ಕರೇನಹಳ್ಳಿಯಲ್ಲಿ ಮದ್ಯದ ಅಂಗಡಿ ತೆರೆಯಲು ಸ್ಥಳೀಯರ ವಿರೋಧ; ಅನುಮತಿ ರದ್ದು ಮಾಡದಿದ್ದರೆ ಬೃಹತ್ ಹೋರಾಟದ ಎಚ್ಚರಿಕೆ

ಪಿಜಿ ಮಾಡುವುದಾಗಿ ಹೇಳಿ ಮದ್ಯದ ಅಂಗಡಿ ತೆರೆಯಲು ಸಿದ್ಧತೆ ಮಾಡಿಕೊಂಡಿದ್ದು , ಮದ್ಯದ ಅಂಗಡಿ ತೆರೆಯಲು ಅನುಮತಿ ನೀಡಬಾರದು ಎಂದು ನಗರದ ಅಬಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕರೇನಹಳ್ಳಿ ನಿವಾಸಿಗಳು.

ಈ ವೇಳೆ ಮಾತನಾಡಿದ ನಗರಸಭಾ ಸದಸ್ಯೆ ಪ್ರಭಾ ಅವರು, ಅರಳುಮಲ್ಲಿಗೆ ಗ್ರಾಮ ಪಂಚಾಯಿತಿ ಮತ್ತು ನಗರಸಭೆ ವ್ಯಾಪ್ತಿಗೆ ಒಳಪಡುವ ಕರೇನಹಳ್ಳಿಯಲ್ಲಿ ಮದ್ಯದ ಅಂಗಡಿ ತೆರೆಯಲು ನರಸಿಂಹಮೂರ್ತಿ ಎಂಬ ವ್ಯಕ್ತಿ ತಯಾರಿ ನಡೆಸುತ್ತಿದ್ದಾರೆ.

ನಗರದ ವಾರ್ಡ್ ನಂ.31 ಕರೇನಹಳ್ಳಿಯಲ್ಲಿ ವಾರ್ಡ್ ಮಧ್ಯಭಾಗದಲ್ಲಿ ಮದ್ಯದ ಅಂಗಡಿ ತೆರೆಯಲಾಗಿದೆ. ಈ ಬಾರ್ ಓಪನ್ ಆಗಬಾರದು ಎಂದು ಈಗಾಗಲೇ ಅಬಕಾರಿ ಇಲಾಖೆಗೆ ಲಿಖಿತವಾಗಿ ಮನವಿ ಮಾಡಲಾಗಿತ್ತು. ಆದರೂ ಇದಕ್ಕೆ ಕ್ಯಾರೆ ಎನ್ನದೆ ಪಿಜಿ ಹೆಸರಲ್ಲಿ ಅಂಗಡಿ ತೆರೆಯಲಾಗಿದೆ ಎಂದು ತಿಳಿಸಿದರು.

ಈ ಮದ್ಯದ ಅಂಗಡಿ ಸುತ್ತಮುತ್ತಾ ದೇವಸ್ಥಾನ, ಶಾಲಾ-ಕಾಲೇಜು, ಮನೆಗಳು ಇವೆ. ಮಹಿಳಾ ಉದ್ಯೋಗಸ್ಥರು, ಶಾಲಾ-ಕಾಲೇಜು ಮಕ್ಕಳು ನಿತ್ಯ ಇದೇ ಅಂಗಡಿ ಮುಂಭಾಗದಲ್ಲಿ ಓಡಾಡಬೇಕಾಗಿದೆ. ಪ್ರತಿ ನಿತ್ಯ ಓಡಾಡಬೇಕಾದರೆ ಮಹಿಳೆಯರು, ಮಕ್ಕಳು ತುಂಬಾ ಕಿರಿಕಿರಿ ಅನುಭವಿಸುತ್ತಿದ್ದಾರೆ ಎಂದರು.

ಅಂಗಡಿ ಸುತ್ತಾಮುತ್ತಾ ಕುಡಿದ ಅಮಲಿನಲ್ಲಿ ಇರುವ ವ್ಯಕ್ತಿಗಳೇ ಇರುತ್ತಾರೆ ಮಹಿಳೆಯರು ಒಂಟಿಯಾಗಿ ಓಡಾಡಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಇದ್ದಾರೆ ಆದ್ದರಿಂದ ಕೂಡಲೇ ಈ ಅಂಗಡಿಗೆ ಬೀಗ ಹಾಕಬೇಕು ಎಂಬುದು ನಮ್ಮ ಹಕ್ಕೋತ್ತಾಯ ಎಂದು ತಿಳಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಅಬಕಾರಿ ಇಲಾಖೆ ನಿರೀಕ್ಷಕರಾದ ಎಸ್.ಎಮ್ ಪಾಟೀಲ್, ಈಗಾಗಲೇ ಬಾರ್ ತೆರೆಯುತ್ತಿರುವ ಬಗ್ಗೆ ಸ್ಥಳೀಯರು ನನ್ನ ಗಮನಕ್ಕೆ ತಂದಿದ್ದಾರೆ, ಸ್ಥಳೀಯರ ಮನವಿಯನ್ನು ಮೇಲಾಧಿಕಾರಿಗಳಿಗೆ ಕಳುಹಿಸಿಕೊಡಲಾಗುವುದು ಮುಂದಿನ ನಿರ್ಧಾರ ಅವರೇ ತೆಗೆದುಕೊಳ್ಳುವರು ಎಂದರು.

ಅಬಕಾರಿ ನಿರೀಕ್ಷಕರ ಮಾತಿಗೆ ಒಪ್ಪದ ಸ್ಥಳೀಯರು ಇಂದು ಸಾಂಕೇತಿಕ ಪ್ರತಿಭಟನೆ ನಡೆಸಿದ್ದೇವೆ, ಬಾರ್ ತೆರಯಲು ಅನುಮತಿ ನೀಡಿದ್ದೇ ಆದಲ್ಲಿ ಮುಂದಿನ ದಿನಗಳಲ್ಲಿ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಅರಳು ಮಲ್ಲಿಗೆ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಶಬೀರ್ ಪಾಷಾ, ಕಾಂಗ್ರೆಸ್ ಮುಖಂಡರಾದ ಬಷೀರ್, ನಗರ ಬ್ಲಾಕ್ ಅಧ್ಯಕ್ಷ ಜಗನ್ನಾಥ್, ಹೇಮಂತ್ ರಾಜ್ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

31 minutes ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

8 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

8 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

23 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago