ಕರ್ತವ್ಯ ಲೋಪ: ಗದಗ ಪೌರಾಯುಕ್ತ ರಮೇಶ ಸುಣಗಾರ ಅಮಾನತು

ದೊಡ್ಡಬಳ್ಳಾಪುರ ಯೋಜನಾ ಅಭಿವೃದ್ಧಿ ಪ್ರಾಧಿಕಾರದ ಅನುಮೋದನೆ ಪಡೆಯದೇ ನಿವೇಶನಗಳಿಗೆ ಇ-ಸ್ವತ್ತು ಮಾಡಿಕೊಟ್ಟಿರುವ ಆರೋಪದ ಮೇಲೆ ಗದಗ ಪೌರಾಯುಕ್ತ ರಮೇಶ್ ಎಸ್. ಸುಣಗಾರ ಹಾಗೂ ಕಂದಾಯ ಅಧಿಕಾರಿ ರವೀಂದ್ರ ಬಿ. ಜಾಯಗೊಂಡೆ ಅವರನ್ನು ಸಸ್ಪಂಡ್ ಮಾಡಿ ಪೌರಾಡಳಿತ ಇಲಾಖೆ ಆದೇಶಿಸಿದೆ.

ದೊಡ್ಡಬಳ್ಳಾಪುರ ನಗರಸಭೆಯ ಕರೇನಹಳ್ಳಿ ವಾರ್ಡ್ ವ್ಯಾಪ್ತಿಯಲ್ಲಿ 39 ಅನಧಿಕೃತ ನಿವೇಶನಗಳಿಗೆ ಇ-ಸ್ವತ್ತು ನೀಡಿದ್ದಾರೆ. ಆದರೆ ಇದಕ್ಕೆ ನಗರ ಯೋಜನಾ ಪ್ರಾಧಿಕಾರದ ಅನುಮೋದನೆ ಪಡೆದಿರಲಿಲ್ಲ. ಪೌರಾಡಳಿತ ನಿರ್ದೇಶನಾಲಯ ಹಾಗೂ ಸರ್ಕಾರದ ಸುತ್ತೋಲೆ ಅನುಸಾರ ಖಾತೆಗಳನ್ನು ರದ್ದುಪಡಿಸಲು ಕ್ರಮ ವಹಿಸದೇ 39 ನಿವೇಶನಗಳ ಆಸ್ತಿಯ ಹಕ್ಕನ್ನು ಪವತಿ ಮಾಡಿಕೊಡಲಾಗಿದೆ.
ಸುಜಾತರೆಡ್ಡಿ, ಶ್ರೀನಿವಾಸರೆಡ್ಡಿ ಹೆಸರಿಗೆ ಜಂಟಿಯಾಗಿ ಆಸ್ತಿ ಹಕ್ಕನ್ನು ವರ್ಗಾಯಿಸಿ ಇ- ಸ್ವತ್ತು ಮಾಡಿಕೊಡುವ ಮೂಲಕ ಕರ್ತವ್ಯಲೋಪ ಎಸಗಿದ್ದಾರೆ.

ಅಂದಿನ ಪೌರಾಯುಕ್ತ ರಮೇಶ್ ಎಸ್. ಸುಣಗಾರ ಹಾಗೂ ಕಂದಾಯ ಅಧಿಕಾರಿ ರವೀಂದ್ರ ಬಿ. ಜಾಯಗೊಂಡೆ ಅವರನ್ನು ಇಲಾಖಾ ವಿಚಾರಣೆ ಬಾಕಿ ಇರಿಸಿ ಸೇವೆಯಿಂದ ಅಮಾನತುಗೊಳಿಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳು ಪೌರಾಡಳಿತ ಇಲಾಖೆಗೆ ಪತ್ರ ಬರೆದಿದ್ದರು.

ಈ ಪತ್ರ ಗಮನಿಸಿದ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು ಹಾಗೂ ಶಿಸ್ತು ಪ್ರಾಧಿಕಾರಿಗಳಾದ ಮಂಜುಶ್ರೀ ಎನ್. ಅವರು ಕರ್ತವ್ಯ ಲೋಪ ಎಸಗಿರುವ ಅಂದಿನ ದೊಡ್ಡಬಳ್ಳಾಪುರ ನಗರಸಭೆ ಪೌರಾಯುಕ್ತರಾಗಿದ್ದ ಹಾಗೂ ಗದಗ -ಬೆಟಗೇರಿ ನಗರಸಭೆ ಪೌರಾಯುಕ್ತ ರಮೇಶ್ ಎಸ್. ಸುಣಗಾರ ಹಾಗೂ ಕಂದಾಯ ಅಧಿಕಾರಿ ರವೀಂದ್ರ ಬಿ.ಜಾಯಗೊಂಡೆ ಮೇಲಿನ ಇಲಾಖಾ ವಿಚಾರಣೆ ಕಾಯ್ದಿರಿಸಿ ಕೆ. ಸಿ. ಎಸ್. (ಸಿಸಿಎ) ನಿಯಮ, 1957 ರ ನಿಯಮ 10(1)(ಡಿ) ಅನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿ ಜ.5 ಗೊಳಿಸಿ ಆದೇಶ ಹೊರಡಿಸಿದ್ದಾರೆ.

Ramesh Babu

Journalist

Recent Posts

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

3 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

9 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

11 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago