ಪಿಜಿ ಮಾಡುವುದಾಗಿ ಹೇಳಿ ಮದ್ಯದ ಅಂಗಡಿ ತೆರೆಯಲು ಸಿದ್ಧತೆ ಮಾಡಿಕೊಂಡಿದ್ದು , ಮದ್ಯದ ಅಂಗಡಿ ತೆರೆಯಲು ಅನುಮತಿ ನೀಡಬಾರದು ಎಂದು ನಗರದ ಅಬಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕರೇನಹಳ್ಳಿ ನಿವಾಸಿಗಳು.
ಈ ವೇಳೆ ಮಾತನಾಡಿದ ನಗರಸಭಾ ಸದಸ್ಯೆ ಪ್ರಭಾ ಅವರು, ಅರಳುಮಲ್ಲಿಗೆ ಗ್ರಾಮ ಪಂಚಾಯಿತಿ ಮತ್ತು ನಗರಸಭೆ ವ್ಯಾಪ್ತಿಗೆ ಒಳಪಡುವ ಕರೇನಹಳ್ಳಿಯಲ್ಲಿ ಮದ್ಯದ ಅಂಗಡಿ ತೆರೆಯಲು ನರಸಿಂಹಮೂರ್ತಿ ಎಂಬ ವ್ಯಕ್ತಿ ತಯಾರಿ ನಡೆಸುತ್ತಿದ್ದಾರೆ.
ನಗರದ ವಾರ್ಡ್ ನಂ.31 ಕರೇನಹಳ್ಳಿಯಲ್ಲಿ ವಾರ್ಡ್ ಮಧ್ಯಭಾಗದಲ್ಲಿ ಮದ್ಯದ ಅಂಗಡಿ ತೆರೆಯಲಾಗಿದೆ. ಈ ಬಾರ್ ಓಪನ್ ಆಗಬಾರದು ಎಂದು ಈಗಾಗಲೇ ಅಬಕಾರಿ ಇಲಾಖೆಗೆ ಲಿಖಿತವಾಗಿ ಮನವಿ ಮಾಡಲಾಗಿತ್ತು. ಆದರೂ ಇದಕ್ಕೆ ಕ್ಯಾರೆ ಎನ್ನದೆ ಪಿಜಿ ಹೆಸರಲ್ಲಿ ಅಂಗಡಿ ತೆರೆಯಲಾಗಿದೆ ಎಂದು ತಿಳಿಸಿದರು.
ಈ ಮದ್ಯದ ಅಂಗಡಿ ಸುತ್ತಮುತ್ತಾ ದೇವಸ್ಥಾನ, ಶಾಲಾ-ಕಾಲೇಜು, ಮನೆಗಳು ಇವೆ. ಮಹಿಳಾ ಉದ್ಯೋಗಸ್ಥರು, ಶಾಲಾ-ಕಾಲೇಜು ಮಕ್ಕಳು ನಿತ್ಯ ಇದೇ ಅಂಗಡಿ ಮುಂಭಾಗದಲ್ಲಿ ಓಡಾಡಬೇಕಾಗಿದೆ. ಪ್ರತಿ ನಿತ್ಯ ಓಡಾಡಬೇಕಾದರೆ ಮಹಿಳೆಯರು, ಮಕ್ಕಳು ತುಂಬಾ ಕಿರಿಕಿರಿ ಅನುಭವಿಸುತ್ತಿದ್ದಾರೆ ಎಂದರು.
ಅಂಗಡಿ ಸುತ್ತಾಮುತ್ತಾ ಕುಡಿದ ಅಮಲಿನಲ್ಲಿ ಇರುವ ವ್ಯಕ್ತಿಗಳೇ ಇರುತ್ತಾರೆ ಮಹಿಳೆಯರು ಒಂಟಿಯಾಗಿ ಓಡಾಡಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಇದ್ದಾರೆ ಆದ್ದರಿಂದ ಕೂಡಲೇ ಈ ಅಂಗಡಿಗೆ ಬೀಗ ಹಾಕಬೇಕು ಎಂಬುದು ನಮ್ಮ ಹಕ್ಕೋತ್ತಾಯ ಎಂದು ತಿಳಿಸಿದರು.
ಅಬಕಾರಿ ನಿರೀಕ್ಷಕರ ಮಾತಿಗೆ ಒಪ್ಪದ ಸ್ಥಳೀಯರು ಇಂದು ಸಾಂಕೇತಿಕ ಪ್ರತಿಭಟನೆ ನಡೆಸಿದ್ದೇವೆ, ಬಾರ್ ತೆರಯಲು ಅನುಮತಿ ನೀಡಿದ್ದೇ ಆದಲ್ಲಿ ಮುಂದಿನ ದಿನಗಳಲ್ಲಿ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಅರಳು ಮಲ್ಲಿಗೆ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಶಬೀರ್ ಪಾಷಾ, ಕಾಂಗ್ರೆಸ್ ಮುಖಂಡರಾದ ಬಷೀರ್, ನಗರ ಬ್ಲಾಕ್ ಅಧ್ಯಕ್ಷ ಜಗನ್ನಾಥ್, ಹೇಮಂತ್ ರಾಜ್ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ…
. ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1) ನ್ನು ಕೊನಘಟ್ಟ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಅಂತಿಮ ಹಣಾಹಣಿಯಲ್ಲಿ 'ಎ' ತಂಡವನ್ನು ಮಣಿಸಿ…
ದೊಡ್ಡಬಳ್ಳಾಪುರ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಮೇ.2ರ ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ…
ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಮುಖ್ಯರಸ್ತೆ ತ್ಯಾಗರಾಜ ನಗರ ಆನೆಬಯಲು ಡೌನಿನ ರಸ್ತೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿಯ ಮ್ಯಾನ್ ಹೋಲ್…
ಶಿಕ್ಷಣ ಕ್ಷೇತ್ರದ ಬಗ್ಗೆ ಪರೀಕ್ಷೆಗಳ ಫಲಿತಾಂಶಗಳು ಪ್ರಕಟವಾಗುತ್ತಿರುವ ಈ ಸಂದರ್ಭದಲ್ಲಿ....... ಶಿಕ್ಷಣ... ಜ್ಞಾನಾರ್ಜನೆಗಾಗಿಯೇ, ಉದ್ಯೋಗಕ್ಕಾಗಿಯೇ, ಬದುಕಿಗಾಗಿಯೇ, ಸಾಧನೆಗಾಗಿಯೇ, ಪೋಷಕರ ಒತ್ತಾಯಕ್ಕಾಗಿಯೇ,…
ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…