ಕರ್ತವ್ಯ ಲೋಪ: ಗದಗ ಪೌರಾಯುಕ್ತ ರಮೇಶ ಸುಣಗಾರ ಅಮಾನತು

ದೊಡ್ಡಬಳ್ಳಾಪುರ ಯೋಜನಾ ಅಭಿವೃದ್ಧಿ ಪ್ರಾಧಿಕಾರದ ಅನುಮೋದನೆ ಪಡೆಯದೇ ನಿವೇಶನಗಳಿಗೆ ಇ-ಸ್ವತ್ತು ಮಾಡಿಕೊಟ್ಟಿರುವ ಆರೋಪದ ಮೇಲೆ ಗದಗ ಪೌರಾಯುಕ್ತ ರಮೇಶ್ ಎಸ್. ಸುಣಗಾರ ಹಾಗೂ ಕಂದಾಯ ಅಧಿಕಾರಿ ರವೀಂದ್ರ ಬಿ. ಜಾಯಗೊಂಡೆ ಅವರನ್ನು ಸಸ್ಪಂಡ್ ಮಾಡಿ ಪೌರಾಡಳಿತ ಇಲಾಖೆ ಆದೇಶಿಸಿದೆ.

ದೊಡ್ಡಬಳ್ಳಾಪುರ ನಗರಸಭೆಯ ಕರೇನಹಳ್ಳಿ ವಾರ್ಡ್ ವ್ಯಾಪ್ತಿಯಲ್ಲಿ 39 ಅನಧಿಕೃತ ನಿವೇಶನಗಳಿಗೆ ಇ-ಸ್ವತ್ತು ನೀಡಿದ್ದಾರೆ. ಆದರೆ ಇದಕ್ಕೆ ನಗರ ಯೋಜನಾ ಪ್ರಾಧಿಕಾರದ ಅನುಮೋದನೆ ಪಡೆದಿರಲಿಲ್ಲ. ಪೌರಾಡಳಿತ ನಿರ್ದೇಶನಾಲಯ ಹಾಗೂ ಸರ್ಕಾರದ ಸುತ್ತೋಲೆ ಅನುಸಾರ ಖಾತೆಗಳನ್ನು ರದ್ದುಪಡಿಸಲು ಕ್ರಮ ವಹಿಸದೇ 39 ನಿವೇಶನಗಳ ಆಸ್ತಿಯ ಹಕ್ಕನ್ನು ಪವತಿ ಮಾಡಿಕೊಡಲಾಗಿದೆ.
ಸುಜಾತರೆಡ್ಡಿ, ಶ್ರೀನಿವಾಸರೆಡ್ಡಿ ಹೆಸರಿಗೆ ಜಂಟಿಯಾಗಿ ಆಸ್ತಿ ಹಕ್ಕನ್ನು ವರ್ಗಾಯಿಸಿ ಇ- ಸ್ವತ್ತು ಮಾಡಿಕೊಡುವ ಮೂಲಕ ಕರ್ತವ್ಯಲೋಪ ಎಸಗಿದ್ದಾರೆ.

ಅಂದಿನ ಪೌರಾಯುಕ್ತ ರಮೇಶ್ ಎಸ್. ಸುಣಗಾರ ಹಾಗೂ ಕಂದಾಯ ಅಧಿಕಾರಿ ರವೀಂದ್ರ ಬಿ. ಜಾಯಗೊಂಡೆ ಅವರನ್ನು ಇಲಾಖಾ ವಿಚಾರಣೆ ಬಾಕಿ ಇರಿಸಿ ಸೇವೆಯಿಂದ ಅಮಾನತುಗೊಳಿಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳು ಪೌರಾಡಳಿತ ಇಲಾಖೆಗೆ ಪತ್ರ ಬರೆದಿದ್ದರು.

ಈ ಪತ್ರ ಗಮನಿಸಿದ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು ಹಾಗೂ ಶಿಸ್ತು ಪ್ರಾಧಿಕಾರಿಗಳಾದ ಮಂಜುಶ್ರೀ ಎನ್. ಅವರು ಕರ್ತವ್ಯ ಲೋಪ ಎಸಗಿರುವ ಅಂದಿನ ದೊಡ್ಡಬಳ್ಳಾಪುರ ನಗರಸಭೆ ಪೌರಾಯುಕ್ತರಾಗಿದ್ದ ಹಾಗೂ ಗದಗ -ಬೆಟಗೇರಿ ನಗರಸಭೆ ಪೌರಾಯುಕ್ತ ರಮೇಶ್ ಎಸ್. ಸುಣಗಾರ ಹಾಗೂ ಕಂದಾಯ ಅಧಿಕಾರಿ ರವೀಂದ್ರ ಬಿ.ಜಾಯಗೊಂಡೆ ಮೇಲಿನ ಇಲಾಖಾ ವಿಚಾರಣೆ ಕಾಯ್ದಿರಿಸಿ ಕೆ. ಸಿ. ಎಸ್. (ಸಿಸಿಎ) ನಿಯಮ, 1957 ರ ನಿಯಮ 10(1)(ಡಿ) ಅನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿ ಜ.5 ಗೊಳಿಸಿ ಆದೇಶ ಹೊರಡಿಸಿದ್ದಾರೆ.

Ramesh Babu

Journalist

Recent Posts

ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…

10 minutes ago

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

4 hours ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

5 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

5 hours ago

ಕರ್ನಾಟಕದ ಶೈಕ್ಷಣಿಕ ಭಾಷಾ ನೀತಿ…..

ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…

9 hours ago

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

20 hours ago