ದೊಡ್ಡಬಳ್ಳಾಪುರ ಯೋಜನಾ ಅಭಿವೃದ್ಧಿ ಪ್ರಾಧಿಕಾರದ ಅನುಮೋದನೆ ಪಡೆಯದೇ ನಿವೇಶನಗಳಿಗೆ ಇ-ಸ್ವತ್ತು ಮಾಡಿಕೊಟ್ಟಿರುವ ಆರೋಪದ ಮೇಲೆ ಗದಗ ಪೌರಾಯುಕ್ತ ರಮೇಶ್ ಎಸ್. ಸುಣಗಾರ ಹಾಗೂ ಕಂದಾಯ ಅಧಿಕಾರಿ ರವೀಂದ್ರ ಬಿ. ಜಾಯಗೊಂಡೆ ಅವರನ್ನು ಸಸ್ಪಂಡ್ ಮಾಡಿ ಪೌರಾಡಳಿತ ಇಲಾಖೆ ಆದೇಶಿಸಿದೆ.
ದೊಡ್ಡಬಳ್ಳಾಪುರ ನಗರಸಭೆಯ ಕರೇನಹಳ್ಳಿ ವಾರ್ಡ್ ವ್ಯಾಪ್ತಿಯಲ್ಲಿ 39 ಅನಧಿಕೃತ ನಿವೇಶನಗಳಿಗೆ ಇ-ಸ್ವತ್ತು ನೀಡಿದ್ದಾರೆ. ಆದರೆ ಇದಕ್ಕೆ ನಗರ ಯೋಜನಾ ಪ್ರಾಧಿಕಾರದ ಅನುಮೋದನೆ ಪಡೆದಿರಲಿಲ್ಲ. ಪೌರಾಡಳಿತ ನಿರ್ದೇಶನಾಲಯ ಹಾಗೂ ಸರ್ಕಾರದ ಸುತ್ತೋಲೆ ಅನುಸಾರ ಖಾತೆಗಳನ್ನು ರದ್ದುಪಡಿಸಲು ಕ್ರಮ ವಹಿಸದೇ 39 ನಿವೇಶನಗಳ ಆಸ್ತಿಯ ಹಕ್ಕನ್ನು ಪವತಿ ಮಾಡಿಕೊಡಲಾಗಿದೆ.
ಸುಜಾತರೆಡ್ಡಿ, ಶ್ರೀನಿವಾಸರೆಡ್ಡಿ ಹೆಸರಿಗೆ ಜಂಟಿಯಾಗಿ ಆಸ್ತಿ ಹಕ್ಕನ್ನು ವರ್ಗಾಯಿಸಿ ಇ- ಸ್ವತ್ತು ಮಾಡಿಕೊಡುವ ಮೂಲಕ ಕರ್ತವ್ಯಲೋಪ ಎಸಗಿದ್ದಾರೆ.
ಅಂದಿನ ಪೌರಾಯುಕ್ತ ರಮೇಶ್ ಎಸ್. ಸುಣಗಾರ ಹಾಗೂ ಕಂದಾಯ ಅಧಿಕಾರಿ ರವೀಂದ್ರ ಬಿ. ಜಾಯಗೊಂಡೆ ಅವರನ್ನು ಇಲಾಖಾ ವಿಚಾರಣೆ ಬಾಕಿ ಇರಿಸಿ ಸೇವೆಯಿಂದ ಅಮಾನತುಗೊಳಿಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳು ಪೌರಾಡಳಿತ ಇಲಾಖೆಗೆ ಪತ್ರ ಬರೆದಿದ್ದರು.
ಈ ಪತ್ರ ಗಮನಿಸಿದ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು ಹಾಗೂ ಶಿಸ್ತು ಪ್ರಾಧಿಕಾರಿಗಳಾದ ಮಂಜುಶ್ರೀ ಎನ್. ಅವರು ಕರ್ತವ್ಯ ಲೋಪ ಎಸಗಿರುವ ಅಂದಿನ ದೊಡ್ಡಬಳ್ಳಾಪುರ ನಗರಸಭೆ ಪೌರಾಯುಕ್ತರಾಗಿದ್ದ ಹಾಗೂ ಗದಗ -ಬೆಟಗೇರಿ ನಗರಸಭೆ ಪೌರಾಯುಕ್ತ ರಮೇಶ್ ಎಸ್. ಸುಣಗಾರ ಹಾಗೂ ಕಂದಾಯ ಅಧಿಕಾರಿ ರವೀಂದ್ರ ಬಿ.ಜಾಯಗೊಂಡೆ ಮೇಲಿನ ಇಲಾಖಾ ವಿಚಾರಣೆ ಕಾಯ್ದಿರಿಸಿ ಕೆ. ಸಿ. ಎಸ್. (ಸಿಸಿಎ) ನಿಯಮ, 1957 ರ ನಿಯಮ 10(1)(ಡಿ) ಅನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿ ಜ.5 ಗೊಳಿಸಿ ಆದೇಶ ಹೊರಡಿಸಿದ್ದಾರೆ.
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…