ಪೊಲೀಸ್ ವ್ಯವಸ್ಥೆ ರಾಜ್ಯದ, ಸರ್ಕಾರದ ಘನತೆಯನ್ನು ಹೆಚ್ಚಿಸುವಂತೆ ಕೆಲಸ ಮಾಡುತ್ತದೆ. ಅಭಿವೃದ್ಧಿ ಮತ್ತು ಕಾನೂನು ಸುವ್ಯವಸ್ಥೆಗೆ ನೇರ ಸಂಬಂಧವಿದೆ. ಈ ಹಿನ್ನೆಲೆಯಲ್ಲಿ ಕರ್ತವ್ಯದ ಮೇಲಿದ್ದಾಗ ಹುತಾತ್ಮರಾಗುವ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತವನ್ನು 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ ಮಾಡಲಾಗುವುದು ಎಂದು ಭರವಸೆ ನೀಡಿದ ಸಿಎಂ ಸಿದ್ದರಾಮಯ್ಯ.
ಪೊಲೀಸ್ ಸಂಸ್ಮರಣಾ ದಿನದ ಅಂಗವಾಗಿ ಮೈಸೂರು ರಸ್ತೆಯ ಹುತಾತ್ಮರ ಉದ್ಯಾನವನದಲ್ಲಿ ಹುತಾತ್ಮ ಪೊಲೀಸರಿಗೆ ಗೌರವ ನಮನ ಸಲ್ಲಿಸಿ ಮಾತನಾಡಿದರು.
ಯಾವ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಮರ್ಪಕವಾಗಿರುತ್ತದೋ ಅಲ್ಲಿಗೆ ಬಂಡವಾಳ ಹೆಚ್ಚಾಗಿ ಬರುತ್ತದೆ. ಇದರಿಂದ ಉದ್ಯೋಗ ಸೃಷ್ಟಿ ಹೆಚ್ಚಾಗಿ, ಅಭಿವೃದ್ಧಿ ವೇಗ ಪಡೆದುಕೊಳ್ಳುತ್ತದೆ. ಇದರ ಪರಿಣಾಮ ನಾಡಿನ ಜನರ ತಲಾ ಆದಾಯದ ಪ್ರಮಾಣವೂ ಹೆಚ್ಚಾಗುತ್ತದೆ. ಆದ್ದರಿಂದ ನಾಡಿನ ಕಾನೂನು ಸುವ್ಯವಸ್ಥೆಯನ್ನು ಪೊಲೀಸ್ ಇಲಾಖೆ ಕಟ್ಟು ನಿಟ್ಟಾಗಿ ನಿರ್ವಹಿಸಬೇಕು ಎಂದರು.
ತಂತ್ರಜ್ಞಾನ ಬೆಳೆದಂತೆ ಪೊಲೀಸ್ ವ್ಯವಸ್ಥೆ ಹೊಸ ಹೊಸ ಸವಾಲುಗಳಿಗೆ ಮುಖಾಮುಖಿ ಆಗುತ್ತದೆ. ಸೈಬರ್ ತಂತ್ರಜ್ಞಾನದ ಜತೆಗೇ ಸೈಬರ್ ಅಪರಾಧಗಳೂ ಹೆಚ್ಚಾಗುತ್ತಿವೆ. ಇದನ್ನು ಪರಿಣಾಮಕಾರಿಯಾಗಿ ತಡೆ ಹಿಡಿಯಬೇಕು ಎಂದು ಸೂಚಿಸಿದರು.
ಸುಳ್ಳು ಸುದ್ದಿಗಳು, ಅಶಾಂತಿ ಸೃಷ್ಟಿಸುವ ಸುಳ್ಳುಗಳನ್ನು, ದ್ವೇಷ ಹರಡುವ ಸುಳ್ಳುಗಳನ್ನು ವ್ಯಾಪಕವಾಗಿ ಹರಡಲಾಗುತ್ತಿದೆ. ಸರ್ವರನ್ನೂ ಸಮಾನವಾಗಿ ಕಾಣುವ ಮತ್ತು ಸಮಾನವಾಗಿ ನಡೆಸಿಕೊಳ್ಳುವ ಜವಾಬ್ದಾರಿ ಸರ್ಕಾರ ಮತ್ತು ಪೊಲೀಸ್ ವ್ಯವಸ್ಥೆ ಮೇಲಿದೆ, ಆದ್ದರಿಂದ ಸುಳ್ಳು ಸುದ್ದಿ ಹರಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಸುಳ್ಳು ಮತ್ತು ದ್ವೇಷದ ಸುದ್ದಿಗಳು ನಾಡಿನ GDP ಗೆ ಮಾರಕ. ಅಶಾಂತಿಯ ಪರಿಣಾಮವಾಗಿ ಜನರ ತಲಾ ಆದಾಯಕ್ಕೂ ಧಕ್ಕೆಯಾಗುತ್ತದೆ. ಆದ್ದರಿಂದ ಸುಳ್ಳು ಸುದ್ದಿ ಹರಡುವ ಜಾಲ ತಾಣಗಳು ಮತ್ತು ಅವನ್ನು ನಿರ್ವಹಿಸುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
2125 ಪೊಲೀಸ್ ವಸತಿ ಗೃಹಗಳನ್ನು ನಿರ್ಮಿಸಲು 450 ಕೋಟಿ ನೀಡಲಾಗುವುದು. ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳ ಆರೋಗ್ಯ ಭಾಗ್ಯಕ್ಕಾಗಿ 100 ಕೋಟಿ ರೂ. ಒದಗಿಸಲಾಗಿದೆ. ನಿವೃತ್ತ ಸಿಬ್ಬಂದಿಯ ಆರೋಗ್ಯ, ಚಿಕಿತ್ಸೆಗಾಗಿ ನಿಶ್ಚಿತ ಠೇವಣಿ ಇಡಲಾಗಿದೆ. ಪೊಲೀಸ್ ಸಿಬ್ಬಂದಿಯ ಮಕ್ಕಳ ಶಿಕ್ಷಣಕ್ಕಾಗಿ 7 ಜಿಲ್ಲೆಗಳಲ್ಲಿ 7 ಪೊಲೀಸ್ ಪಬ್ಲಿಕ್ ಶಾಲೆ ಆರಂಭಿಸಲಾಗುತ್ತಿದೆ. ಇವುಗಳ ಮೂಲಕ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಸರ್ಕಾರ ಬದ್ದವಾಗಿದೆ. ಪೊಲೀಸ್ ಕ್ಯಾಂಟೀನ್ ಗಳನ್ನು ಆರಂಭಿಸಲಾಗುತ್ತಿದೆ ಎಂದು ತಿಳಿಸಿದರು.
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…