Categories: ರಾಜ್ಯ

ಕರ್ನಾಟಕಕ್ಕೆ ಅಕ್ಕಿ ಕೊಡಿ ಎಂದು ಕೇಂದ್ರಕ್ಕೆ ಒತ್ತಾಯಿಸದ ರಾಜ್ಯ ಬಿಜೆಪಿ- ಅಕ್ಕಿ ಕೊಡಲು ಆಗದಿದ್ದರೆ ಹಣ ಕೊಡಿ‌ ಎಂದು ನಮಗೆ ಬಿಟ್ಟಿ ಉಪದೇಶ ನೀಡುವ ಜಿಜೆಪಿ ನಾಯಕರು; ಇದು ಅವರ ನೈಜ ಮುಖ; ಸಿಎಂ‌ ಸಿದ್ದರಾಮಯ್ಯ ಕಿಡಿ

5 ಕೆ.ಜಿ ಅಕ್ಕಿ ಕೊಡಿ, ಉಳಿದ 5 ಕೆ.ಜಿ ಅಕ್ಕಿ ಕೊಡಲು ಆಗದಿದ್ರೆ ಹಣ ಕೊಡಿ ಎಂದು ನಮಗೆ ಬಿಟ್ಟಿ ಉಪದೇಶ ನೀಡುವ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಮುಂತಾದ ಬಿಜೆಪಿ ನಾಯಕರು ಒಂದು ಬಾರಿಯೂ ಇದು ಬಡವರಿಗಾಗಿ ರೂಪಿಸಿರುವ ಕಾರ್ಯಕ್ರಮ, ಕರ್ನಾಟಕಕ್ಕೆ ಅಕ್ಕಿ ಕೊಡಿ ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿಲ್ಲ.

ಇದು ರಾಜ್ಯ ಬಿಜೆಪಿ ನಾಯಕರ ನೈಜ ಮುಖ. ಅವರಿಗೆ ಬಡವರಿಗೆ ಅಕ್ಕಿ ನೀಡುವುದಕ್ಕಿಂತ ಅನ್ನಭಾಗ್ಯ ಕಾರ್ಯಕ್ರಮ ಜಾರಿಯಾಗಬಾರದು ಎಂಬುದರಲ್ಲೇ ಹೆಚ್ಚು ಖುಷಿ ಸಿಗುತ್ತದೆ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ನಾನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದೆ, ಮುನಿಯಪ್ಪ ಅವರು ಕೇಂದ್ರ ಸಚಿವ ಪಿಯುಷ್ ಗೋಯಲ್ ಅವರನ್ನು ಭೇಟಿ ಮಾಡಿ ಅಕ್ಕಿ ನೀಡುವಂತೆ ಮನವಿ ಮಾಡಿದ್ದೆವು. ಎನ್.ಸಿ.ಸಿ.ಎಫ್, ನಫೆಟ್ ಹಾಗೂ ಕೇಂದ್ರೀಯ ಭಂಡಾರಗಳನ್ನು ಸಂಪರ್ಕಿಸಿದ್ದೆವು. ಅವರು ಕೂಡ ಹೆಚ್ಚು ಬೆಲೆ ನಮೂದಿಸಿದರು. ಆದ್ದರಿಂದ ನಾವು ಮುಕ್ತ ಮಾರುಕಟ್ಟೆ ಮೂಲಕ ಟೆಂಡರ್ ಕರೆಯಲು ನಿರ್ಧರಿಸಿದ್ದೇವೆ.

ನಾವು ಜುಲೈ ಒಂದರಿಂದ ಬಡವರಿಗೆ 10 ಕೆ.ಜಿ ಆಹಾರಧಾನ್ಯ ನೀಡುತ್ತೇವೆ ಎಂದು ಘೋಷಣೆ ಮಾಡಿದ್ದೆವು. ನಮಗೆ ಹೆಚ್ಚುವರಿಯಾಗಿ 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಅಗತ್ಯವಿದ್ದು ಇಷ್ಟು ಪ್ರಮಾಣದ ಅಕ್ಕಿಯನ್ನು ಬೇರೆ ರಾಜ್ಯಗಳು ನೀಡಲು ಸಿದ್ಧವಿಲ್ಲವರುವುದರಿಂದ ನಾವು ಮುಕ್ತ ಮಾರುಕಟ್ಟೆ ಮೂಲಕ ಟೆಂಡರ್ ಕರೆದು ಅಕ್ಕಿ ಪೂರೈಕೆಯಾಗುವ ವರೆಗೆ 5 ಕೆ.ಜಿ ಅಕ್ಕಿಯ ಬದಲಿಗೆ ಪ್ರತಿ ಕೆ.ಜಿ ಗೆ ರೂ.34 ರಂತೆ ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡುತ್ತೇವೆ.

ನಾವು ನೀಡಿದ್ದ ವಾಗ್ದಾನದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಸರ್ಕಾರದ ನಡೆ ಪಾರದರ್ಶಕವಾಗಿರಲಿ ಎಂದು ಮುಕ್ತ ಮಾರುಕಟ್ಟೆ ಮೂಲಕ ಟೆಂಡರ್ ಕರೆದು ಅಕ್ಕಿ ಖರೀದಿಸಿ ಮುಂದಿನ ದಿನಗಳಲ್ಲಿ ತಲಾ 10 ಕೆ.ಜಿ ಅಕ್ಕಿಯನ್ನು ವಿತರಿಸುತ್ತೇವೆ. ಈ ಪ್ರಕ್ರಿಯೆಗೆ ಕೆಲ ಸಮಯ ಬೇಕಿರುವುದರಿಂದ ಜುಲೈ ಒಂದರಿಂದ ಹೆಚ್ಚುವರಿಯಾಗಿ ನೀಡಲು ಉದ್ದೇಶಿಸಿರುವ 5 ಕೆ.ಜಿ ಅಕ್ಕಿಯ ಬದಲಿಗೆ ತಲಾ ರೂ.170 ನಂತೆ ಹಣ ನೀಡುತ್ತೇವೆ ಎಂದು ತಿಳಿಸಿರುವ ಸಿಎಂ ಸಿದ್ದರಾಮಯ್ಯ.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

9 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

13 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

1 day ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago