ಪೊಲೀಸ್ ವ್ಯವಸ್ಥೆ ರಾಜ್ಯದ, ಸರ್ಕಾರದ ಘನತೆಯನ್ನು ಹೆಚ್ಚಿಸುವಂತೆ ಕೆಲಸ ಮಾಡುತ್ತದೆ. ಅಭಿವೃದ್ಧಿ ಮತ್ತು ಕಾನೂನು ಸುವ್ಯವಸ್ಥೆಗೆ ನೇರ ಸಂಬಂಧವಿದೆ. ಈ ಹಿನ್ನೆಲೆಯಲ್ಲಿ ಕರ್ತವ್ಯದ ಮೇಲಿದ್ದಾಗ ಹುತಾತ್ಮರಾಗುವ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತವನ್ನು 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ ಮಾಡಲಾಗುವುದು ಎಂದು ಭರವಸೆ ನೀಡಿದ ಸಿಎಂ ಸಿದ್ದರಾಮಯ್ಯ.
ಪೊಲೀಸ್ ಸಂಸ್ಮರಣಾ ದಿನದ ಅಂಗವಾಗಿ ಮೈಸೂರು ರಸ್ತೆಯ ಹುತಾತ್ಮರ ಉದ್ಯಾನವನದಲ್ಲಿ ಹುತಾತ್ಮ ಪೊಲೀಸರಿಗೆ ಗೌರವ ನಮನ ಸಲ್ಲಿಸಿ ಮಾತನಾಡಿದರು.
ಯಾವ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಮರ್ಪಕವಾಗಿರುತ್ತದೋ ಅಲ್ಲಿಗೆ ಬಂಡವಾಳ ಹೆಚ್ಚಾಗಿ ಬರುತ್ತದೆ. ಇದರಿಂದ ಉದ್ಯೋಗ ಸೃಷ್ಟಿ ಹೆಚ್ಚಾಗಿ, ಅಭಿವೃದ್ಧಿ ವೇಗ ಪಡೆದುಕೊಳ್ಳುತ್ತದೆ. ಇದರ ಪರಿಣಾಮ ನಾಡಿನ ಜನರ ತಲಾ ಆದಾಯದ ಪ್ರಮಾಣವೂ ಹೆಚ್ಚಾಗುತ್ತದೆ. ಆದ್ದರಿಂದ ನಾಡಿನ ಕಾನೂನು ಸುವ್ಯವಸ್ಥೆಯನ್ನು ಪೊಲೀಸ್ ಇಲಾಖೆ ಕಟ್ಟು ನಿಟ್ಟಾಗಿ ನಿರ್ವಹಿಸಬೇಕು ಎಂದರು.
ತಂತ್ರಜ್ಞಾನ ಬೆಳೆದಂತೆ ಪೊಲೀಸ್ ವ್ಯವಸ್ಥೆ ಹೊಸ ಹೊಸ ಸವಾಲುಗಳಿಗೆ ಮುಖಾಮುಖಿ ಆಗುತ್ತದೆ. ಸೈಬರ್ ತಂತ್ರಜ್ಞಾನದ ಜತೆಗೇ ಸೈಬರ್ ಅಪರಾಧಗಳೂ ಹೆಚ್ಚಾಗುತ್ತಿವೆ. ಇದನ್ನು ಪರಿಣಾಮಕಾರಿಯಾಗಿ ತಡೆ ಹಿಡಿಯಬೇಕು ಎಂದು ಸೂಚಿಸಿದರು.
ಸುಳ್ಳು ಸುದ್ದಿಗಳು, ಅಶಾಂತಿ ಸೃಷ್ಟಿಸುವ ಸುಳ್ಳುಗಳನ್ನು, ದ್ವೇಷ ಹರಡುವ ಸುಳ್ಳುಗಳನ್ನು ವ್ಯಾಪಕವಾಗಿ ಹರಡಲಾಗುತ್ತಿದೆ. ಸರ್ವರನ್ನೂ ಸಮಾನವಾಗಿ ಕಾಣುವ ಮತ್ತು ಸಮಾನವಾಗಿ ನಡೆಸಿಕೊಳ್ಳುವ ಜವಾಬ್ದಾರಿ ಸರ್ಕಾರ ಮತ್ತು ಪೊಲೀಸ್ ವ್ಯವಸ್ಥೆ ಮೇಲಿದೆ, ಆದ್ದರಿಂದ ಸುಳ್ಳು ಸುದ್ದಿ ಹರಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಸುಳ್ಳು ಮತ್ತು ದ್ವೇಷದ ಸುದ್ದಿಗಳು ನಾಡಿನ GDP ಗೆ ಮಾರಕ. ಅಶಾಂತಿಯ ಪರಿಣಾಮವಾಗಿ ಜನರ ತಲಾ ಆದಾಯಕ್ಕೂ ಧಕ್ಕೆಯಾಗುತ್ತದೆ. ಆದ್ದರಿಂದ ಸುಳ್ಳು ಸುದ್ದಿ ಹರಡುವ ಜಾಲ ತಾಣಗಳು ಮತ್ತು ಅವನ್ನು ನಿರ್ವಹಿಸುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
2125 ಪೊಲೀಸ್ ವಸತಿ ಗೃಹಗಳನ್ನು ನಿರ್ಮಿಸಲು 450 ಕೋಟಿ ನೀಡಲಾಗುವುದು. ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳ ಆರೋಗ್ಯ ಭಾಗ್ಯಕ್ಕಾಗಿ 100 ಕೋಟಿ ರೂ. ಒದಗಿಸಲಾಗಿದೆ. ನಿವೃತ್ತ ಸಿಬ್ಬಂದಿಯ ಆರೋಗ್ಯ, ಚಿಕಿತ್ಸೆಗಾಗಿ ನಿಶ್ಚಿತ ಠೇವಣಿ ಇಡಲಾಗಿದೆ. ಪೊಲೀಸ್ ಸಿಬ್ಬಂದಿಯ ಮಕ್ಕಳ ಶಿಕ್ಷಣಕ್ಕಾಗಿ 7 ಜಿಲ್ಲೆಗಳಲ್ಲಿ 7 ಪೊಲೀಸ್ ಪಬ್ಲಿಕ್ ಶಾಲೆ ಆರಂಭಿಸಲಾಗುತ್ತಿದೆ. ಇವುಗಳ ಮೂಲಕ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಸರ್ಕಾರ ಬದ್ದವಾಗಿದೆ. ಪೊಲೀಸ್ ಕ್ಯಾಂಟೀನ್ ಗಳನ್ನು ಆರಂಭಿಸಲಾಗುತ್ತಿದೆ ಎಂದು ತಿಳಿಸಿದರು.
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…