ಕರೇನಹಳ್ಳಿಯಲ್ಲಿ ಮದ್ಯದ ಅಂಗಡಿ ತೆರೆಯಲು ಸ್ಥಳೀಯರ ವಿರೋಧ; ಅನುಮತಿ ರದ್ದು ಮಾಡದಿದ್ದರೆ ಬೃಹತ್ ಹೋರಾಟದ ಎಚ್ಚರಿಕೆ

ಪಿಜಿ ಮಾಡುವುದಾಗಿ ಹೇಳಿ ಮದ್ಯದ ಅಂಗಡಿ ತೆರೆಯಲು ಸಿದ್ಧತೆ ಮಾಡಿಕೊಂಡಿದ್ದು , ಮದ್ಯದ ಅಂಗಡಿ ತೆರೆಯಲು ಅನುಮತಿ ನೀಡಬಾರದು ಎಂದು ನಗರದ ಅಬಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕರೇನಹಳ್ಳಿ ನಿವಾಸಿಗಳು.

ಈ ವೇಳೆ ಮಾತನಾಡಿದ ನಗರಸಭಾ ಸದಸ್ಯೆ ಪ್ರಭಾ ಅವರು, ಅರಳುಮಲ್ಲಿಗೆ ಗ್ರಾಮ ಪಂಚಾಯಿತಿ ಮತ್ತು ನಗರಸಭೆ ವ್ಯಾಪ್ತಿಗೆ ಒಳಪಡುವ ಕರೇನಹಳ್ಳಿಯಲ್ಲಿ ಮದ್ಯದ ಅಂಗಡಿ ತೆರೆಯಲು ನರಸಿಂಹಮೂರ್ತಿ ಎಂಬ ವ್ಯಕ್ತಿ ತಯಾರಿ ನಡೆಸುತ್ತಿದ್ದಾರೆ.

ನಗರದ ವಾರ್ಡ್ ನಂ.31 ಕರೇನಹಳ್ಳಿಯಲ್ಲಿ ವಾರ್ಡ್ ಮಧ್ಯಭಾಗದಲ್ಲಿ ಮದ್ಯದ ಅಂಗಡಿ ತೆರೆಯಲಾಗಿದೆ. ಈ ಬಾರ್ ಓಪನ್ ಆಗಬಾರದು ಎಂದು ಈಗಾಗಲೇ ಅಬಕಾರಿ ಇಲಾಖೆಗೆ ಲಿಖಿತವಾಗಿ ಮನವಿ ಮಾಡಲಾಗಿತ್ತು. ಆದರೂ ಇದಕ್ಕೆ ಕ್ಯಾರೆ ಎನ್ನದೆ ಪಿಜಿ ಹೆಸರಲ್ಲಿ ಅಂಗಡಿ ತೆರೆಯಲಾಗಿದೆ ಎಂದು ತಿಳಿಸಿದರು.

ಈ ಮದ್ಯದ ಅಂಗಡಿ ಸುತ್ತಮುತ್ತಾ ದೇವಸ್ಥಾನ, ಶಾಲಾ-ಕಾಲೇಜು, ಮನೆಗಳು ಇವೆ. ಮಹಿಳಾ ಉದ್ಯೋಗಸ್ಥರು, ಶಾಲಾ-ಕಾಲೇಜು ಮಕ್ಕಳು ನಿತ್ಯ ಇದೇ ಅಂಗಡಿ ಮುಂಭಾಗದಲ್ಲಿ ಓಡಾಡಬೇಕಾಗಿದೆ. ಪ್ರತಿ ನಿತ್ಯ ಓಡಾಡಬೇಕಾದರೆ ಮಹಿಳೆಯರು, ಮಕ್ಕಳು ತುಂಬಾ ಕಿರಿಕಿರಿ ಅನುಭವಿಸುತ್ತಿದ್ದಾರೆ ಎಂದರು.

ಅಂಗಡಿ ಸುತ್ತಾಮುತ್ತಾ ಕುಡಿದ ಅಮಲಿನಲ್ಲಿ ಇರುವ ವ್ಯಕ್ತಿಗಳೇ ಇರುತ್ತಾರೆ ಮಹಿಳೆಯರು ಒಂಟಿಯಾಗಿ ಓಡಾಡಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಇದ್ದಾರೆ ಆದ್ದರಿಂದ ಕೂಡಲೇ ಈ ಅಂಗಡಿಗೆ ಬೀಗ ಹಾಕಬೇಕು ಎಂಬುದು ನಮ್ಮ ಹಕ್ಕೋತ್ತಾಯ ಎಂದು ತಿಳಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಅಬಕಾರಿ ಇಲಾಖೆ ನಿರೀಕ್ಷಕರಾದ ಎಸ್.ಎಮ್ ಪಾಟೀಲ್, ಈಗಾಗಲೇ ಬಾರ್ ತೆರೆಯುತ್ತಿರುವ ಬಗ್ಗೆ ಸ್ಥಳೀಯರು ನನ್ನ ಗಮನಕ್ಕೆ ತಂದಿದ್ದಾರೆ, ಸ್ಥಳೀಯರ ಮನವಿಯನ್ನು ಮೇಲಾಧಿಕಾರಿಗಳಿಗೆ ಕಳುಹಿಸಿಕೊಡಲಾಗುವುದು ಮುಂದಿನ ನಿರ್ಧಾರ ಅವರೇ ತೆಗೆದುಕೊಳ್ಳುವರು ಎಂದರು.

ಅಬಕಾರಿ ನಿರೀಕ್ಷಕರ ಮಾತಿಗೆ ಒಪ್ಪದ ಸ್ಥಳೀಯರು ಇಂದು ಸಾಂಕೇತಿಕ ಪ್ರತಿಭಟನೆ ನಡೆಸಿದ್ದೇವೆ, ಬಾರ್ ತೆರಯಲು ಅನುಮತಿ ನೀಡಿದ್ದೇ ಆದಲ್ಲಿ ಮುಂದಿನ ದಿನಗಳಲ್ಲಿ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಅರಳು ಮಲ್ಲಿಗೆ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಶಬೀರ್ ಪಾಷಾ, ಕಾಂಗ್ರೆಸ್ ಮುಖಂಡರಾದ ಬಷೀರ್, ನಗರ ಬ್ಲಾಕ್ ಅಧ್ಯಕ್ಷ ಜಗನ್ನಾಥ್, ಹೇಮಂತ್ ರಾಜ್ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

7 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

11 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

11 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

14 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago