ದೊಡ್ಡಬಳ್ಳಾಪುರ ಯೋಜನಾ ಅಭಿವೃದ್ಧಿ ಪ್ರಾಧಿಕಾರದ ಅನುಮೋದನೆ ಪಡೆಯದೇ ನಿವೇಶನಗಳಿಗೆ ಇ-ಸ್ವತ್ತು ಮಾಡಿಕೊಟ್ಟಿರುವ ಆರೋಪದ ಮೇಲೆ ಗದಗ ಪೌರಾಯುಕ್ತ ರಮೇಶ್ ಎಸ್. ಸುಣಗಾರ ಹಾಗೂ ಕಂದಾಯ ಅಧಿಕಾರಿ ರವೀಂದ್ರ ಬಿ. ಜಾಯಗೊಂಡೆ ಅವರನ್ನು ಸಸ್ಪಂಡ್ ಮಾಡಿ ಪೌರಾಡಳಿತ ಇಲಾಖೆ ಆದೇಶಿಸಿದೆ.
ದೊಡ್ಡಬಳ್ಳಾಪುರ ನಗರಸಭೆಯ ಕರೇನಹಳ್ಳಿ ವಾರ್ಡ್ ವ್ಯಾಪ್ತಿಯಲ್ಲಿ 39 ಅನಧಿಕೃತ ನಿವೇಶನಗಳಿಗೆ ಇ-ಸ್ವತ್ತು ನೀಡಿದ್ದಾರೆ. ಆದರೆ ಇದಕ್ಕೆ ನಗರ ಯೋಜನಾ ಪ್ರಾಧಿಕಾರದ ಅನುಮೋದನೆ ಪಡೆದಿರಲಿಲ್ಲ. ಪೌರಾಡಳಿತ ನಿರ್ದೇಶನಾಲಯ ಹಾಗೂ ಸರ್ಕಾರದ ಸುತ್ತೋಲೆ ಅನುಸಾರ ಖಾತೆಗಳನ್ನು ರದ್ದುಪಡಿಸಲು ಕ್ರಮ ವಹಿಸದೇ 39 ನಿವೇಶನಗಳ ಆಸ್ತಿಯ ಹಕ್ಕನ್ನು ಪವತಿ ಮಾಡಿಕೊಡಲಾಗಿದೆ.
ಸುಜಾತರೆಡ್ಡಿ, ಶ್ರೀನಿವಾಸರೆಡ್ಡಿ ಹೆಸರಿಗೆ ಜಂಟಿಯಾಗಿ ಆಸ್ತಿ ಹಕ್ಕನ್ನು ವರ್ಗಾಯಿಸಿ ಇ- ಸ್ವತ್ತು ಮಾಡಿಕೊಡುವ ಮೂಲಕ ಕರ್ತವ್ಯಲೋಪ ಎಸಗಿದ್ದಾರೆ.
ಅಂದಿನ ಪೌರಾಯುಕ್ತ ರಮೇಶ್ ಎಸ್. ಸುಣಗಾರ ಹಾಗೂ ಕಂದಾಯ ಅಧಿಕಾರಿ ರವೀಂದ್ರ ಬಿ. ಜಾಯಗೊಂಡೆ ಅವರನ್ನು ಇಲಾಖಾ ವಿಚಾರಣೆ ಬಾಕಿ ಇರಿಸಿ ಸೇವೆಯಿಂದ ಅಮಾನತುಗೊಳಿಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳು ಪೌರಾಡಳಿತ ಇಲಾಖೆಗೆ ಪತ್ರ ಬರೆದಿದ್ದರು.
ಈ ಪತ್ರ ಗಮನಿಸಿದ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು ಹಾಗೂ ಶಿಸ್ತು ಪ್ರಾಧಿಕಾರಿಗಳಾದ ಮಂಜುಶ್ರೀ ಎನ್. ಅವರು ಕರ್ತವ್ಯ ಲೋಪ ಎಸಗಿರುವ ಅಂದಿನ ದೊಡ್ಡಬಳ್ಳಾಪುರ ನಗರಸಭೆ ಪೌರಾಯುಕ್ತರಾಗಿದ್ದ ಹಾಗೂ ಗದಗ -ಬೆಟಗೇರಿ ನಗರಸಭೆ ಪೌರಾಯುಕ್ತ ರಮೇಶ್ ಎಸ್. ಸುಣಗಾರ ಹಾಗೂ ಕಂದಾಯ ಅಧಿಕಾರಿ ರವೀಂದ್ರ ಬಿ.ಜಾಯಗೊಂಡೆ ಮೇಲಿನ ಇಲಾಖಾ ವಿಚಾರಣೆ ಕಾಯ್ದಿರಿಸಿ ಕೆ. ಸಿ. ಎಸ್. (ಸಿಸಿಎ) ನಿಯಮ, 1957 ರ ನಿಯಮ 10(1)(ಡಿ) ಅನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿ ಜ.5 ಗೊಳಿಸಿ ಆದೇಶ ಹೊರಡಿಸಿದ್ದಾರೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…