5 ಕೆ.ಜಿ ಅಕ್ಕಿ ಕೊಡಿ, ಉಳಿದ 5 ಕೆ.ಜಿ ಅಕ್ಕಿ ಕೊಡಲು ಆಗದಿದ್ರೆ ಹಣ ಕೊಡಿ ಎಂದು ನಮಗೆ ಬಿಟ್ಟಿ ಉಪದೇಶ ನೀಡುವ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಮುಂತಾದ ಬಿಜೆಪಿ ನಾಯಕರು ಒಂದು ಬಾರಿಯೂ ಇದು ಬಡವರಿಗಾಗಿ ರೂಪಿಸಿರುವ ಕಾರ್ಯಕ್ರಮ, ಕರ್ನಾಟಕಕ್ಕೆ ಅಕ್ಕಿ ಕೊಡಿ ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿಲ್ಲ.
ಇದು ರಾಜ್ಯ ಬಿಜೆಪಿ ನಾಯಕರ ನೈಜ ಮುಖ. ಅವರಿಗೆ ಬಡವರಿಗೆ ಅಕ್ಕಿ ನೀಡುವುದಕ್ಕಿಂತ ಅನ್ನಭಾಗ್ಯ ಕಾರ್ಯಕ್ರಮ ಜಾರಿಯಾಗಬಾರದು ಎಂಬುದರಲ್ಲೇ ಹೆಚ್ಚು ಖುಷಿ ಸಿಗುತ್ತದೆ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ನಾನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದೆ, ಮುನಿಯಪ್ಪ ಅವರು ಕೇಂದ್ರ ಸಚಿವ ಪಿಯುಷ್ ಗೋಯಲ್ ಅವರನ್ನು ಭೇಟಿ ಮಾಡಿ ಅಕ್ಕಿ ನೀಡುವಂತೆ ಮನವಿ ಮಾಡಿದ್ದೆವು. ಎನ್.ಸಿ.ಸಿ.ಎಫ್, ನಫೆಟ್ ಹಾಗೂ ಕೇಂದ್ರೀಯ ಭಂಡಾರಗಳನ್ನು ಸಂಪರ್ಕಿಸಿದ್ದೆವು. ಅವರು ಕೂಡ ಹೆಚ್ಚು ಬೆಲೆ ನಮೂದಿಸಿದರು. ಆದ್ದರಿಂದ ನಾವು ಮುಕ್ತ ಮಾರುಕಟ್ಟೆ ಮೂಲಕ ಟೆಂಡರ್ ಕರೆಯಲು ನಿರ್ಧರಿಸಿದ್ದೇವೆ.
ನಾವು ಜುಲೈ ಒಂದರಿಂದ ಬಡವರಿಗೆ 10 ಕೆ.ಜಿ ಆಹಾರಧಾನ್ಯ ನೀಡುತ್ತೇವೆ ಎಂದು ಘೋಷಣೆ ಮಾಡಿದ್ದೆವು. ನಮಗೆ ಹೆಚ್ಚುವರಿಯಾಗಿ 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಅಗತ್ಯವಿದ್ದು ಇಷ್ಟು ಪ್ರಮಾಣದ ಅಕ್ಕಿಯನ್ನು ಬೇರೆ ರಾಜ್ಯಗಳು ನೀಡಲು ಸಿದ್ಧವಿಲ್ಲವರುವುದರಿಂದ ನಾವು ಮುಕ್ತ ಮಾರುಕಟ್ಟೆ ಮೂಲಕ ಟೆಂಡರ್ ಕರೆದು ಅಕ್ಕಿ ಪೂರೈಕೆಯಾಗುವ ವರೆಗೆ 5 ಕೆ.ಜಿ ಅಕ್ಕಿಯ ಬದಲಿಗೆ ಪ್ರತಿ ಕೆ.ಜಿ ಗೆ ರೂ.34 ರಂತೆ ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡುತ್ತೇವೆ.
ನಾವು ನೀಡಿದ್ದ ವಾಗ್ದಾನದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಸರ್ಕಾರದ ನಡೆ ಪಾರದರ್ಶಕವಾಗಿರಲಿ ಎಂದು ಮುಕ್ತ ಮಾರುಕಟ್ಟೆ ಮೂಲಕ ಟೆಂಡರ್ ಕರೆದು ಅಕ್ಕಿ ಖರೀದಿಸಿ ಮುಂದಿನ ದಿನಗಳಲ್ಲಿ ತಲಾ 10 ಕೆ.ಜಿ ಅಕ್ಕಿಯನ್ನು ವಿತರಿಸುತ್ತೇವೆ. ಈ ಪ್ರಕ್ರಿಯೆಗೆ ಕೆಲ ಸಮಯ ಬೇಕಿರುವುದರಿಂದ ಜುಲೈ ಒಂದರಿಂದ ಹೆಚ್ಚುವರಿಯಾಗಿ ನೀಡಲು ಉದ್ದೇಶಿಸಿರುವ 5 ಕೆ.ಜಿ ಅಕ್ಕಿಯ ಬದಲಿಗೆ ತಲಾ ರೂ.170 ನಂತೆ ಹಣ ನೀಡುತ್ತೇವೆ ಎಂದು ತಿಳಿಸಿರುವ ಸಿಎಂ ಸಿದ್ದರಾಮಯ್ಯ.
ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಡೆದ ಜೆಡಿಎಸ್…
ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…
Das Schreiben einer Facharbeit stellt für viele Schüler und Studenten eine große Herausforderung dar. Der…
ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…
ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…