ಪೊಲೀಸ್ ವ್ಯವಸ್ಥೆ ರಾಜ್ಯದ, ಸರ್ಕಾರದ ಘನತೆಯನ್ನು ಹೆಚ್ಚಿಸುವಂತೆ ಕೆಲಸ ಮಾಡುತ್ತದೆ. ಅಭಿವೃದ್ಧಿ ಮತ್ತು ಕಾನೂನು ಸುವ್ಯವಸ್ಥೆಗೆ ನೇರ ಸಂಬಂಧವಿದೆ. ಈ ಹಿನ್ನೆಲೆಯಲ್ಲಿ ಕರ್ತವ್ಯದ ಮೇಲಿದ್ದಾಗ ಹುತಾತ್ಮರಾಗುವ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತವನ್ನು 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ ಮಾಡಲಾಗುವುದು ಎಂದು ಭರವಸೆ ನೀಡಿದ ಸಿಎಂ ಸಿದ್ದರಾಮಯ್ಯ.
ಪೊಲೀಸ್ ಸಂಸ್ಮರಣಾ ದಿನದ ಅಂಗವಾಗಿ ಮೈಸೂರು ರಸ್ತೆಯ ಹುತಾತ್ಮರ ಉದ್ಯಾನವನದಲ್ಲಿ ಹುತಾತ್ಮ ಪೊಲೀಸರಿಗೆ ಗೌರವ ನಮನ ಸಲ್ಲಿಸಿ ಮಾತನಾಡಿದರು.
ಯಾವ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಮರ್ಪಕವಾಗಿರುತ್ತದೋ ಅಲ್ಲಿಗೆ ಬಂಡವಾಳ ಹೆಚ್ಚಾಗಿ ಬರುತ್ತದೆ. ಇದರಿಂದ ಉದ್ಯೋಗ ಸೃಷ್ಟಿ ಹೆಚ್ಚಾಗಿ, ಅಭಿವೃದ್ಧಿ ವೇಗ ಪಡೆದುಕೊಳ್ಳುತ್ತದೆ. ಇದರ ಪರಿಣಾಮ ನಾಡಿನ ಜನರ ತಲಾ ಆದಾಯದ ಪ್ರಮಾಣವೂ ಹೆಚ್ಚಾಗುತ್ತದೆ. ಆದ್ದರಿಂದ ನಾಡಿನ ಕಾನೂನು ಸುವ್ಯವಸ್ಥೆಯನ್ನು ಪೊಲೀಸ್ ಇಲಾಖೆ ಕಟ್ಟು ನಿಟ್ಟಾಗಿ ನಿರ್ವಹಿಸಬೇಕು ಎಂದರು.
ತಂತ್ರಜ್ಞಾನ ಬೆಳೆದಂತೆ ಪೊಲೀಸ್ ವ್ಯವಸ್ಥೆ ಹೊಸ ಹೊಸ ಸವಾಲುಗಳಿಗೆ ಮುಖಾಮುಖಿ ಆಗುತ್ತದೆ. ಸೈಬರ್ ತಂತ್ರಜ್ಞಾನದ ಜತೆಗೇ ಸೈಬರ್ ಅಪರಾಧಗಳೂ ಹೆಚ್ಚಾಗುತ್ತಿವೆ. ಇದನ್ನು ಪರಿಣಾಮಕಾರಿಯಾಗಿ ತಡೆ ಹಿಡಿಯಬೇಕು ಎಂದು ಸೂಚಿಸಿದರು.
ಸುಳ್ಳು ಸುದ್ದಿಗಳು, ಅಶಾಂತಿ ಸೃಷ್ಟಿಸುವ ಸುಳ್ಳುಗಳನ್ನು, ದ್ವೇಷ ಹರಡುವ ಸುಳ್ಳುಗಳನ್ನು ವ್ಯಾಪಕವಾಗಿ ಹರಡಲಾಗುತ್ತಿದೆ. ಸರ್ವರನ್ನೂ ಸಮಾನವಾಗಿ ಕಾಣುವ ಮತ್ತು ಸಮಾನವಾಗಿ ನಡೆಸಿಕೊಳ್ಳುವ ಜವಾಬ್ದಾರಿ ಸರ್ಕಾರ ಮತ್ತು ಪೊಲೀಸ್ ವ್ಯವಸ್ಥೆ ಮೇಲಿದೆ, ಆದ್ದರಿಂದ ಸುಳ್ಳು ಸುದ್ದಿ ಹರಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಸುಳ್ಳು ಮತ್ತು ದ್ವೇಷದ ಸುದ್ದಿಗಳು ನಾಡಿನ GDP ಗೆ ಮಾರಕ. ಅಶಾಂತಿಯ ಪರಿಣಾಮವಾಗಿ ಜನರ ತಲಾ ಆದಾಯಕ್ಕೂ ಧಕ್ಕೆಯಾಗುತ್ತದೆ. ಆದ್ದರಿಂದ ಸುಳ್ಳು ಸುದ್ದಿ ಹರಡುವ ಜಾಲ ತಾಣಗಳು ಮತ್ತು ಅವನ್ನು ನಿರ್ವಹಿಸುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
2125 ಪೊಲೀಸ್ ವಸತಿ ಗೃಹಗಳನ್ನು ನಿರ್ಮಿಸಲು 450 ಕೋಟಿ ನೀಡಲಾಗುವುದು. ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳ ಆರೋಗ್ಯ ಭಾಗ್ಯಕ್ಕಾಗಿ 100 ಕೋಟಿ ರೂ. ಒದಗಿಸಲಾಗಿದೆ. ನಿವೃತ್ತ ಸಿಬ್ಬಂದಿಯ ಆರೋಗ್ಯ, ಚಿಕಿತ್ಸೆಗಾಗಿ ನಿಶ್ಚಿತ ಠೇವಣಿ ಇಡಲಾಗಿದೆ. ಪೊಲೀಸ್ ಸಿಬ್ಬಂದಿಯ ಮಕ್ಕಳ ಶಿಕ್ಷಣಕ್ಕಾಗಿ 7 ಜಿಲ್ಲೆಗಳಲ್ಲಿ 7 ಪೊಲೀಸ್ ಪಬ್ಲಿಕ್ ಶಾಲೆ ಆರಂಭಿಸಲಾಗುತ್ತಿದೆ. ಇವುಗಳ ಮೂಲಕ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಸರ್ಕಾರ ಬದ್ದವಾಗಿದೆ. ಪೊಲೀಸ್ ಕ್ಯಾಂಟೀನ್ ಗಳನ್ನು ಆರಂಭಿಸಲಾಗುತ್ತಿದೆ ಎಂದು ತಿಳಿಸಿದರು.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…