ದೊಡ್ಡಬಳ್ಳಾಪುರ ಯೋಜನಾ ಅಭಿವೃದ್ಧಿ ಪ್ರಾಧಿಕಾರದ ಅನುಮೋದನೆ ಪಡೆಯದೇ ನಿವೇಶನಗಳಿಗೆ ಇ-ಸ್ವತ್ತು ಮಾಡಿಕೊಟ್ಟಿರುವ ಆರೋಪದ ಮೇಲೆ ಗದಗ ಪೌರಾಯುಕ್ತ ರಮೇಶ್ ಎಸ್. ಸುಣಗಾರ ಹಾಗೂ ಕಂದಾಯ ಅಧಿಕಾರಿ ರವೀಂದ್ರ ಬಿ. ಜಾಯಗೊಂಡೆ ಅವರನ್ನು ಸಸ್ಪಂಡ್ ಮಾಡಿ ಪೌರಾಡಳಿತ ಇಲಾಖೆ ಆದೇಶಿಸಿದೆ.
ದೊಡ್ಡಬಳ್ಳಾಪುರ ನಗರಸಭೆಯ ಕರೇನಹಳ್ಳಿ ವಾರ್ಡ್ ವ್ಯಾಪ್ತಿಯಲ್ಲಿ 39 ಅನಧಿಕೃತ ನಿವೇಶನಗಳಿಗೆ ಇ-ಸ್ವತ್ತು ನೀಡಿದ್ದಾರೆ. ಆದರೆ ಇದಕ್ಕೆ ನಗರ ಯೋಜನಾ ಪ್ರಾಧಿಕಾರದ ಅನುಮೋದನೆ ಪಡೆದಿರಲಿಲ್ಲ. ಪೌರಾಡಳಿತ ನಿರ್ದೇಶನಾಲಯ ಹಾಗೂ ಸರ್ಕಾರದ ಸುತ್ತೋಲೆ ಅನುಸಾರ ಖಾತೆಗಳನ್ನು ರದ್ದುಪಡಿಸಲು ಕ್ರಮ ವಹಿಸದೇ 39 ನಿವೇಶನಗಳ ಆಸ್ತಿಯ ಹಕ್ಕನ್ನು ಪವತಿ ಮಾಡಿಕೊಡಲಾಗಿದೆ.
ಸುಜಾತರೆಡ್ಡಿ, ಶ್ರೀನಿವಾಸರೆಡ್ಡಿ ಹೆಸರಿಗೆ ಜಂಟಿಯಾಗಿ ಆಸ್ತಿ ಹಕ್ಕನ್ನು ವರ್ಗಾಯಿಸಿ ಇ- ಸ್ವತ್ತು ಮಾಡಿಕೊಡುವ ಮೂಲಕ ಕರ್ತವ್ಯಲೋಪ ಎಸಗಿದ್ದಾರೆ.
ಅಂದಿನ ಪೌರಾಯುಕ್ತ ರಮೇಶ್ ಎಸ್. ಸುಣಗಾರ ಹಾಗೂ ಕಂದಾಯ ಅಧಿಕಾರಿ ರವೀಂದ್ರ ಬಿ. ಜಾಯಗೊಂಡೆ ಅವರನ್ನು ಇಲಾಖಾ ವಿಚಾರಣೆ ಬಾಕಿ ಇರಿಸಿ ಸೇವೆಯಿಂದ ಅಮಾನತುಗೊಳಿಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳು ಪೌರಾಡಳಿತ ಇಲಾಖೆಗೆ ಪತ್ರ ಬರೆದಿದ್ದರು.
ಈ ಪತ್ರ ಗಮನಿಸಿದ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು ಹಾಗೂ ಶಿಸ್ತು ಪ್ರಾಧಿಕಾರಿಗಳಾದ ಮಂಜುಶ್ರೀ ಎನ್. ಅವರು ಕರ್ತವ್ಯ ಲೋಪ ಎಸಗಿರುವ ಅಂದಿನ ದೊಡ್ಡಬಳ್ಳಾಪುರ ನಗರಸಭೆ ಪೌರಾಯುಕ್ತರಾಗಿದ್ದ ಹಾಗೂ ಗದಗ -ಬೆಟಗೇರಿ ನಗರಸಭೆ ಪೌರಾಯುಕ್ತ ರಮೇಶ್ ಎಸ್. ಸುಣಗಾರ ಹಾಗೂ ಕಂದಾಯ ಅಧಿಕಾರಿ ರವೀಂದ್ರ ಬಿ.ಜಾಯಗೊಂಡೆ ಮೇಲಿನ ಇಲಾಖಾ ವಿಚಾರಣೆ ಕಾಯ್ದಿರಿಸಿ ಕೆ. ಸಿ. ಎಸ್. (ಸಿಸಿಎ) ನಿಯಮ, 1957 ರ ನಿಯಮ 10(1)(ಡಿ) ಅನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿ ಜ.5 ಗೊಳಿಸಿ ಆದೇಶ ಹೊರಡಿಸಿದ್ದಾರೆ.
ನಡೆ ನುಡಿ - ಮಾತು ಕೃತಿಯ ನಡುವೆ ದೊಡ್ಡ ಕಂದರ ಸೃಷ್ಠಿಯಾಗಿರುವ ಸನ್ನಿವೇಶದಲ್ಲಿ ಪ್ರಮಾಣ ವಚನ ಒಂದು ಅಧೀಕೃತ ಮತ್ತು…
ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…
ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…
ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…