ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಶಬೀರ್ ಪಾಷಾ, ಕಾಂಗ್ರೆಸ್ ಮುಖಂಡರಾದ ಬಷೀರ್, ನಗರ ಬ್ಲಾಕ್ ಅಧ್ಯಕ್ಷ ಜಗನ್ನಾಥ್, ಹೇಮಂತ್ ರಾಜ್ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬ್ಲಾಕ್‌ಸ್ಪಾಟ್‌ಗಳೀಗ ಸುಂದರ ತಾಣ: ಕಸ ಸುರಿಯುತ್ತಿದ್ದ ಪ್ರದೇಶಗಳಿಗೆ ಸುಣ್ಣ ಬಣ್ಣ ಬಳಿದು ಅಲಂಕಾರ: ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ

ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…

6 minutes ago

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

13 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

13 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

16 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 day ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

2 days ago