Categories: ರಾಜ್ಯ

ಕರ್ನಾಟಕಕ್ಕೆ ಅಕ್ಕಿ ಕೊಡಿ ಎಂದು ಕೇಂದ್ರಕ್ಕೆ ಒತ್ತಾಯಿಸದ ರಾಜ್ಯ ಬಿಜೆಪಿ- ಅಕ್ಕಿ ಕೊಡಲು ಆಗದಿದ್ದರೆ ಹಣ ಕೊಡಿ‌ ಎಂದು ನಮಗೆ ಬಿಟ್ಟಿ ಉಪದೇಶ ನೀಡುವ ಜಿಜೆಪಿ ನಾಯಕರು; ಇದು ಅವರ ನೈಜ ಮುಖ; ಸಿಎಂ‌ ಸಿದ್ದರಾಮಯ್ಯ ಕಿಡಿ

5 ಕೆ.ಜಿ ಅಕ್ಕಿ ಕೊಡಿ, ಉಳಿದ 5 ಕೆ.ಜಿ ಅಕ್ಕಿ ಕೊಡಲು ಆಗದಿದ್ರೆ ಹಣ ಕೊಡಿ ಎಂದು ನಮಗೆ ಬಿಟ್ಟಿ ಉಪದೇಶ ನೀಡುವ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಮುಂತಾದ ಬಿಜೆಪಿ ನಾಯಕರು ಒಂದು ಬಾರಿಯೂ ಇದು ಬಡವರಿಗಾಗಿ ರೂಪಿಸಿರುವ ಕಾರ್ಯಕ್ರಮ, ಕರ್ನಾಟಕಕ್ಕೆ ಅಕ್ಕಿ ಕೊಡಿ ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿಲ್ಲ.

ಇದು ರಾಜ್ಯ ಬಿಜೆಪಿ ನಾಯಕರ ನೈಜ ಮುಖ. ಅವರಿಗೆ ಬಡವರಿಗೆ ಅಕ್ಕಿ ನೀಡುವುದಕ್ಕಿಂತ ಅನ್ನಭಾಗ್ಯ ಕಾರ್ಯಕ್ರಮ ಜಾರಿಯಾಗಬಾರದು ಎಂಬುದರಲ್ಲೇ ಹೆಚ್ಚು ಖುಷಿ ಸಿಗುತ್ತದೆ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ನಾನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದೆ, ಮುನಿಯಪ್ಪ ಅವರು ಕೇಂದ್ರ ಸಚಿವ ಪಿಯುಷ್ ಗೋಯಲ್ ಅವರನ್ನು ಭೇಟಿ ಮಾಡಿ ಅಕ್ಕಿ ನೀಡುವಂತೆ ಮನವಿ ಮಾಡಿದ್ದೆವು. ಎನ್.ಸಿ.ಸಿ.ಎಫ್, ನಫೆಟ್ ಹಾಗೂ ಕೇಂದ್ರೀಯ ಭಂಡಾರಗಳನ್ನು ಸಂಪರ್ಕಿಸಿದ್ದೆವು. ಅವರು ಕೂಡ ಹೆಚ್ಚು ಬೆಲೆ ನಮೂದಿಸಿದರು. ಆದ್ದರಿಂದ ನಾವು ಮುಕ್ತ ಮಾರುಕಟ್ಟೆ ಮೂಲಕ ಟೆಂಡರ್ ಕರೆಯಲು ನಿರ್ಧರಿಸಿದ್ದೇವೆ.

ನಾವು ಜುಲೈ ಒಂದರಿಂದ ಬಡವರಿಗೆ 10 ಕೆ.ಜಿ ಆಹಾರಧಾನ್ಯ ನೀಡುತ್ತೇವೆ ಎಂದು ಘೋಷಣೆ ಮಾಡಿದ್ದೆವು. ನಮಗೆ ಹೆಚ್ಚುವರಿಯಾಗಿ 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಅಗತ್ಯವಿದ್ದು ಇಷ್ಟು ಪ್ರಮಾಣದ ಅಕ್ಕಿಯನ್ನು ಬೇರೆ ರಾಜ್ಯಗಳು ನೀಡಲು ಸಿದ್ಧವಿಲ್ಲವರುವುದರಿಂದ ನಾವು ಮುಕ್ತ ಮಾರುಕಟ್ಟೆ ಮೂಲಕ ಟೆಂಡರ್ ಕರೆದು ಅಕ್ಕಿ ಪೂರೈಕೆಯಾಗುವ ವರೆಗೆ 5 ಕೆ.ಜಿ ಅಕ್ಕಿಯ ಬದಲಿಗೆ ಪ್ರತಿ ಕೆ.ಜಿ ಗೆ ರೂ.34 ರಂತೆ ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡುತ್ತೇವೆ.

ನಾವು ನೀಡಿದ್ದ ವಾಗ್ದಾನದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಸರ್ಕಾರದ ನಡೆ ಪಾರದರ್ಶಕವಾಗಿರಲಿ ಎಂದು ಮುಕ್ತ ಮಾರುಕಟ್ಟೆ ಮೂಲಕ ಟೆಂಡರ್ ಕರೆದು ಅಕ್ಕಿ ಖರೀದಿಸಿ ಮುಂದಿನ ದಿನಗಳಲ್ಲಿ ತಲಾ 10 ಕೆ.ಜಿ ಅಕ್ಕಿಯನ್ನು ವಿತರಿಸುತ್ತೇವೆ. ಈ ಪ್ರಕ್ರಿಯೆಗೆ ಕೆಲ ಸಮಯ ಬೇಕಿರುವುದರಿಂದ ಜುಲೈ ಒಂದರಿಂದ ಹೆಚ್ಚುವರಿಯಾಗಿ ನೀಡಲು ಉದ್ದೇಶಿಸಿರುವ 5 ಕೆ.ಜಿ ಅಕ್ಕಿಯ ಬದಲಿಗೆ ತಲಾ ರೂ.170 ನಂತೆ ಹಣ ನೀಡುತ್ತೇವೆ ಎಂದು ತಿಳಿಸಿರುವ ಸಿಎಂ ಸಿದ್ದರಾಮಯ್ಯ.

Ramesh Babu

Journalist

Recent Posts

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

4 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

20 hours ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

20 hours ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

2 days ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

2 days ago