ದೊಡ್ಡಬಳ್ಳಾಪುರ ಯೋಜನಾ ಅಭಿವೃದ್ಧಿ ಪ್ರಾಧಿಕಾರದ ಅನುಮೋದನೆ ಪಡೆಯದೇ ನಿವೇಶನಗಳಿಗೆ ಇ-ಸ್ವತ್ತು ಮಾಡಿಕೊಟ್ಟಿರುವ ಆರೋಪದ ಮೇಲೆ ಗದಗ ಪೌರಾಯುಕ್ತ ರಮೇಶ್ ಎಸ್. ಸುಣಗಾರ ಹಾಗೂ ಕಂದಾಯ ಅಧಿಕಾರಿ ರವೀಂದ್ರ ಬಿ. ಜಾಯಗೊಂಡೆ ಅವರನ್ನು ಸಸ್ಪಂಡ್ ಮಾಡಿ ಪೌರಾಡಳಿತ ಇಲಾಖೆ ಆದೇಶಿಸಿದೆ.
ದೊಡ್ಡಬಳ್ಳಾಪುರ ನಗರಸಭೆಯ ಕರೇನಹಳ್ಳಿ ವಾರ್ಡ್ ವ್ಯಾಪ್ತಿಯಲ್ಲಿ 39 ಅನಧಿಕೃತ ನಿವೇಶನಗಳಿಗೆ ಇ-ಸ್ವತ್ತು ನೀಡಿದ್ದಾರೆ. ಆದರೆ ಇದಕ್ಕೆ ನಗರ ಯೋಜನಾ ಪ್ರಾಧಿಕಾರದ ಅನುಮೋದನೆ ಪಡೆದಿರಲಿಲ್ಲ. ಪೌರಾಡಳಿತ ನಿರ್ದೇಶನಾಲಯ ಹಾಗೂ ಸರ್ಕಾರದ ಸುತ್ತೋಲೆ ಅನುಸಾರ ಖಾತೆಗಳನ್ನು ರದ್ದುಪಡಿಸಲು ಕ್ರಮ ವಹಿಸದೇ 39 ನಿವೇಶನಗಳ ಆಸ್ತಿಯ ಹಕ್ಕನ್ನು ಪವತಿ ಮಾಡಿಕೊಡಲಾಗಿದೆ.
ಸುಜಾತರೆಡ್ಡಿ, ಶ್ರೀನಿವಾಸರೆಡ್ಡಿ ಹೆಸರಿಗೆ ಜಂಟಿಯಾಗಿ ಆಸ್ತಿ ಹಕ್ಕನ್ನು ವರ್ಗಾಯಿಸಿ ಇ- ಸ್ವತ್ತು ಮಾಡಿಕೊಡುವ ಮೂಲಕ ಕರ್ತವ್ಯಲೋಪ ಎಸಗಿದ್ದಾರೆ.
ಅಂದಿನ ಪೌರಾಯುಕ್ತ ರಮೇಶ್ ಎಸ್. ಸುಣಗಾರ ಹಾಗೂ ಕಂದಾಯ ಅಧಿಕಾರಿ ರವೀಂದ್ರ ಬಿ. ಜಾಯಗೊಂಡೆ ಅವರನ್ನು ಇಲಾಖಾ ವಿಚಾರಣೆ ಬಾಕಿ ಇರಿಸಿ ಸೇವೆಯಿಂದ ಅಮಾನತುಗೊಳಿಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳು ಪೌರಾಡಳಿತ ಇಲಾಖೆಗೆ ಪತ್ರ ಬರೆದಿದ್ದರು.
ಈ ಪತ್ರ ಗಮನಿಸಿದ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು ಹಾಗೂ ಶಿಸ್ತು ಪ್ರಾಧಿಕಾರಿಗಳಾದ ಮಂಜುಶ್ರೀ ಎನ್. ಅವರು ಕರ್ತವ್ಯ ಲೋಪ ಎಸಗಿರುವ ಅಂದಿನ ದೊಡ್ಡಬಳ್ಳಾಪುರ ನಗರಸಭೆ ಪೌರಾಯುಕ್ತರಾಗಿದ್ದ ಹಾಗೂ ಗದಗ -ಬೆಟಗೇರಿ ನಗರಸಭೆ ಪೌರಾಯುಕ್ತ ರಮೇಶ್ ಎಸ್. ಸುಣಗಾರ ಹಾಗೂ ಕಂದಾಯ ಅಧಿಕಾರಿ ರವೀಂದ್ರ ಬಿ.ಜಾಯಗೊಂಡೆ ಮೇಲಿನ ಇಲಾಖಾ ವಿಚಾರಣೆ ಕಾಯ್ದಿರಿಸಿ ಕೆ. ಸಿ. ಎಸ್. (ಸಿಸಿಎ) ನಿಯಮ, 1957 ರ ನಿಯಮ 10(1)(ಡಿ) ಅನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿ ಜ.5 ಗೊಳಿಸಿ ಆದೇಶ ಹೊರಡಿಸಿದ್ದಾರೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…