ಕರ್ತವ್ಯಕ್ಕೆ ಹೊರಡಬೇಕಾಗಿದ್ದ ಯುವತಿ ಹೃದಯಾಘಾತದಿಂದ ಮನೆಯಲ್ಲಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ನಾಪೋಕ್ಲು ಸಮೀಪದ ನೆಲಜಿ ಗ್ರಾಮದಲ್ಲಿ ನಡೆದಿದೆ.
ನೆಲಜಿ ಗ್ರಾಮದ ಕಾಫಿ ಬೆಳೆಗಾರರಾದ ಪೊನ್ನಪ್ಪ ಅವರ ಮಗಳು ನಿಲಿಕಾ ಪೊನ್ನಪ್ಪ (27) ಮೃತ ಯುವತಿ.
ನಿಲಿಕಾ ಮಡಿಕೇರಿಯಲ್ಲಿರುವ ಕೊಡಗು ವೈದ್ಯಕೀಯ ಕಾಲೇಜು ಮತ್ತು ಬೋಧಕ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಇಂದು ಕರ್ತವ್ಯಕ್ಕೆ ಹೊರಟಾಗ ಮನೆಯಲ್ಲಿ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ನಿಲಿಕಾ ವಾಪಸ್ ತನ್ನ ಕೋಣೆಗೆ ಹೋಗಿ ಹಾಸಿಗೆ ಮೇಲೆ ಕುಸಿದು ಬಿದ್ದಿದ್ದಾಳೆ. ಯುವತಿ ತಾಯಿ ಹಿಂದಿನಿಂದ ಹೋಗಿ ಏನಾಯಿತು ಮಗಳೇ ಎಂದು ಕೇಳುವಷ್ಟರಲ್ಲಿಯೇ ನಿಲಿಕಾಳ ಪ್ರಾಣ ಪಕ್ಷಿ ಹಾರಿ ಹೋಗಿದೆ. ತಮ್ಮ ಕಣ್ಣೆದುರೇ ಮಗಳನ್ನು ಕಳೆದುಕೊಂಡ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದ್ದಾರೆ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…